ಜಾರ್ಖಂಡ್: ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಆಂಬ್ಯುಲೆನ್ಸ್ ಪತನಗೊಂಡ ಘಟನೆ ಜಾರ್ಖಂಡ್ನ ಛತ್ರ ಜಿಲ್ಲೆಯಲ್ಲಿ ನಡೆದಿದೆ.
ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವೈದ್ಯರು, ನರ್ಸ್ಗಳು ಸೇರಿ ವಿಮಾನದಲ್ಲಿ ಒಟ್ಟು ಏಳು ಜನರು ಪ್ರಯಾಣಿಸುತ್ತಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು 41 ವರ್ಷದ ಸಂಜಯ್ ಕುಮಾರ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ವೈದ್ಯಕೀಯ ಸೇವೆ ಬಂದ್: 2 ಹಂತದ ಮುಷ್ಕರ ಘೋಷಣೆ
ಔಜಿಲ್ಲಾಡಳಿತದ ಶೋಧ ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿದೆ. ಎಎಐಬಿ ತಂಡವನ್ನು ತನಿಖೆಗಾಗಿ ಕಳುಹಿಸಲಾಗುತ್ತಿದೆ ಎಂದು ಡಿಜಿಸಿಎ ತಿಳಿಸಿದೆ.





















