<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಬೀದರ್ Archives - Samyukta Karnataka</title>
	<atom:link href="https://samyuktakarnataka.in/category/districts/bidar/feed/" rel="self" type="application/rss+xml" />
	<link>https://samyuktakarnataka.in/category/districts/bidar/</link>
	<description>News that connects you to Karnataka since 1921</description>
	<lastBuildDate>Tue, 07 Apr 2026 10:58:24 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.9.4</generator>

<image>
	<url>https://samyuktakarnataka.in/wp-content/uploads/2025/07/SK-FAVICON-150x146.jpg</url>
	<title>ಬೀದರ್ Archives - Samyukta Karnataka</title>
	<link>https://samyuktakarnataka.in/category/districts/bidar/</link>
	<width>32</width>
	<height>32</height>
</image> 
	<item>
		<title>ಹೊಸ ಮನೆ ಸಂಭ್ರಮದಲ್ಲಿ ಊಟ ಮಾಡಿದ 40ಕ್ಕೂ ಹೆಚ್ಚು ಮಂದಿ; ಫುಡ್ ಪಾಯಿಸನ್‌ನಿಂದ ಆಸ್ಪತ್ರೆಗೆ ದಾಖಲು!</title>
		<link>https://samyuktakarnataka.in/news/karnataka/more-than-40-people-who-ate-at-a-new-house-party-were-hospitalized-due-to-food-poisoning/</link>
		
		<dc:creator><![CDATA[Samyuktha Karnataka]]></dc:creator>
		<pubDate>Tue, 07 Apr 2026 10:58:23 +0000</pubDate>
				<category><![CDATA[ಬೀದರ್]]></category>
		<category><![CDATA[ರಾಜ್ಯ]]></category>
		<category><![CDATA[#Bhalki]]></category>
		<category><![CDATA[#Bidar]]></category>
		<category><![CDATA[#FoodPoisoning]]></category>
		<category><![CDATA[#FoodSafety]]></category>
		<category><![CDATA[#JantiVillage]]></category>
		<category><![CDATA[#SummerPrecautions]]></category>
		<guid isPermaLink="false">https://samyuktakarnataka.in/?p=94983</guid>

					<description><![CDATA[<p>ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ನಡೆದ ಈ ದುರ್ಘಟನೆ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಹೊಸ ಮನೆಯ ಮೇಲ್ಛಾವಣಿ ಹಾಕಿದ ಸಂತೋಷದಲ್ಲಿ ಆಯೋಜಿಸಿದ್ದ ಊಟವೇ ಇಷ್ಟು ದೊಡ್ಡ ಅವಾಂತರಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ಗ್ರಾಮಸ್ಥರ ಹೇಳಿಕೆ ಪ್ರಕಾರ, ರಾತ್ರಿ ವೇಳೆ ಎಲ್ಲರೂ ಊಟ ಸೇವಿಸಿ ಮನೆಗಳಿಗೆ ಹಿಂತಿರುಗಿದ್ದರು. ಆದರೆ ಮಧ್ಯರಾತ್ರಿ ಬಳಿಕ ಕೆಲವರಿಗೆ ಹೊಟ್ಟೆನೋವು, ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ಕ್ರಮೇಣ ಹಲವರಿಗೂ ಇದೇ ಲಕ್ಷಣಗಳು ಕಾಣಿಸಿಕೊಂಡಿವೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ತಕ್ಷಣವೇ ಸ್ಥಳೀಯರು ಆರೋಗ್ಯ ಇಲಾಖೆಗೆ [&#8230;]</p>
<p>The post <a href="https://samyuktakarnataka.in/news/karnataka/more-than-40-people-who-ate-at-a-new-house-party-were-hospitalized-due-to-food-poisoning/">ಹೊಸ ಮನೆ ಸಂಭ್ರಮದಲ್ಲಿ ಊಟ ಮಾಡಿದ 40ಕ್ಕೂ ಹೆಚ್ಚು ಮಂದಿ; ಫುಡ್ ಪಾಯಿಸನ್‌ನಿಂದ ಆಸ್ಪತ್ರೆಗೆ ದಾಖಲು!</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p>ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ನಡೆದ ಈ ದುರ್ಘಟನೆ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಹೊಸ ಮನೆಯ ಮೇಲ್ಛಾವಣಿ ಹಾಕಿದ ಸಂತೋಷದಲ್ಲಿ ಆಯೋಜಿಸಿದ್ದ ಊಟವೇ ಇಷ್ಟು ದೊಡ್ಡ ಅವಾಂತರಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ.</p>



<p>ಗ್ರಾಮಸ್ಥರ ಹೇಳಿಕೆ ಪ್ರಕಾರ, ರಾತ್ರಿ ವೇಳೆ ಎಲ್ಲರೂ ಊಟ ಸೇವಿಸಿ ಮನೆಗಳಿಗೆ ಹಿಂತಿರುಗಿದ್ದರು. ಆದರೆ ಮಧ್ಯರಾತ್ರಿ ಬಳಿಕ ಕೆಲವರಿಗೆ ಹೊಟ್ಟೆನೋವು, ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ಕ್ರಮೇಣ ಹಲವರಿಗೂ ಇದೇ ಲಕ್ಷಣಗಳು ಕಾಣಿಸಿಕೊಂಡಿವೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ತಕ್ಷಣವೇ ಸ್ಥಳೀಯರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.</p>



<p>ಸ್ಥಳಕ್ಕೆ ದೌಡಾಯಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ತಕ್ಷಣ ರೋಗಿಗಳನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. 10 ರಿಂದ 15 ಜನರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಮನೆಯ ಮಾಲೀಕರಾದ ರಾಜಕುಮಾರ್, ಸಂಗೀತಾ, ಈರಮ್ಮ, ಶಿವಾನಂದ್ ಮತ್ತು ಅಂಬಿಕಾ ಸೇರಿದಂತೆ ಹಲವರ ಸ್ಥಿತಿ ಕೂಡ ಗಂಭೀರವಾಗಿದ್ದು, ಉಳಿದ ಜನರಿಗೆ ಸಮೀಪದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>



<p>ಆರೋಗ್ಯ ಇಲಾಖೆಯ ಅಧಿಕಾರಿಗಳು ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಆರಂಭಿಸಿದ್ದು, ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಊಟದಲ್ಲಿ ಬಳಸಿದ ಪದಾರ್ಥಗಳಲ್ಲಿ ದೋಷ ಉಂಟಾಗಿರಬಹುದೆಂದು ಶಂಕಿಸಲಾಗಿದೆ.</p>



<p>ಈ ಘಟನೆಯ ಹಿನ್ನೆಲೆ, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿರುವ ಅಧಿಕಾರಿಗಳು, ಯಾವುದೇ ಸಮಾರಂಭಗಳಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಮನವಿ ಮಾಡಿದ್ದಾರೆ. ವಿಶೇಷವಾಗಿ ಬೇಸಿಗೆ ಕಾಲದಲ್ಲಿ ಆಹಾರ ಬೇಗ ಹಾಳಾಗುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಜಾಗ್ರತೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.</p>



<p>ಇದೀಗ ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಹೆಚ್ಚಿನವರು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ಕಣ್ಣಿಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರ ಚಿಕಿತ್ಸೆಗೆ ವಿಶೇಷ ತಂಡವನ್ನು ನಿಯೋಜಿಸಲಾಗಿದೆ.</p>



