ಬಾಗಲಕೋಟೆ: ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮ ಬಳಿಯ ಇಟ್ಟಿಗೆ ಬಟ್ಟಿಯೊಂದರಲ್ಲಿ ಜೀತಕ್ಕಿದ್ದ ಐವರು ಬಾಲ ಕಾರ್ಮಿಕರೂ ಸೇರಿದಂತೆ 24 ಜನರನ್ನು ರಕ್ಷಿಸಲಾಗಿದೆ.
ಈ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ತಹಶೀಲ್ದಾರ್ ಅಮರೇಶ ಪಮ್ಮಾರ ನೇತೃತ್ವದ ತಂಡ ಕಾರ್ಮಿಕರನ್ನು ರಕ್ಷಿಸಿದೆ. ಈ ಸಂಬಂಧ ಇಟ್ಟಿಗೆ ಬಟ್ಟಿ ಮಾಲೀಕ ಈರಪ್ಪ ಕುಂಬಾರ ಎಂಬಾತನ ಮೇಲೆ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ, ಜೀತ ಪದ್ಧತಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಪ್ರೇಮಿಗಳ ದಿನಾಚರಣೆಗೂ ಮುನ್ನ 40 ವೀರಯೋಧರ ಪ್ರಾಣತ್ಯಾಗ ಮರೆಯದಿರಿ; ಜೈ ಜವಾನ್!
ಓಡಿಸ್ಸಾದಿಂದ ಕಾರ್ಮಿಕರಿಗೆ ಮುಂಗಡ ಹಣ ನೀಡಿ ಕರೆತರಲಾಗಿತ್ತು. ವಾರಕ್ಕೆ 400 ರೂ. ಗಳಂತೆ ಕೂಲಿ ನೀಡಲಾಗುತಿತ್ತು. ಕನಿಷ್ಠ ಮೂಲಸೌಕರ್ಯಗಳನ್ನೂ ನೀಡದೆ ಇಟ್ಟಿಗೆ ಬಟ್ಟಿಯಲ್ಲಿ ಶೋಷಣೆ ಮಾಡಲಾಗುತಿತ್ತು ಎಂದು ಆರೋಪಿಸಲಾಗಿದೆ. ಕಾರ್ಮಿಕರನ್ನು ತಮ್ಮ ಸ್ವರಾಜ್ಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.























