ತುಮಕೂರು: ನ್ಯಾಯ ಕೊಡಿಸಬೇಕಾದ ಪೊಲೀಸ್ನಿಂದಲೇ ಮಹಿಳೆಯೊಬ್ಬಳು ಅನ್ಯಾಯಕ್ಕೊಳಗಾಗಿದ್ದು ಅತಂತ್ರಳಾಗಿರುವ ಘಟನೆ ಕುಣಿಗಲ್ ತಾಲೂಕಿನ ಅಮೃತೂರು ಠಾಣೆಯಲ್ಲಿ ನಡೆದಿದೆ.
ಪ್ರೀತಿಸಿ ಮದುವೆಯಾಗಿ ಈಗ ಬೇರೊಂದು ಮದುವೆಯಾಗಲು ಹೊರಟಿರುವ ಪೊಲೀಸರ ವಿರುದ್ಧ ಅದೇ ಠಾಣೆಯ ಮಹಿಳಾ ಪೊಲೀಸ್ ನ್ಯಾಯಾಕ್ಕಾಗಿ ಮೇಲಧಿಕಾರಿಗಳ ಮೊರೆ ಹೋಗಿದ್ದಾರೆ. ಕುಣಿಗಲ್ ತಾಲೂಕಿನ ಅಮೃತೂರು ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಭಗವಂತರಾಯ್ ಬಿರಾದರ್ ಅದೇ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯನ್ನು ಸುಮಾರು ೪-೫ ವರ್ಷದಿಂದ ಪ್ರೀತಿಸಿ ಮದುವೆಯಾಗಿದ್ದು ಇದೀಗ ಬೇರೊಂದು ಮದುವೆಯಾಗಲು ಹೊರಟಿದ್ದಾರೆ. ಮಹಿಳಾ ಸಿಬ್ಬಂದಿ ಕೊಪ್ಪಳ ಮೂಲದವರಾಗಿದ್ದು ಅಲ್ಲಿನ ಸಖಿ ಒನ್ ಸ್ಟಾಪ್ ಕೇಂದ್ರಕ್ಕೆ ತೆರಳಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಮಹಿಳೆಯ ಮನವಿ ಮೇರೆಗೆ ಸಖಿ ಒನ್ ಸ್ಟಾಪ್ ಕೇಂದ್ರದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಭಗವಂತ್ರಾಯ್ಗೆ ನೋಟಿಸ್ ನೀಡಿದ್ದಾರೆ.