<p>ಒಟ್ಟಿನಲ್ಲಿ, ಸಂತೋಷದ ಸಂದರ್ಭವೊಂದು ದುರ್ಘಟನೆಗೆ ತಿರುಗಿರುವುದು ಗ್ರಾಮಸ್ಥರಲ್ಲಿ ನೋವು ಮತ್ತು ಆತಂಕ ಮೂಡಿಸಿದೆ. ತನಿಖೆ ಪೂರ್ಣಗೊಂಡ ಬಳಿಕ ಘಟನೆಯ ನಿಖರ ಕಾರಣ ಹೊರಬರುವ ನಿರೀಕ್ಷೆಯಿದೆ.</p>
<p>The post <a href="https://samyuktakarnataka.in/news/karnataka/more-than-40-people-who-ate-at-a-new-house-party-were-hospitalized-due-to-food-poisoning/">ಹೊಸ ಮನೆ ಸಂಭ್ರಮದಲ್ಲಿ ಊಟ ಮಾಡಿದ 40ಕ್ಕೂ ಹೆಚ್ಚು ಮಂದಿ; ಫುಡ್ ಪಾಯಿಸನ್‌ನಿಂದ ಆಸ್ಪತ್ರೆಗೆ ದಾಖಲು!</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಆಕಸ್ಮಿಕ ಬೆಂಕಿ: 45 ಕುರಿ ಸಹಿತ ಕುರಿಗಾಹಿ ಸಜೀವ ದಹನ</title>
		<link>https://samyuktakarnataka.in/districts/bidar/accidental-fire-shepherd-burns-alive-along-with-45-sheep/</link>
		
		<dc:creator><![CDATA[Samyukta Karnataka]]></dc:creator>
		<pubDate>Wed, 01 Apr 2026 15:19:28 +0000</pubDate>
				<category><![CDATA[ಬೀದರ್]]></category>
		<category><![CDATA[bidar]]></category>
		<guid isPermaLink="false">https://samyuktakarnataka.in/?p=94604</guid>

					<description><![CDATA[<p>ಬೀದರ್: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 45 ಕುರಿಗಳ ಸಮೇತ ಕುರಿಗಾಹಿ ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬೋರಾಳ್ ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಗ್ರಾಮದ ಶಂಕರ್ ವೀರಗೊಂಡ ಮೇತ್ರೆ (63) ಕುರಿಗಳನ್ನು ಬೆಂಕಿಯ ಕೆನ್ನಾಲಿಗೆಯಿಂದ ಬಚಾವ್ ಮಾಡಲು ಹೋಗಿ ದುರಂತ ಅಂತ್ಯ ಕಂಡಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕೊಟ್ಟಿಗೆಗೆ ಬೆಂಕಿ ತಗುಲಿ ದುರಂತ ಸಂಭವಿಸಿದ ಶಂಕೆ ವ್ಯಕ್ತವಾಗಿದೆ. ಶಂಕರ್ ಮೇತ್ರೆ ಅವರ ಹೊಲದಲ್ಲಿ ತಗಡಿನ ಶೆಡ್ ಇದೆ. ಇದರಲ್ಲಿ [&#8230;]</p>
<p>The post <a href="https://samyuktakarnataka.in/districts/bidar/accidental-fire-shepherd-burns-alive-along-with-45-sheep/">ಆಕಸ್ಮಿಕ ಬೆಂಕಿ: 45 ಕುರಿ ಸಹಿತ ಕುರಿಗಾಹಿ ಸಜೀವ ದಹನ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p><strong>ಬೀದರ್: </strong>ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 45 ಕುರಿಗಳ ಸಮೇತ ಕುರಿಗಾಹಿ ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬೋರಾಳ್ ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ.</p>



<p>ಗ್ರಾಮದ ಶಂಕರ್ ವೀರಗೊಂಡ ಮೇತ್ರೆ (63) ಕುರಿಗಳನ್ನು ಬೆಂಕಿಯ ಕೆನ್ನಾಲಿಗೆಯಿಂದ ಬಚಾವ್ ಮಾಡಲು ಹೋಗಿ ದುರಂತ ಅಂತ್ಯ ಕಂಡಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕೊಟ್ಟಿಗೆಗೆ ಬೆಂಕಿ ತಗುಲಿ ದುರಂತ ಸಂಭವಿಸಿದ ಶಂಕೆ ವ್ಯಕ್ತವಾಗಿದೆ.</p>



<p>ಶಂಕರ್ ಮೇತ್ರೆ ಅವರ ಹೊಲದಲ್ಲಿ ತಗಡಿನ ಶೆಡ್ ಇದೆ. ಇದರಲ್ಲಿ ಕುರಿ, ಮೇಕೆಗಳನ್ನು ಕಟ್ಟುತ್ತಾರೆ. ಇದಲ್ಲದೆ ವಿವಿಧ ಆಹಾರ ಧಾನ್ಯದ ಮೂಟೆ (ಚೀಲ) ಗಳನ್ನು ಸಹ ಇಲ್ಲಿಟ್ಟಿದ್ದರು. ರಾತ್ರಿ ಆಕಸ್ಮಿಕವಾಗಿ ಶೆಡ್‌ಗೆ ಬೆಂಕಿ ತಗುಲಿದೆ. ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಚಾಚಿದೆ. ಬೆಂಕಿ ಹೊತ್ತಿರುವುದನ್ನು ಕಂಡ ಶಂಕರ್ ಮೇತ್ರೆ, ತಕ್ಷಣ ಕುರಿಗಳನ್ನು ಬಿಟ್ಟುಕೊಟ್ಟು ಬಚಾವ್ ಮಾಡಲು ಶೆಡ್‌ನೊಳಗೆ ನುಗ್ಗಿದ್ದಾರೆ. ಈ ವೇಳೆ ವ್ಯಾಪಕವಾಗಿ ಆವರಿಸಿದ್ದ ದಟ್ಟ ಹೊಗೆ, ಬೆಂಕಿ ಜ್ವಾಲೆಗೆ ಸಿಲುಕಿ ಅಲ್ಲೇ ದಹನಗೊಂಡಿದ್ದಾರೆ. ಶೆಡ್‌ನಲ್ಲಿದ್ದ ಎಲ್ಲ 45 ಕುರಿ, ಮೇಕೆಗಳು ಸಹ ಸಜೀವ ದಹನವಾಗಿವೆ.</p>



<p>ಬೆಂಕಿ ಹೊತ್ತಿದಂತೆಯೇ ಗಾಳಿಯಲ್ಲಿ ಒಮ್ಮೆಲೆ ಧಗಧಗ ಜೋರಾಗಿ ವ್ಯಾಪಿಸಿದೆ. ಹೀಗಾಗಿ ಸ್ಥಳೀಯರು, ಅಗ್ನಿಶಾಮಕ ತಂಡ ಅದೆಷ್ಟೇ ಪ್ರಯತ್ನಪಟ್ಟರೂ ಯಾವುದೇ ಫಲ ನೀಡಿಲ್ಲ. ಶಂಕರ್ ಮೇತ್ರೆ ಸಮೇತ 4.50 ಲಕ್ಷದ ಕುರಿ, ಮೇಕೆಗಳು, 80 ಸಾವಿರದ ಹತ್ತಿ, 1 ಲಕ್ಷದಷ್ಟು ಕುಸುಬೆ ಬೆಳೆ ಇತರೆ ವಸ್ತು ಸುಟ್ಟು ಭಸ್ಮವಾಗಿವೆ.</p>



