SK Home Ad
Home ಸುದ್ದಿ ರಾಜ್ಯ ಇಫ್ತಾರ್‌ಕೂಟಕ್ಕೆ ಸಿದ್ದರಾಮಯ್ಯ ಟೋಪಿ ಧರಿಸಿ ಹೋಗುವುದಿಲ್ಲವೇ? ಸಿಎಂಗೆ ಜೋಶಿ ಪ್ರಶ್ನೆ

ಇಫ್ತಾರ್‌ಕೂಟಕ್ಕೆ ಸಿದ್ದರಾಮಯ್ಯ ಟೋಪಿ ಧರಿಸಿ ಹೋಗುವುದಿಲ್ಲವೇ? ಸಿಎಂಗೆ ಜೋಶಿ ಪ್ರಶ್ನೆ

0
347

ನವದೆಹಲಿ: ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಫ್ತಾರ್‌ಕೂಟಕ್ಕೆ ಆಹ್ವಾನ ಬಂದರೆ ತಲೆಗೆ ಮುಸ್ಲಿಂ ಟೋಪಿ ಧರಿಸಿ, ಭುಜಕ್ಕೆ ಕಲರ್ ಕಲರ್ ಚೆಕ್ಸ್‌ ಶಾಲೂ ಹೊದಿಸಿಕೊಂಡು ಹೋಗುತ್ತಾರಲ್ಲವೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.

ʼನಾಡ ಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಹಣೆಯಲ್ಲಿ ಕುಂಕುಮ ಹಚ್ಚಿ ಬರಬೇಕಿಲ್ಲʼ ಎಂದಿರುವ ಸಿಎಂ ಹೇಳಿಕೆಗೆ ಸಚಿವ ಜೋಶಿ ಹೀಗೆ ತಿರುಗೇಟು ಕೊಟ್ಟಿದ್ದಾರೆ. ಅತೀವ್ರ ತುಷ್ಟೀಕರಣದಲ್ಲಿ ತೊಡಗಿರುವ, ನಾನೂ ಹಿಂದೂ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಹಿಂದೂ ಧಾರ್ಮಿಕತೆಯ ಬಗ್ಗೆ ಏನು ಗೊತ್ತಿದೆ? ಎಂದು ಚಾಟಿ ಬೀಸಿದ್ದಾರೆ.

ʼನಾಡಹಬ್ಬ ದಸರಾ ಉದ್ಘಾಟನೆ ಮಾಡುವ ವ್ಯಕ್ತಿಗೆ ಹಣೆಯಲ್ಲಿ ಕುಂಕುಮ ಇಡಬೇಕೆಂಬ ಫತ್ವಾ ಹೊರಡಿಸಲು ನಿಮ್ಮಿಂದ ಸಾಧ್ಯವಿಲ್ಲ ಬಿಡಿʼ ಎಂದು ಸಿಎಂಗೆ ಮಾತಿನಲ್ಲೇ ತಿವಿದಿರುವ ಸಚಿವರು, ಹಣೆಗೆ ಕುಂಕುಮ ಧರಿಸಬಾರದೆಂಬ ಫತ್ವಾ ಬಾನು ಮುಷ್ತಾಕ್‌ ಅವರ ಧರ್ಮದಲ್ಲಿಯೇ ಹೊರಡಿಸಲಾಗಿದೆಯಲ್ಲಾ. ಹಾಗಿರುವಾಗ ʼಹಣೆಯಲ್ಲಿ ಕುಂಕುಮ ಹಚ್ಚಿ ಬರಬೇಕಿಲ್ಲʼ ಎಂಬ ನಿಮ್ಮ ಹೇಳಿಕೆಯೇ ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ.

ಹಿಂದೂ ದೇವತೆಗಳ ಬಗ್ಗೆ ಗೌರವ, ಆಚಾರ-ವಿಚಾರ ಇಲ್ಲದವರಿಗಿಂತ ನಿಮ್ಮ ವಿಭಿನ್ನ ವಿಚಾರಗಳನ್ನು ಪಾಲಿಸಿದರೆ ಸಾಕು. ಹೆಚ್ಚಾಗಿ ಇಫ್ತಾರ್ ಕೂಟ‌ಕ್ಕೆ ಆಹ್ವಾನ ಬರುತ್ತದೆ. ಆಗ ತಲೆಗೆ ಮುಸ್ಲಿಂ ಟೋಪಿ ಧರಿಸಿ, ಭುಜಕ್ಕೆ ಕಲರ್ ಕಲರ್ ಚೆಕ್ಸ್‌ ಶಾಲೂ ಹೊದಿಸಿಯೇ ಹೋಗಬೇಕು ಅಲ್ಲವೇ? ಹಾಗಿರುವಾಗ ಹಿಂದೂ ಒಂದು ಹಿಂದೂ ಹಬ್ಬದ ಉದ್ಘಾಟನೆಗೆ ʼಕುಂಕುಮ ಧರಿಸಿ ಬರಬೇಕಿಲ್ಲʼ ಎಂಬ ಸಿಎಂ ಹೇಳಿಕೆ ಎಷ್ಟರ ಮಟ್ಟಿಗೆ ಸರಿ ಎಂದು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here