Home Advertisement
Home ತಾಜಾ ಸುದ್ದಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

0
272

ನವದೆಹಲಿ: ಅಕ್ರಮ ಗಣಿಗಾರಿಕೆಯ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ.
ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ. ಶ್ರೀನಿವಾಸರೆಡ್ಡಿ ಮತ್ತು ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು ಪ್ರಕಟಿಸಿದೆ. ಹಲವು ಸೆಕ್ಷನ್‌ಗಳ ಅಡಿಯಲ್ಲಿ ರೆಡ್ಡಿ ಸೇರಿದಂತೆ ನಾಲ್ವರನ್ನು ದೋಷಿಗಳೆಂದು ಘೋಷಿಸಲಾಗಿದೆ.
ಹೈದರಾಬಾದ್‌ನ ನಾಮಪಲ್ಲಿಯಲ್ಲಿರೋ ಸಿಬಿಐ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಅಕ್ರಮ ಗಣಿಗಾರಿಕೆ ಗಡಿ ಒತ್ತುವರಿ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.