<p>ಬೆಂಕಿ ಹೇಗೆ ತಗುಲಿದೆ ಎಂಬ ನಿಖರ ಕಾರಣ ಗೊತ್ತಾಗಿಲ್ಲ. ಇದು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೇ ಆಗಿದೆಯೇ ಅಥವಾ ಬೇರೇನಾದರೂ ಬೆಳವಣಿಗೆ ಇವೆಯೇ ಎಂಬುದು ತನಿಖೆ ಬಳಿಕವೇ ಗೊತ್ತಾಗಲಿದೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<div class="youtube-embed" data-video_id="WbNq6sL5Luk"><iframe title="Davangere South By-Election: Karnataka Poll Heat Rises | Vote for Development, People’s Voice | SK!!" width="696" height="392" src="https://www.youtube.com/embed/WbNq6sL5Luk?feature=oembed&#038;enablejsapi=1" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe></div>
</div></figure>
<p>The post <a href="https://samyuktakarnataka.in/districts/bidar/accidental-fire-shepherd-burns-alive-along-with-45-sheep/">ಆಕಸ್ಮಿಕ ಬೆಂಕಿ: 45 ಕುರಿ ಸಹಿತ ಕುರಿಗಾಹಿ ಸಜೀವ ದಹನ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಆನ್‌ಲೈನ್ ಗೇಮ್ ಚಟ: ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ</title>
		<link>https://samyuktakarnataka.in/districts/bidar/online-game-addiction-medical-student-commits-suicide/</link>
		
		<dc:creator><![CDATA[Samyukta Karnataka]]></dc:creator>
		<pubDate>Tue, 24 Mar 2026 10:33:09 +0000</pubDate>
				<category><![CDATA[ಬೀದರ್]]></category>
		<category><![CDATA[bidar]]></category>
		<guid isPermaLink="false">https://samyuktakarnataka.in/?p=93943</guid>

					<description><![CDATA[<p>ಬೀದರ್: ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬ್ರಿಮ್ಸ್)ಯಲ್ಲಿ ಮಂಗಳವಾರ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ಅನಿಷ್ಕಾರ್ ಚವ್ಹಾಣ್ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಅಂತಿಮ ವರ್ಷದ ಮೆಡಿಕಲ್ ಓದುತ್ತಿದ್ದ ಅನಿಷ್ಕಾರ್ ಬ್ರಿಮ್ಸ್ ವಸತಿ ನಿಲಯದ ತನ್ನ ಕೋಣೆಯಲ್ಲಿನ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲವು ತಿಂಗಳಿನಿಂದ ಈತ ಆನ್‌ಲೈನ್ ಆಟವಾಡುವ ಗೀಳು ಅಂಟಿಸಿಕೊಂಡಿದ್ದ. ಆಟದಲ್ಲಿ ಒಂದಿಷ್ಟು [&#8230;]</p>
<p>The post <a href="https://samyuktakarnataka.in/districts/bidar/online-game-addiction-medical-student-commits-suicide/">ಆನ್‌ಲೈನ್ ಗೇಮ್ ಚಟ: ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p><strong>ಬೀದರ್: </strong>ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬ್ರಿಮ್ಸ್)ಯಲ್ಲಿ ಮಂಗಳವಾರ ನಡೆದಿದೆ.</p>



<p>ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ಅನಿಷ್ಕಾರ್ ಚವ್ಹಾಣ್ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಅಂತಿಮ ವರ್ಷದ ಮೆಡಿಕಲ್ ಓದುತ್ತಿದ್ದ ಅನಿಷ್ಕಾರ್ ಬ್ರಿಮ್ಸ್ ವಸತಿ ನಿಲಯದ ತನ್ನ ಕೋಣೆಯಲ್ಲಿನ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>



<p>ಕೆಲವು ತಿಂಗಳಿನಿಂದ ಈತ ಆನ್‌ಲೈನ್ ಆಟವಾಡುವ ಗೀಳು ಅಂಟಿಸಿಕೊಂಡಿದ್ದ. ಆಟದಲ್ಲಿ ಒಂದಿಷ್ಟು ಹಣ ಕಳೆದುಕೊಂಡಿದ್ದಾನೆ. ಸ್ನೇಹಿತರು ಹಾಗೂ ಪರಿಚಿತರ ಬಳಿ ಸಾಲವೂ ಪಡೆದಿದ್ದ. ನಿನ್ನೆಯೇ ಪರಿಚಿತರ ಬಳಿ 80 ಸಾವಿರ ರೂ. ಪಡೆದಿದ್ದು, ಈ ಹಣ ಆಟದಲ್ಲಿ ಕಳೆದುಕೊಂಡಿದ್ದ ಎನ್ನಲಾಗಿದೆ. ಆಟದ ಗೀಳು ಹಾಗೂ ಹಣ ಕಳೆದುಕೊಂಡ ಖಿನ್ನತೆಯಲ್ಲಿ ಆತ್ಮಹತ್ಯೆಗೆ ಕೈ ಹಾಕಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.</p>



<p>ಬೆಳಿಗ್ಗೆ ಅನಿಷ್ಕಾರ್ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದಂತೆ ಸಹಪಾಠಿಗಳು ಸ್ಥಳಕ್ಕಾಗಮಿಸಿ ಕಣ್ಣೀರಿಟ್ಟರು. ಕಾಲೇಜಿನಲ್ಲಿ ಚೆನ್ನಾಗಿ ಓದುತ್ತಿದ್ದ. ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ. ಆತ್ಮಹತ್ಯೆಗೆ ಕೈ ಹಾಕಿರುವುದು ದುರದೃಷ್ಟಕರ ಎಂದು ಮಮ್ಮಲ ಮರಗಿದರು.</p>



<p>ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅನಿಷ್ಕಾರ್ ಪಾಲಕರ ಆಕ್ರಂದನ ಮುಗಿಲುಮುಟ್ಟಿತ್ತು. ಎಸ್ಪಿ ಪ್ರದೀಪ್ ಗುಂಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.‌ ಸಮಗ್ರ ತನಿಖೆ ಬಳಿಕ ಆತ್ಮಹತ್ಯೆಯ ನಿಖರ ಕಾರಣ ಗೊತ್ತಾಗಲಿದೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<div class="youtube-embed" data-video_id="qAiVQHFtGj8"><iframe title="Bagalkote By-Election 2026 | Veeranna Charantimath Challenges CM Siddaramaiah 🔥 BJP vs Congress | SK" width="696" height="392" src="https://www.youtube.com/embed/qAiVQHFtGj8?feature=oembed&#038;enablejsapi=1" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe></div>
</div></figure>
<p>The post <a href="https://samyuktakarnataka.in/districts/bidar/online-game-addiction-medical-student-commits-suicide/">ಆನ್‌ಲೈನ್ ಗೇಮ್ ಚಟ: ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಪ್ರೀತ್ಸೇ ಅಂತ ಪೀಡಿಸಿದ ಸಹಪಾಠಿ; ಬಾಲಕಿ ಆತ್ಮಹತ್ಯೆ</title>
		<link>https://samyuktakarnataka.in/districts/bidar/preetse-a-classmate-who-bullied-her-commits-suicide/</link>
		
		<dc:creator><![CDATA[Samyukta Karnataka]]></dc:creator>
		<pubDate>Thu, 12 Mar 2026 09:22:28 +0000</pubDate>
				<category><![CDATA[ಬೀದರ್]]></category>
		<category><![CDATA[bidar]]></category>
		<guid isPermaLink="false">https://samyuktakarnataka.in/?p=93233</guid>

					<description><![CDATA[<p>ಬೀದರ್: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಾಲೆಯ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿನಿ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆಗೆ ಸಹಪಾಠಿ ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದರಿಂದ ಆಕೆಯ ಮೇಲೆ ಮಾನಸಿಕ ಒತ್ತಡ ಉಂಟಾಗಿದೆ ಎನ್ನಲಾಗಿದೆ. ಆದರೆ ಪೊಲೀಸ್ ವರದಿ ಪ್ರಕಾರ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ [&#8230;]</p>
<p>The post <a href="https://samyuktakarnataka.in/districts/bidar/preetse-a-classmate-who-bullied-her-commits-suicide/">ಪ್ರೀತ್ಸೇ ಅಂತ ಪೀಡಿಸಿದ ಸಹಪಾಠಿ; ಬಾಲಕಿ ಆತ್ಮಹತ್ಯೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p><strong>ಬೀದರ್:</strong> ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಾಲೆಯ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.</p>



