Home Advertisement
Home ಸುದ್ದಿ ರಾಜ್ಯ ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ?: ಸಿಎಂ ಬೊಮ್ಮಾಯಿ ಪ್ರಶ್ನೆ

ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ?: ಸಿಎಂ ಬೊಮ್ಮಾಯಿ ಪ್ರಶ್ನೆ

0
200
CM Bommai

ಮುಖ್ಯಮಂತ್ರಿ ಸೇರಿದಂತೆ ಸಚಿವರೆಲ್ಲರೂ ಭ್ರಷ್ಟರು ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ? ಎಂದು ಪ್ರಶ್ನಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಹಿಂದೆ ಭ್ರಷ್ಟಾಚಾರ ಆಗಿತ್ತು ಅಂತಾರೆ. ಹಾಗಾದರೆ ಇಷ್ಟು ದಿನ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಇದ್ರಾ?. ಸುಮ್ನೆ ರಾಜಕೀಯ ಆರೋಪ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ. ಕೆಂಪಣ್ಣ ಒಂದು ವರ್ಷದಿಂದ ಆರೋಪ ಮಾಡುತ್ತಿದ್ದಾರೆ. ಆದರೆ, ಯಾವೊಬ್ಬ ಸಚಿವರ ಹೆಸರನ್ನು ಹೇಳಿರಲಿಲ್ಲ. ಈಗ ಮುನಿರತ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಕೇವಲ ಆರೋಪ ಮಾಡಿವುದಲ್ಲ. ದಾಖಲೆಗಳನ್ನು ನೀಡಲಿ ಎಂದು ಹೇಳಿದರು.