Home Advertisement
Home ಸುದ್ದಿ ರಾಜ್ಯ ಯೋಗೀಶ್‌ಗೌಡ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು

ಯೋಗೀಶ್‌ಗೌಡ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು

0
20

ಬೆಂಗಳೂರು: ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ವಿಧಾನಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಜನಪ್ರತಿನಿಧಿಗಳ ಕಾಯ್ದೆ 1951ರ ಸೆಕ್ಷನ್ 8 ಮತ್ತು ಭಾರತ ಸಂವಿಧಾನದ 191(1)(e) ವಿಧಿಯ ನಿಬಂಧನೆಗಳ ಪ್ರಕಾರ ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ, ಅವರಿಗೆ ನ್ಯಾಯಾಲಯವು ಕನಿಷ್ಠ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆ ವಿಧಿಸಿದರೆ, ತಕ್ಷಣವೇ ಶಾಸಕ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಬಳಿಕ ಅವರ ಬಿಡುಗಡೆಯ ನಂತರ ಆರು ವರ್ಷಗಳ ಅವಧಿಗೆ ಮುಂದುವರಿಯುತ್ತದೆ. ಅಲ್ಲಿಯವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಇಲ್ಲ ಎಂದೂ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಈ ಮೂಲಕ ಕರ್ನಾಟಕ ವಿಧಾನಸಭೆಯಲ್ಲಿ ಒಂದು ಶಾಸಕ ಸ್ಥಾನ ತೆರವಾಗಿದಂತಾಗಿದೆ. ರಾಜ್ಯದಲ್ಲಿ ಖಾಲಿಯಿದ್ದ ಎರಡು ವಿಧಾನಸಭೆ ಸ್ಥಾನಗಳಿಗೆ ಎಪ್ರಿಲ್‌ 9 ರಂದು ಚುನಾವಣೆ ನಡೆದಿದ್ದು, ಮೇ 4ರಂದು ಫಲಿತಾಂಶ ಹೊರಬರಲಿದೆ.