<p>ವಿದ್ಯಾರ್ಥಿನಿ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆಗೆ ಸಹಪಾಠಿ ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದರಿಂದ ಆಕೆಯ ಮೇಲೆ ಮಾನಸಿಕ ಒತ್ತಡ ಉಂಟಾಗಿದೆ ಎನ್ನಲಾಗಿದೆ. ಆದರೆ ಪೊಲೀಸ್ ವರದಿ ಪ್ರಕಾರ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.</p>



<p>ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ನಡೆಸಿದ್ದಾರೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<div class="youtube-embed" data-video_id="ysJeTEvjKAo"><iframe title="The Kerala story? Monalisa Kumbh Mela Girl’s Marriage With Furman Khan Sparks Nationwide Debate | SK" width="696" height="392" src="https://www.youtube.com/embed/ysJeTEvjKAo?feature=oembed&#038;enablejsapi=1" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe></div>
</div></figure>
<p>The post <a href="https://samyuktakarnataka.in/districts/bidar/preetse-a-classmate-who-bullied-her-commits-suicide/">ಪ್ರೀತ್ಸೇ ಅಂತ ಪೀಡಿಸಿದ ಸಹಪಾಠಿ; ಬಾಲಕಿ ಆತ್ಮಹತ್ಯೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಬಿಸಿಯೂಟ ಸೇವಿಸಿ 58 ವಿದ್ಯಾರ್ಥಿಗಳು ಅಸ್ವಸ್ಥ</title>
		<link>https://samyuktakarnataka.in/districts/bidar/58-students-fall-ill-after-consuming-bisiyuta/</link>
		
		<dc:creator><![CDATA[Samyukta Karnataka]]></dc:creator>
		<pubDate>Tue, 03 Feb 2026 16:04:10 +0000</pubDate>
				<category><![CDATA[ಬೀದರ್]]></category>
		<category><![CDATA[bidar]]></category>
		<guid isPermaLink="false">https://samyuktakarnataka.in/?p=91006</guid>

					<description><![CDATA[<p>ಬೀದರ್: ಔರಾದ್ ತಾಲೂಕಿನ ಜಮಲಪೂರ ಮರಾಠಿ ಮಾಧ್ಯಮದ ಸರಕಾರಿ ಶಾಲೆಯ 58 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದಾರೆ. ಊಟ ಸೇವಿಸಿದ ಮಕ್ಕಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡು ಕೆಲ ಕ್ಷಣದಲ್ಲಿ ವಾಂತಿ ಪ್ರಾರಂಭಗೊಂಡಿತು. ಶಿಕ್ಷಕರು 108 ಮತ್ತು ಇತರೆ ವಾಹನಗಳ ಸಹಾಯದಿಂದ ಮಕ್ಕಳನ್ನು ಔರಾದ್ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆತಂದಿದ್ದರಿಂದ ಎಲ್ಲ ಮಕ್ಕಳು ಚೇತರಿಸಿಕೊಂಡಿದ್ದಾರೆ. ಔರಾದ್ ಪೊಲೀಸ್ ಠಾಣೆ ಸಿಬ್ಬಂದಿ ದೂರು ದಾಖಲಿಸಿಕೊಂಡಿದ್ದಾರೆ. ಮೊದಲಿಗೆ ಹುಳಗಳು ಭರಿತ ಕಳಪೆ ಆಹಾರ, ಅಲ್ಲದೆ ಅಡುಗೆಯವರ [&#8230;]</p>
<p>The post <a href="https://samyuktakarnataka.in/districts/bidar/58-students-fall-ill-after-consuming-bisiyuta/">ಬಿಸಿಯೂಟ ಸೇವಿಸಿ 58 ವಿದ್ಯಾರ್ಥಿಗಳು ಅಸ್ವಸ್ಥ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p><strong>ಬೀದರ್:</strong> ಔರಾದ್ ತಾಲೂಕಿನ ಜಮಲಪೂರ ಮರಾಠಿ ಮಾಧ್ಯಮದ ಸರಕಾರಿ ಶಾಲೆಯ 58 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದಾರೆ.</p>



<p>ಊಟ ಸೇವಿಸಿದ ಮಕ್ಕಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡು ಕೆಲ ಕ್ಷಣದಲ್ಲಿ ವಾಂತಿ ಪ್ರಾರಂಭಗೊಂಡಿತು. ಶಿಕ್ಷಕರು 108 ಮತ್ತು ಇತರೆ ವಾಹನಗಳ ಸಹಾಯದಿಂದ ಮಕ್ಕಳನ್ನು ಔರಾದ್ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಿದ್ದಾರೆ.</p>



<p>ತಕ್ಷಣ ಆಸ್ಪತ್ರೆಗೆ ಕರೆತಂದಿದ್ದರಿಂದ ಎಲ್ಲ ಮಕ್ಕಳು ಚೇತರಿಸಿಕೊಂಡಿದ್ದಾರೆ. ಔರಾದ್ ಪೊಲೀಸ್ ಠಾಣೆ ಸಿಬ್ಬಂದಿ ದೂರು ದಾಖಲಿಸಿಕೊಂಡಿದ್ದಾರೆ. ಮೊದಲಿಗೆ ಹುಳಗಳು ಭರಿತ ಕಳಪೆ ಆಹಾರ, ಅಲ್ಲದೆ ಅಡುಗೆಯವರ ನಿಷ್ಕಾಳಜಿ ಮಾಡಿದ ಎಡವಟ್ಟಿನಿಂದ ಈ ಸಮಸ್ಯೆ ಎದುರಾಗಿರುವದು ಮೇಲ್ನೋಟಕ್ಕೆ ತಿಳಿದು ಬಂದಿದೆ.</p>
<p>The post <a href="https://samyuktakarnataka.in/districts/bidar/58-students-fall-ill-after-consuming-bisiyuta/">ಬಿಸಿಯೂಟ ಸೇವಿಸಿ 58 ವಿದ್ಯಾರ್ಥಿಗಳು ಅಸ್ವಸ್ಥ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಬೀದರ್‌: ನಿಗೂಢ ವಸ್ತು ಸ್ಪೋಟ &#8211; ಮಕ್ಕಳು ಸೇರಿ 6 ಜನರಿಗೆ ಗಾಯ</title>
		<link>https://samyuktakarnataka.in/districts/bidar/bidar-humnabad-suspicious-object-blast-children-injured/</link>
		
		<dc:creator><![CDATA[Samyukta Karnataka]]></dc:creator>
		<pubDate>Sat, 31 Jan 2026 07:57:44 +0000</pubDate>
				<category><![CDATA[ಬೀದರ್]]></category>
		<category><![CDATA[bidar]]></category>
		<guid isPermaLink="false">https://samyuktakarnataka.in/?p=90798</guid>

					<description><![CDATA[<p>ಬೀದರ್: ಅನುಮಾನಾಸ್ಪದ ವಸ್ತುವೊಂದು ಏಕಾಏಕಿ ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಇಂದು ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಫೋಟ ಸಂಭವಿಸಿದ ವೇಳೆ ಸ್ಥಳದಲ್ಲೇ ಆರು ಮಕ್ಕಳು ಹಾಗೂ ಇಬ್ಬರು ಯುವಕರು ನಿಂತಿದ್ದರು ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಯಿಂದ ಗಾಯಾಳುಗಳ ಮುಖ, ಮೈ ಮತ್ತು ಕೈ ಭಾಗಗಳಲ್ಲಿ ತೀವ್ರ ಸುಟ್ಟ [&#8230;]</p>
<p>The post <a href="https://samyuktakarnataka.in/districts/bidar/bidar-humnabad-suspicious-object-blast-children-injured/">ಬೀದರ್‌: ನಿಗೂಢ ವಸ್ತು ಸ್ಪೋಟ &#8211; ಮಕ್ಕಳು ಸೇರಿ 6 ಜನರಿಗೆ ಗಾಯ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p><strong>ಬೀದರ್:</strong> ಅನುಮಾನಾಸ್ಪದ ವಸ್ತುವೊಂದು ಏಕಾಏಕಿ ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಇಂದು ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.</p>



