ಧಾರವಾಡ: ಐದು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ಗಳಿಗೆ ನೂತನ ಪದಾಧಿಕಾರಿಗಳ ನೇಮಕ

0
60

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಧಾರವಾಡ ಜಿಲ್ಲೆಯ ಐದು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ಗಳಿಗೆ ಹೊಸದಾಗಿ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ.

ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾಗಿ ಪಂ. ಎಂ. ವೆಂಕಟೇಶಕುಮಾರ, ಸದಸ್ಯರಾಗಿ ಡಾ. ಶಕ್ತಿ ಪಾಟೀಲ, ಉಸ್ತಾದ ಶಫೀಕ್ ಖಾನ್, ಡಾ. ಪರಶುರಾಮ ಕಟ್ಟಿ ಸಂಗಾವಿ, ಡಾ. ಚಂದ್ರಿಕಾ ಕಾಮತ್, ಯಾದವೇಂದ್ರ ಪೂಜಾರ, ಅಕ್ಕಮಹಾದೇವಿ ಆಲೂರ, ಗುರುಪ್ರಸಾದ ಹೆಗಡೆ ಅವರನ್ನು ನೇಮಿಸಲಾಗಿದೆ.

ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾಗಿ ಡಾ. ಸರಜೂ ಕಾಟ್ಕರ್, ಸದಸ್ಯರಾಗಿ ಡಾ. ವೈ.ಎಂ. ಯಾಕೊಳ್ಳಿ, ಡಾ. ಅಶೋಕ ಶೆಟ್ಟರ, ಶೀಲಾಧರ ಮುಗಳಿ, ಡಾ. ಶರಣಮ್ಮ ಗೋರೆಬಾಳ, ಪ್ರಭು ಕುಂದರಗಿ, ಪುನರ್ವಸು ಬೇಂದ್ರೆ, ಇಮಾಮಸಾಬ ವಲ್ಲೆಪ್ಪನವರ ಅವರನ್ನು ನೇಮಿಸಲಾಗಿದೆ.

ಸ್ವರ ಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ಗೆ ಅಧ್ಯಕ್ಷರಾಗಿ ಪಂ. ಕೈವಲ್ಯಕುಮಾರ ಗುರವ, ಸದಸ್ಯರಾಗಿ ಪಂ. ಸಾತಲಿಂಗಪ್ಪ ಕಲ್ಲೂರ ದೇಸಾಯಿ, ನಿಜಗುಣಿ ರಾಜಗುರು, ಛೋಟಿ ರಹಿಮತ್ ಖಾನ್, ಡಾ. ಅಶೋಕ ಹುಗ್ಗಣ್ಣವರ, ಡಾ. ಅನಿಲ ಮೇತ್ರಿ, ಅಲ್ಲಮಪ್ರಭು ಕಡಕೋಳ, ಸುಪ್ರಿಯಾ ಭಟ್ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ಗೆ ಅಧ್ಯಕ್ಷರನ್ನಾಗಿ ಡಾ. ರಂಜಾನ ದರ್ಗಾ, ಸದಸ್ಯರಾಗಿ ಡಾ. ದೀಪಕ ಆಲೂರು, ವಿಶ್ವನಾಥ ಕುಲಕರ್ಣಿ, ಡಾ. ಸಿ.ಯು. ಬೆಳ್ಳಕ್ಕಿ, ಡಾ. ಪ್ರಕಾಶ ಉಡಕೇರಿ, ದ್ರೌಪದಿ ವಿಜಾಪುರ, ಬಸವರಾಜ ಸೂಳಿಭಾವಿ, ಸುನಂದಾ ಕಡಮೆ ಇವರನ್ನು ನೇಮಿಸಲಾಗಿದೆ.

ಚಿತ್ರಕಲಾ ಶಿಲ್ಪಿ ಡಿ.ವಿ, ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ಗೆ ಅಧ್ಯಕ್ಷರಾಗಿ ಬಿ. ಮಾರುತಿ, ಸದಸ್ಯರಾಗಿ ಸುರೇಶ ಹಾಲಭಾವಿ, ಎಫ್.ವಿ. ಚಿಕ್ಕಮಠ, ಡಿ.ಎಂ. ಬಡಿಗೇರ, ಡಾ. ಬಿ.ಎಲ್. ಚವ್ಹಾಣ, ಡಾ. ಬಿ.ಎಚ್. ಕುರಿಯವರ, ಎಸ್.ಕೆ. ಪತ್ತಾರ, ರೇಣುಕಾ ಮಾರ್ಕಂಡಯ್ಯ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.

Previous articleಉತ್ತರ ಕನ್ನಡ: ಭರ್ತಿಯಾಗುತ್ತಿರುವ ಸೂಪಾ ಜಲಾಶಯ, ನದಿ ಪಾತ್ರದ ಜನರಿಗೆ ಎಚ್ಚರಿಕೆ
Next articleSU From SO: ʻಸು ಫ್ರಮ್ ಸೋ’ ಓಟಿಟಿ ಹಕ್ಕುಗಳ ಮಾರಾಟ

LEAVE A REPLY

Please enter your comment!
Please enter your name here