MNREGA ಪುನಃ ಸ್ಥಾಪನೆಯಾಗುವವರೆಗೆ ಹೋರಾಟಕ್ಕೆ ಸಜ್ಜಾಗಿ

0
32

ಮೈಸೂರು: ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನಃ ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಗಳಾಗಿದ್ದಾಗ ಈ ಕಾನೂನು ಜಾರಿ ಮಾಡಿದರು. ಕೆಲಸದ ಹಕ್ಕು ಕೊಟ್ಟರು. ಅದನ್ನು ಕಿತ್ತು ಹಾಕುತ್ತಿದ್ದಾರೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿದೆ. ವಿಬಿಜಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ

MNREGA ಯೋಜನೆ ಮುಂದುವರೆಸಲು ಹೋರಾಟ: ಕೇಂದ್ರ ಸರ್ಕಾರ ಇತೀಚೆಗೆ MNREGA ಬದಲಿಗೆ ವಿಬಿಜಿ ಗ್ರಾಮ್ ಜಿ ಎಂಬ ಕಾಯ್ದೆ ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ನರೇಗಾ ಯೋಜನೆ ಇರುವುದಿಲ್ಲ. ನಮ್ಮ ಸರ್ಕಾರ MNREGA ಯೋಜನೆಯನ್ನು ಮುಂದುವರೆಸಲು ಹೋರಾಡುತ್ತಿದೆ. ದಲಿತರಿಗೆ, ಹೆಣ್ಣುಮಕ್ಕಳಿಗೆ ಮೂರು ದಿನ ಕೆಲಸ ಕೊಡುವ ಕಾಯ್ದೆ. ಅದು ಸಂವಿಧಾನದ ಹಕ್ಕು. ಅದನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂಬ ಒತ್ತಡವನ್ನು ಹಾಕಲಾಗುತ್ತಿದೆ ಎಂದರು.

ವರುಣಾ ಕ್ಷೇತ್ರದಲ್ಲಿ 1,932 ಕೋಟಿ ರೂ.ಗಳ ಕಾಮಗಾರಿ: ಕುಪ್ಯಾ ಗ್ರಾಮದಲ್ಲಿ ಸುಮಾರು 323 ಕೋಟಿ ರೂ.ಗಳ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ನಂತರ ಮೂರು ಬಾರಿ ವರುಣಾ ಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 2024 ಅಕ್ಟೋಬರ್‌ 22ರಲ್ಲಿ 501 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ನಂತರ ಅಗಸ್ಟ್‌ 9, 2025ರಂದು 1108 ಕೋಟಿ ರೂ. ಗಳ ಕಾರ್ಯಕ್ರಮ. ಮತ್ತು ಇಂದು 323 ಕೋಟಿ ಸೇರಿದಂತೆ ಒಟ್ಟು 1,932 ಕೋಟಿ ರೂ.ಗಳ ಕಾಮಗಾರಿಗಳಿಗೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ. 1,500ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೆರವೇರಿಸಿದೆ. ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ ಎಂದರು.

ಇದನ್ನೂ ಓದಿ: ನಾನು ಮುಂದಿನ ಚುನಾವಣೆಯ ಸಿಎಂ ಆಕಾಂಕ್ಷಿ

ಮೈಸೂರು ಜಿಲ್ಲೆಯಲ್ಲಿ 10 ಸಾವಿರ ಕೋಟಿ ರೂ.ಗಳ ಅಭಿವೃದ್ಧಿ: ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1,932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ. ಖಜಾನೆ ಖಾಲಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಸುಮಾರು 10 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ಕೈಗೊಂಡಿದೆ. 1,15,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

Previous articleನಾನು ಮುಂದಿನ ಚುನಾವಣೆಯ ಸಿಎಂ ಆಕಾಂಕ್ಷಿ