<p>ಸ್ಫೋಟ ಸಂಭವಿಸಿದ ವೇಳೆ ಸ್ಥಳದಲ್ಲೇ ಆರು ಮಕ್ಕಳು ಹಾಗೂ ಇಬ್ಬರು ಯುವಕರು ನಿಂತಿದ್ದರು ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಯಿಂದ ಗಾಯಾಳುಗಳ ಮುಖ, ಮೈ ಮತ್ತು ಕೈ ಭಾಗಗಳಲ್ಲಿ ತೀವ್ರ ಸುಟ್ಟ ಗಾಯಗಳಾಗಿವೆ. ಗಾಯಗೊಂಡ ಎಲ್ಲರನ್ನು ತಕ್ಷಣವೇ ಬೀದರ್‌ನ ಬ್ರಿಮ್ಸ್ (BRIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.</p>



<p><strong>ಇದನ್ನೂ ಓದಿ:</strong><a href="https://samyuktakarnataka.in/entertainment/cult-a-new-era-love-story/"> </a><strong><a href="https://samyuktakarnataka.in/districts/ತುಮಕೂರು/tumakuru-psi-arrested-for-bribe-in-vehicle-release-case/" type="link" id="https://samyuktakarnataka.in/districts/ತುಮಕೂರು/tumakuru-psi-arrested-for-bribe-in-vehicle-release-case/">ತುಮಕೂರು ಪಿಎಸ್‌ಐ ಲೋಕಾಯುಕ್ತರ ಬಲೆಗೆ</a></strong></p>



<p>ಗಾಯಗೊಂಡವರಲ್ಲಿ ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಹೈದರಾಬಾದ್‌ಗೆ ರವಾನಿಸಲಾಗಿದೆ. ಮತ್ತೊಬ್ಬ ಗಾಯಾಳು ಜಬ್ಬಾರ್ ಸಾಬ್ (65) ಎಂಬವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೋಲ್ಲಾಪೂರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>



<p>ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗಾಯಾಳುಗಳ ಕುಟುಂಬಸ್ಥರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಶಾಲಾ ಮಕ್ಕಳಿಗೆ ಸಂಭವಿಸಿದ ಅಪಘಾತದಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.</p>



<p><strong>ಇದನ್ನೂ ಓದಿ:</strong><a href="https://samyuktakarnataka.in/entertainment/cult-a-new-era-love-story/"> </a><strong><a href="https://samyuktakarnataka.in/news/karnataka/tobacco-advertisement-ban-in-karnataka-transport-buses-and-bus-stations/">ರಾಜ್ಯ ಸಾರಿಗೆ ಬಸ್‌, ನಿಲ್ದಾಣಗಳಲ್ಲಿ ತಂಬಾಕು ಜಾಹೀರಾತು ಸಂಪೂರ್ಣ ನಿಷೇಧ</a></strong></p>



<p>ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಗೊಂಡ ವಸ್ತು ಹಳೆಯ ಸ್ಫೋಟಕವಾಗಿರಬಹುದೇ ಅಥವಾ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಕಡ್ಡಿಗಳು (ಡೈನಮೈಟ್) ಸ್ಫೋಟಗೊಂಡಿವೆಯೇ ಎಂಬ ಅನುಮಾನ ವ್ಯಕ್ತವಾಗಿದೆ.</p>



<p>ಗಮನಾರ್ಹವೆಂದರೆ, ಇದೇ ಪ್ರದೇಶದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಇಂತಹ ಸ್ಫೋಟ ಸಂಭವಿಸಿರುವುದು ಸ್ಥಳೀಯರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಅಕ್ರಮವಾಗಿ ಸಂಗ್ರಹಿಸಲಾದ ಸ್ಫೋಟಕ ವಸ್ತುಗಳೇ ಇದಕ್ಕೆ ಕಾರಣವಾಗಿವೆಯೇ ಎಂಬ ಕೋನದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>



<p><strong>ಇದನ್ನೂ ಓದಿ:</strong><a href="https://samyuktakarnataka.in/entertainment/cult-a-new-era-love-story/"> </a><strong><a href="https://samyuktakarnataka.in/districts/bengaluru/police-inspector-caught-by-lokayukta-taking-bribe-bengaluru/">ಲಂಚಕೋರ ಇನ್‌ಸ್ಪೆಕ್ಟರ್‌ನ ಹೈಡ್ರಾಮಾ ವೈರಲ್!</a></strong></p>



<p><strong>ಸಮಗ್ರ ತನಿಖೆಗೆ ಆದೇಶ:</strong> ಈ ಕುರಿತಂತೆ ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನನಗೆ ಅತ್ಯಂತ ಆಘಾತ ಉಂಟುಮಾಡಿದೆ.</p>



<p>ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸುವಂತೆ ಸೂಚನೆ ನೀಡಿದ್ದೇನೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸ್ಫೋಟಕ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ, ಸ್ಫೋಟ ಸ್ಥಳದಲ್ಲಿ ಮಾದರಿಗಳನ್ನು ಸಂಗ್ರಹಿಸಿ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದೇನೆ.</p>



<p>ಸ್ಫೋಟಕ್ಕೆ ಕಾರಣವೇನು? ಬಳಸಿದ ವಸ್ತು ಯಾವುದು? ಅದು ಅಲ್ಲಿ ಹೇಗೆ ಬಂದಿತು? ಯಾವ ಉದ್ದೇಶಕ್ಕಾಗಿ ಬಳಸಲಾಗುತ್ತಿತ್ತು? ಎಂಬ ಎಲ್ಲ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಕಾರಣರಾದವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ,</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="c4I99jKesm"><a href="https://samyuktakarnataka.in/news/india/digital-india-beyond-bengaluru-karnataka-expectations-from-union-budget/">ಕೇಂದ್ರ ಬಜೆಟ್‌: `ಡಿಜಿಟಲ್ ಕರ್ನಾಟಕ&#8217;ಕ್ಕೆ ದೊರೆಯುವುದೇ ಅಭಯ?</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ಕೇಂದ್ರ ಬಜೆಟ್‌: `ಡಿಜಿಟಲ್ ಕರ್ನಾಟಕ&#8217;ಕ್ಕೆ ದೊರೆಯುವುದೇ ಅಭಯ?&#8221; &#8212; Samyukta Karnataka" src="https://samyuktakarnataka.in/news/india/digital-india-beyond-bengaluru-karnataka-expectations-from-union-budget/embed/#?secret=h2e7jlBI1T#?secret=c4I99jKesm" data-secret="c4I99jKesm" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/bidar/bidar-humnabad-suspicious-object-blast-children-injured/">ಬೀದರ್‌: ನಿಗೂಢ ವಸ್ತು ಸ್ಪೋಟ &#8211; ಮಕ್ಕಳು ಸೇರಿ 6 ಜನರಿಗೆ ಗಾಯ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಭೀಮಣ್ಣ‌ ಖಂಡ್ರೆ ಹೋರಾಟದಿಂದ ಕರ್ನಾಟಕದಲ್ಲೇ ಉಳಿದ ಬೀದರ್</title>
		<link>https://samyuktakarnataka.in/districts/bidar/bidar-remained-in-karnataka-due-to-the-bhimanna-khandre-struggle/</link>
		
