Home Advertisement
Home ನಮ್ಮ ಜಿಲ್ಲೆ ಬೆಳಗಾವಿ ಶಿವಾನಂದ ನೀಲಣ್ಣವರ್ ಬೆಂಗಳೂರಿಗೆ ಶಿಫ್ಟ್

ಶಿವಾನಂದ ನೀಲಣ್ಣವರ್ ಬೆಂಗಳೂರಿಗೆ ಶಿಫ್ಟ್

0
45

ಬೆಳಗಾವಿ: ಬಹುಕೋಟಿ ಹೂಡಿಕೆ ವಂಚನೆ ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ್ ಅವರನ್ನು ಸಿಐಡಿ ಅಧಿಕಾರಿಗಳು ಮಂಗಳವಾರ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಸುಮಾರು 4,500 ಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಾನಂದ ನೀಲಣ್ಣವರ್ ಅವರನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಿಂದ ಕಠಿಣ ಭದ್ರತೆಯಲ್ಲಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ಸಿಐಡಿ ತಂಡ ಎರಡು ಪ್ರತ್ಯೇಕ ವಾಹನಗಳಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಒಂದು ವಾಹನದಲ್ಲಿ ಶಿವಾನಂದ ನೀಲಣ್ಣವರ್ ಅವರನ್ನು ಭದ್ರತೆಯೊಂದಿಗೆ ಕರೆದೊಯ್ಯಲಾಗಿದ್ದು, ಮತ್ತೊಂದು ವಾಹನದಲ್ಲಿ ತನಿಖೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಮತ್ತು ಡಿಜಿಟಲ್ ಸಾಧನಗಳನ್ನು ಸಾಗಿಸಲಾಗಿದೆ.