Home Advertisement
Home ನಮ್ಮ ಜಿಲ್ಲೆ ದಾವಣಗೆರೆ ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ

0
51

ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀಯವರನ್ನು ಉಚ್ಚಾಟಿಸಲಾಗಿದೆ.

ಹನಗವಾಡಿ ಬಳಿಯ ಗುರಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ 12 ಜನ ಧರ್ಮದರ್ಶಿಗಳಿಂದ ಅಂತಿಮ ತೀರ್ಮಾನ ಕೈಗೊಳ್ಳಲಾಗಿದ್ದು, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಅವರನ್ನು ಪದಚ್ಯುತಿ ಮಾಡಿರುವ ಬಗ್ಗೆ ಹರಿಹರ ಪಂಚಮಸಾಲಿ ಪೀಠದ ಧರ್ಮದರ್ಶಿ ಬಸವರಾಜ ದಿಂಡೂರ ಮಾಹಿತಿ ನೀಡಿದ್ದಾರೆ.

ಶ್ವಾಸಪೀಠ ಅಥವಾ ಹರಿಹರ ಪಂಚಮಸಾಲಿ ಪೀಠದ ಇವುಗಳ ಪೈಕಿ ಒಂದನ್ನು ಮಾತ್ರ ಆಯ್ಕೆ ಮಾಡುವಂತೆ ವಚನಾನಂದ ಶ್ರೀಗಳಿಗೆ ಮೊದಲೇ ಹೇಳಲಾಗಿತ್ತು. ಆದರೆ, ಶ್ರೀಗಳು ಇದರ ವಿರುದ್ಧವಾಗಿ ನಡೆದುಕೊಂಡಿದ್ದರಿಂದಾಗಿ ಅವರನ್ನು ಪದಚ್ಯುತಿ ಮಾಡಲಾಗಿದೆ ಎಂದು ದಿಂಡೂರ ತಿಳಿಸಿದ್ದಾರೆ.