		<dc:creator><![CDATA[Samyukta Karnataka]]></dc:creator>
		<pubDate>Sat, 17 Jan 2026 15:16:54 +0000</pubDate>
				<category><![CDATA[ಬೀದರ್]]></category>
		<category><![CDATA[bidar]]></category>
		<guid isPermaLink="false">https://samyuktakarnataka.in/?p=89799</guid>

					<description><![CDATA[<p>ಬೀದರ್: ಹಿರಿಯ ರಾಜಕಾರಣಿ ಭೀಮಣ್ಣ ಖಂಡ್ರೆ ಅವರು ಸಮಾಜಮುಖಿಯಾದ ಸಾರ್ಥಕ ಜೀವನವನ್ನು ನಡೆಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಸಚಿವರೂ, ಶತಾಯುಷಿ ಆಗಿದ್ದ ಹಿರಿಯ ಕಾಂಗ್ರೆಸ್ ಧುರೀಣ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾತನಾಡಿದರು. ಭೀಮಣ್ಣ ಖಂಡ್ರೆ ಒಬ್ಬ ಹೋರಾಟಗಾರರು. ಅನ್ಯಾಯದ ವಿರುದ್ಧ ಸದಾ ಹೋರಾಡಿದವರು. ಸ್ವಾತಂತ್ರ್ಯ ಚಳುವಳಿಯಿಂದ ಪ್ರೇರಿತರಾಗಿ, ಮಹಾತ್ಮಾ ಗಾಂಧಿಯವರಿಂದ ಪ್ರಭಾವಿತರಾಗಿ ಅನೇಕ ಹೋರಾಟಗಳಲ್ಲಿ ಪಾಲ್ಗೊಂಡವರು ಎಂದರು. ಇದನ್ನೂ ಓದಿ: ಶಿರೂರು ಪರ್ಯಾಯ – ಕೃಷ್ಣ ನಗರಿಯಲ್ಲಿ [&#8230;]</p>
<p>The post <a href="https://samyuktakarnataka.in/districts/bidar/bidar-remained-in-karnataka-due-to-the-bhimanna-khandre-struggle/">ಭೀಮಣ್ಣ‌ ಖಂಡ್ರೆ ಹೋರಾಟದಿಂದ ಕರ್ನಾಟಕದಲ್ಲೇ ಉಳಿದ ಬೀದರ್</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p><strong>ಬೀದರ್:</strong> ಹಿರಿಯ ರಾಜಕಾರಣಿ ಭೀಮಣ್ಣ ಖಂಡ್ರೆ ಅವರು ಸಮಾಜಮುಖಿಯಾದ ಸಾರ್ಥಕ ಜೀವನವನ್ನು ನಡೆಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>



<p>ಮಾಜಿ ಸಚಿವರೂ, ಶತಾಯುಷಿ ಆಗಿದ್ದ ಹಿರಿಯ ಕಾಂಗ್ರೆಸ್ ಧುರೀಣ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾತನಾಡಿದರು.</p>



<p>ಭೀಮಣ್ಣ ಖಂಡ್ರೆ ಒಬ್ಬ ಹೋರಾಟಗಾರರು. ಅನ್ಯಾಯದ ವಿರುದ್ಧ ಸದಾ ಹೋರಾಡಿದವರು. ಸ್ವಾತಂತ್ರ್ಯ ಚಳುವಳಿಯಿಂದ ಪ್ರೇರಿತರಾಗಿ, ಮಹಾತ್ಮಾ ಗಾಂಧಿಯವರಿಂದ ಪ್ರಭಾವಿತರಾಗಿ ಅನೇಕ ಹೋರಾಟಗಳಲ್ಲಿ ಪಾಲ್ಗೊಂಡವರು ಎಂದರು.</p>



<p><strong>ಇದನ್ನೂ ಓದಿ: <a href="https://samyuktakarnataka.in/districts/udupi/udupi-krishna-matha-paryaya-mahotsava-history-madhvacharya/">ಶಿರೂರು ಪರ್ಯಾಯ – ಕೃಷ್ಣ ನಗರಿಯಲ್ಲಿ ಹಬ್ಬದ ಸಂಭ್ರಮ</a></strong></p>



<p><strong>ನ್ಯಾಯ ಪರವಾದ ಧ್ವನಿ: </strong>ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿ, ಏಕೀಕರಣದಲ್ಲಿ ಭಾಗವಹಿಸಿದ್ದರು. ಜನಪರವಾದ ಹೋರಾಟಗಾರ ಎಂದೇ ಗುರುತಿಸಿಕೊಂಡಿದ್ದ ಅವರು ಅನ್ಯಾಯವಾದ ಕಡೆಗೆಲ್ಲಾ ತೆರಳಿ ನ್ಯಾಯದ ಪರವಾಗಿ ಧ್ವನಿ ಎತ್ತಿದವರು ಎಂದರು.</p>



<p>ಬೀದರ್ ಇಂದು ಕರ್ನಾಟಕದಲ್ಲಿ ಉಳಿದಿದ್ದರೆ, ಭೀಮಣ್ಣ ಖಂಡ್ರೆ ಅವರು ಏಕೀಕರಣಕ್ಕಾಗಿ ಹೋರಾಟ ಮಾಡಿದ್ದರ ಫಲ ಎಂದ ಅವರು ಭೀಮಣ್ಣ ಖಂಡ್ರೆ ಕೇವಲ ರಾಜಕಾರಣಿಯಾಗಿರದೇ ಸಮಾಜಸೇವಕರೂ ಆಗಿದ್ದರು. ದೀರ್ಘಕಾಲ ಸಮಾಜ ಸೇವೆಯಲ್ಲಿ ತೊಡಗಿದ್ದರು. ಎಲ್ಲ ವರ್ಗದ ಜನರನ್ನು ಪ್ರತಿನಿಧಿಸುವ ಛಾತಿ ಅವರಲ್ಲಿತ್ತು ಎಂದರು.</p>



<p><strong>ಇದನ್ನೂ ಓದಿ</strong>:<a href="https://samyuktakarnataka.in/districts/chikkamagaluru/republic-day-president-invites-young-scientists/"> <strong>ಗಣರಾಜ್ಯೋತ್ಸವ: ಕಾಫಿನಾಡಿನ ಯುವ ವಿಜ್ಞಾನಿಗೆ ರಾಷ್ಟ್ರಪತಿ ಆಹ್ವಾನ</strong></a></p>



<p><strong>ಯುವಜನಾಂಗಕ್ಕೆ ದಾರಿದೀಪ: </strong>ಅವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಖಂಡ್ರೆ ಅವರು ನಮಗೆ ಸ್ಫೂರ್ತಿಯಾಗಿದ್ದರು. ಅವರ ಬದುಕಿನ ರೀತಿ ಯುವಕರಿಗೆ ದಾರಿದೀಪ ಎಂದರು.</p>



<p>ಭೀಮಣ್ಣ ಖಂಡ್ರೆ ಅವರ ಸಾವಿನಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದರು.</p>
<p>The post <a href="https://samyuktakarnataka.in/districts/bidar/bidar-remained-in-karnataka-due-to-the-bhimanna-khandre-struggle/">ಭೀಮಣ್ಣ‌ ಖಂಡ್ರೆ ಹೋರಾಟದಿಂದ ಕರ್ನಾಟಕದಲ್ಲೇ ಉಳಿದ ಬೀದರ್</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಜನಸಾಗರ ಮಧ್ಯೆ ಭೀಮಣ್ಣ ಖಂಡ್ರೆಗೆ ವಿದಾಯ</title>
		<link>https://samyuktakarnataka.in/districts/bidar/farewell-to-bhimanna-khandre-amidst-a-sea-of-people/</link>
		
		<dc:creator><![CDATA[Samyukta Karnataka]]></dc:creator>
		<pubDate>Sat, 17 Jan 2026 14:01:00 +0000</pubDate>
				<category><![CDATA[ಬೀದರ್]]></category>
		<category><![CDATA[bidar]]></category>
		<guid isPermaLink="false">https://samyuktakarnataka.in/?p=89811</guid>

