16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Karnataka Budget 2026–27 ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಘೋಷಣೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಒಟ್ಟು 800 “ಕರ್ನಾಟಕ ಪಬ್ಲಿಕ್ ಶಾಲೆ”ಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ₹2,900 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
ಈ ಯೋಜನೆಯ ಮುಖ್ಯ ಉದ್ದೇಶ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದಾಗಿದೆ. ಸರ್ಕಾರಿ ಶಾಲೆಗಳ ಮೂಲಸೌಕರ್ಯವನ್ನು ಸುಧಾರಿಸಿ, ಖಾಸಗಿ ಶಾಲೆಗಳ ಮಟ್ಟದ ಶಿಕ್ಷಣವನ್ನು ಸರ್ಕಾರಿ ವ್ಯವಸ್ಥೆಯಲ್ಲಿಯೇ ಲಭ್ಯವಾಗುವಂತೆ ಮಾಡುವತ್ತ ಸರ್ಕಾರ ಮುಂದಾಗಿದೆ.
ಶಿಕ್ಷಣ ವ್ಯವಸ್ಥೆಗೆ ಹೊಸ ಬಲ: ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆಯ ಮೂಲಕ ಪ್ರೀ-ಪ್ರೈಮರಿ ರಿಂದ ಪದವಿ ಪೂರ್ವದವರೆಗೆ ಸಮಗ್ರ ಶಿಕ್ಷಣ ವ್ಯವಸ್ಥೆ ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಶಾಲೆಗಳಲ್ಲಿ ಆಧುನಿಕ ತರಗತಿ ಕೊಠಡಿಗಳು, ಡಿಜಿಟಲ್ ಕಲಿಕಾ ವ್ಯವಸ್ಥೆ, ವಿಜ್ಞಾನ ಪ್ರಯೋಗಾಲಯಗಳು, ಗ್ರಂಥಾಲಯ, ಕ್ರೀಡಾ ಸೌಲಭ್ಯಗಳು, ಹೀಗೆ ಹಲವು ಸೌಲಭ್ಯಗಳನ್ನು ಒದಗಿಸಲು ಯೋಜಿಸಲಾಗಿದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ: ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಬಜೆಟ್ನಲ್ಲಿ ಘೋಷಣೆ
ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶ: ಈ ಯೋಜನೆಯ ಮೂಲಕ ವಿಶೇಷವಾಗಿ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಹೆಚ್ಚಲಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೂ ಇದು ನೆರವಾಗಲಿದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶ: ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಹೋಗುವ ಪ್ರವೃತ್ತಿಯನ್ನು ಕಡಿಮೆ ಮಾಡುವ ಉದ್ದೇಶವೂ ಸರ್ಕಾರ ಹೊಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ತರಬೇತಿ, ಸ್ಮಾರ್ಟ್ ತರಗತಿಗಳು ಹಾಗೂ ಆಧುನಿಕ ಶಿಕ್ಷಣ ಪದ್ಧತಿಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಜಾರಿಗೆ ತರಲು ಯೋಜಿಸಲಾಗಿದೆ.
ಬಜೆಟ್ನಲ್ಲಿ ಶಿಕ್ಷಣಕ್ಕೆ ಒತ್ತು: ಈ ವರ್ಷದ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹೊಸ ಶಾಲೆಗಳ ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸುವತ್ತ ಸರ್ಕಾರ ಗಮನ ಹರಿಸಿದೆ.
“ಕರ್ನಾಟಕ ಬಜೆಟ್ 2026 ಕುರಿತ ಇನ್ನಷ್ಟು ಪ್ರಮುಖ ಘೋಷಣೆಗಳ ಅಪಡೆಟ್ಗಾಗಿ ನಮ್ಮೊಂದಿಗೆ ಮುಂದುವರಿಯಿರಿ.”




















