ಬಾಗಲಕೋಟೆ: ನಗರದ ಹೊರವಲಯ ಸೀಮಿಕೇರಿ ಬೈಪಾಸ್ನಲ್ಲಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಸಿದ್ದು, ಸಂತೋಷ, ಕಾಮಣ್ಣ ಎಂದು ಗುರುತಿಸಲಾಗಿದೆ. ಲಾರಿಗೆ ಢಿಕ್ಕಿ ಹೊಡೆದು ಮೃತಪಟ್ಟಿದ್ದು , ಮೂವರು ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.