					<description><![CDATA[<p>ಬೀದರ್: ಹಿರಿಯ ರಾಜಕೀಯ ಮುತ್ಸದ್ಧಿ, ಲೋಕನಾಯಕ, ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ, ಡಾ.ಭೀಮಣ್ಣ ಖಂಡ್ರೆ (103) ಅಂತ್ಯಕ್ರಿಯೆ ಭಾಲ್ಕಿಯಲ್ಲಿ ಶನಿವಾರ ಸಂಜೆ ಜನಸಾಗರದ ಮಧ್ಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಪಾರ ಜನಸ್ತೋಮದ ಮಧ್ಯೆ ಶನಿವಾರ ಸಂಜೆ ಭಾಲ್ಕಿಯಲ್ಲಿ ನಡೆಯಿತು. ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಖಂಡ್ರೆ ನಿಧನರಾಗಿದ್ದರು. ಶನಿವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಭಾಲ್ಕಿ ಮನೆಯಲ್ಲಿ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಡಿಸಿ ಶಿಲ್ಪಾ ಶರ್ಮಾ ಅವರು ತಿರಂಗಾ ಧ್ವಜ ಅಗಲಿದ ಚೇತನಕ್ಕೆ ಹೊದಿಸಿ, ಜಿಲ್ಲಾಡಳಿತದಿಂದ ಗೌರವ [&#8230;]</p>
<p>The post <a href="https://samyuktakarnataka.in/districts/bidar/farewell-to-bhimanna-khandre-amidst-a-sea-of-people/">ಜನಸಾಗರ ಮಧ್ಯೆ ಭೀಮಣ್ಣ ಖಂಡ್ರೆಗೆ ವಿದಾಯ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p>ಬೀದರ್: ಹಿರಿಯ ರಾಜಕೀಯ ಮುತ್ಸದ್ಧಿ, ಲೋಕನಾಯಕ, ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ, ಡಾ.ಭೀಮಣ್ಣ ಖಂಡ್ರೆ (103) ಅಂತ್ಯಕ್ರಿಯೆ ಭಾಲ್ಕಿಯಲ್ಲಿ ಶನಿವಾರ ಸಂಜೆ ಜನಸಾಗರದ ಮಧ್ಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಪಾರ ಜನಸ್ತೋಮದ ಮಧ್ಯೆ ಶನಿವಾರ ಸಂಜೆ ಭಾಲ್ಕಿಯಲ್ಲಿ ನಡೆಯಿತು.</p>



<p>ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಖಂಡ್ರೆ ನಿಧನರಾಗಿದ್ದರು. ಶನಿವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಭಾಲ್ಕಿ ಮನೆಯಲ್ಲಿ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಇಡಲಾಗಿತ್ತು.</p>



<p>ಡಿಸಿ ಶಿಲ್ಪಾ ಶರ್ಮಾ ಅವರು ತಿರಂಗಾ ಧ್ವಜ ಅಗಲಿದ ಚೇತನಕ್ಕೆ ಹೊದಿಸಿ, ಜಿಲ್ಲಾಡಳಿತದಿಂದ ಗೌರವ ಪುಷ್ಪನಮನ ಸಲ್ಲಿಸಿದರು. ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಚಿಕಲಚಂದಾ ರಸ್ತೆಯ ಅವರ ತೋಟ ಶಾಂತಿಧಾಮಕ್ಕೆ ಒಯ್ದು, ಧರ್ಮಪತ್ನಿ ಲಿಂ.ಲಕ್ಷ್ಮೀಬಾಯಿ ಖಂಡ್ರೆ ಸಮಾಧಿ ಪಕ್ಕದಲ್ಲೇ ವೀರಶೈವ-ಲಿಂಗಾಯತ ಪರಂಪರೆಯಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.</p>



<p>ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ಸಚಿವರು, ಶಾಸಕರು, ನಾಡಿನ ಅನೇಕ ಪೂಜ್ಯರು, ಗಣ್ಯರು ಸೇರಿ ಒಂದು ಲಕ್ಷಕ್ಕೂ ಹೆಚ್ಚು ಜನರು ಅಂತಿಮ ದರ್ಶನ ಪಡೆದರು. ಪುತ್ರರಾದ ಅರಣ್ಯ ಸಚಿವ ಈಶ್ವರ ಖಂಡ್ರೆ ವಿಧಿ-ವಿಧಾನ ಕೈಂಕರ್ಯ ನಡೆಸಿ, ತಮ್ಮ ರಾಜಕೀಯ ಗುರು ಆಗಿದ್ದ ತಂದೆಗೆ ಕಣ್ಣೀರ ವಿದಾಯ ಹೇಳಿದರು.</p>



<p>ಖಂಡ್ರೆ ಮನೆ ಗುರುಗಳಾದ ಭಾಲ್ಕಿ ಹಿರೇಮಠದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಧಾರ್ಮಿಕ ಪ್ರಕ್ರಿಯೆ ಮುಗಿಸಿದರು. ಖಂಡ್ರೆ ಮೊಮ್ಮಗ ಸಂಸದ ಸಾಗರ್ ಖಂಡ್ರೆ ಸೇರಿ ಕುಟುಂಬದ ಸದಸ್ಯರು ಅಗಲಿದ ಚೇತನಕ್ಕೆ ಆರತಿ ಬೆಳಗಿ, ಭಾವುಕ ವಿದಾಯ ಹೇಳಿದರು. ಪೊಲೀಸ್ ತುಕುಡಿ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲಾಮಿ ನೀಡಿತು. ಮೃತರ ಗೌರವಾರ್ಥ ಭಾಲ್ಕಿ ಪಟ್ಟಣ ಸ್ವಯಂಘೋಷಿತ ಬಂದ್ ಇತ್ತು.</p>
<p>The post <a href="https://samyuktakarnataka.in/districts/bidar/farewell-to-bhimanna-khandre-amidst-a-sea-of-people/">ಜನಸಾಗರ ಮಧ್ಯೆ ಭೀಮಣ್ಣ ಖಂಡ್ರೆಗೆ ವಿದಾಯ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ</title>
		<link>https://samyuktakarnataka.in/districts/bidar/politician-bhimanna-khandre-is-no-more/</link>
		
		<dc:creator><![CDATA[Samyukta Karnataka]]></dc:creator>
		<pubDate>Fri, 16 Jan 2026 18:10:35 +0000</pubDate>
				<category><![CDATA[ಬೀದರ್]]></category>
		<category><![CDATA[bidar]]></category>
		<guid isPermaLink="false">https://samyuktakarnataka.in/?p=89721</guid>

					<description><![CDATA[<p>ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10.50ರ ಸುಮಾರಿನಲ್ಲಿ ನಿಧನರಾದರು. ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು [&#8230;]</p>
<p>The post <a href="https://samyuktakarnataka.in/districts/bidar/politician-bhimanna-khandre-is-no-more/">ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p><strong>ಬೀದರ್: </strong>ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10.50ರ ಸುಮಾರಿನಲ್ಲಿ ನಿಧನರಾದರು.</p>



<p>ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.</p>



<p>ಕಳೆದ ಒಂದು ವಾರದಿಂದ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಸಚಿವರು, ಶಾಸಕರು, ಸಮಾಜದ ಗಣ್ಯರು, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಲ್ಕಿಗೆ ಆಗಮಿಸಿ ಭೀಮಣ್ಣ ಖಂಡ್ರೆ ಅವರನ್ನು ನೋಡಿ, ಆರೋಗ್ಯ ವಿಚಾರಿಸಿದ್ದರು. ಹಲವರು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಭೀಮಣ್ಣ ಖಂಡ್ರೆ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು.</p>



<p>103 ವರ್ಷಗಳ ಸಾರ್ಥಕ ಹಾಗೂ ತುಂಬು ಜೀವನ ನಡೆಸಿದ್ದ ಭೀಮಣ್ಣ ಖಂಡ್ರೆ ಅವರು ಇಂದು ಎಲ್ಲರನ್ನೂ ಅಗಲಿದ್ದಾರೆ. ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮತ್ತು ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ ಕುಮಾರ ಖಂಡ್ರೆ ಸೇರಿ ಇಬ್ಬರು ಗಂಡು ಮಕ್ಕಳು ಹಾಗೂ ನಾಲ್ವರು ಪುತ್ರಿಯರಿದ್ದಾರೆ. ಇವರ ಮತ್ತೊಬ್ಬ ಪುತ್ರ ಮಾಜಿ ಶಾಸಕ ಡಾ. ವಿಜಯಕುಮಾರ್ ಖಂಡ್ರೆ 2019ರಲ್ಲಿ ನಿಧನಹೊಂದಿದ್ದರು.</p>



<p>ಭೀಮಣ್ಣ ಖಂಡ್ರೆ ಅವರು ವೃತ್ತಿಯಲ್ಲಿ ವಕೀಲರಾಗಿ ಬಡಜನರಿಗೆ ರೈತರಿಗೆ ನ್ಯಾಯ ಕೊಡಿಸುವ ಮೂಲಕ ಜನನಾಯಕರಾಗಿ ಹೊರಹೊಮ್ಮಿ, 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದ್ದರು.</p>



<p>1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು, 4 ಬಾರಿ ಶಾಸಕರಾಗಿ, 2 ಬಾರಿ ವಿಧಾನಪರಿಷತ್ ಸದಸ್ಯರಾಗಿ, ಎಂ. ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.</p>



<p>1976ರಲ್ಲಿ ಕೆಲವು ಅಧಿಕಾರಿಗಳು ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮದಡಿ ಬಲವಂತದಿಂದ ಯುವಜನರಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸುತ್ತಿದ್ದುದನ್ನು ಖಂಡಿಸಿ, ತಾವೇ ಜನರ ಮನವೊಲಿಸಿ ಒಂದೇ ದಿನದಲ್ಲಿ 2500ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಮನವೊಲಿಸಿ ಒಂದೇ ದಿನ ಒಂದೇ ನಗರದಲ್ಲಿ ನಡೆದ ಅತಿ ಹೆಚ್ಚು ಸಂತಾನ ಹರಣ ಶಸ್ತ್ರಚಿಕಿತ್ಸೆಯ ದಾಖಲೆ ಸೃಷ್ಟಿಸಿದ್ದರು.</p>



<p>ಸಹಕಾರಿ ಧುರೀಣರಾಗಿ ಮತ್ತು ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯ ಮಹಾತ್ಮಾ ಗಾಂಧಿ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನಾರಂಜಾ ಮತ್ತು ಕಾರಂಜಾ ನೀರಾವರಿ ಯೋಜನೆಗಳ ಅನುಷ್ಠಾನದಲ್ಲೂ ಭೀಮಣ್ಣ ಖಂಡ್ರೆ ಅವರು, ಪ್ರಮುಖ ಪಾತ್ರ ವಹಿಸಿದ್ದರು.</p>



<p>ಸ್ವಾತಂತ್ರ್ಯ ಸೇನಾನಿಯಾಗಿ, ಹೈದ್ರಾಬಾದ್ ವಿಮೋಚನೆಯ ಹೋರಾಟಗಾರರಾಗಿ ರಜಾಕಾರರ ದೌರ್ಜನ್ಯ ಪ್ರತಿಭಟಿಸಿದ್ದ ಅವರು, ಏಕೀಕರಣದ ಸಂದರ್ಭದಲ್ಲಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಲು ಶ್ರಮಿಸಿದ್ದರು. ಅವರ ತಮ್ಮ ಈ ಕೊಡುಗೆಗಾಗಿ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿಗೂ ಭಾಜನರಾಗಿದ್ದರು.</p>



<p>ಶತಾಯುಷಿ ಲೋಕನಾಯಕ: ಬಾಲ್ಯದಲ್ಲಿ ತೀವ್ರ ಅನಾರೋಗ್ಯಪೀಡಿತರಾದಾಗ ಮುಚಳಂಬದ ಸದ್ಗುರು ಶ್ರೀ ನಾಗಭೂಷಣ ಶಿವಯೋಗಿಗಳಿಂದ ಯೋಗ ಕಲಿತು ನಿತ್ಯ ಯೋಗ, ಪ್ರಾಣಾಯಾಮ ಹಾಗೂ ಇಷ್ಟಲಿಂಗ ಪೂಜೆ ಮಾಡುತ್ತಾ, ಶುದ್ಧ ಸಸ್ಯಾಹಾರವನ್ನಷ್ಟೇ ಸ್ವೀಕರಿಸುತ್ತಿರುವುದೇ ತಮ್ಮ ಶತಾಯುಷ್ಯದ ಗುಟ್ಟು ಎಂದು ಹೇಳುತ್ತಿದ್ದ ಭೀಮಣ್ಣಖಂಡ್ರೆ ಅವರು ಭಾಲ್ಕಿ ಹಿರೇಮಠದ ಡಾ. ಚನ್ನಬಸವ ಪಟ್ಟದ್ದೇವರ ಪರಮ ಭಕ್ತರಾಗಿದ್ದರು. ಭೀಮಣ್ಣ ಖಂಡ್ರೆ ಅವರ ಜನಪರ ಕಾರ್ಯಗಳನ್ನು ಮೆಚ್ಚಿ ಪಟ್ಟದ್ದೇವರು ಭೀಮಣ್ಣ ಅವರಿಗೆ ಲೋಕನಾಯಕ ಎಂಬ ಬಿರುದು ನೀಡಿದ್ದರು.</p>



<p><strong>ಸಂಜೆ ಅಂತ್ಯಕ್ರಿಯೆ: </strong>ಶನಿವಾರ ಬೆಳಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್‌ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು, ಸಂಜೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.</p>
<p>The post <a href="https://samyuktakarnataka.in/districts/bidar/politician-bhimanna-khandre-is-no-more/">ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಗಾಳಿಪಟದ ದಾರ ಕುತ್ತಿಗೆ ಕೊಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು</title>
		<link>https://samyuktakarnataka.in/districts/bidar/chitaguppa-bidar-china-nylon-kite-string-death-national-highway-65/</link>
		
		<dc:creator><![CDATA[Samyukta Karnataka]]></dc:creator>
		<pubDate>Wed, 14 Jan 2026 08:36:23 +0000</pubDate>
				<category><![CDATA[ಬೀದರ್]]></category>
		<category><![CDATA[bidar]]></category>
		<guid isPermaLink="false">https://samyuktakarnataka.in/?p=89539</guid>

					<description><![CDATA[<p>ಬೀದರ್: ಜಿಲ್ಲೆಯ ಚಿಟಗುಪ್ಪ (ತಾಲೂಕು) ವ್ಯಾಪ್ತಿಯಲ್ಲಿ ನಿಷೇಧಿತ ಚೈನಾ ನೈಲಾನ್ ಗಾಳಿಪಟದ ದಾರ ಮತ್ತೊಂದು ಅಮಾಯಕ ಜೀವವನ್ನು ಬಲಿ ತೆಗೆದುಕೊಂಡಿದೆ. ರಾಷ್ಟ್ರೀಯ ಹೆದ್ದಾರಿ 65ರ ಮೇಲೆ ಬುಧವಾರ ಬೆಳಗ್ಗೆ ನಡೆದ ಭೀಕರ ಘಟನೆಯಲ್ಲಿ, ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ನೈಲಾನ್ ದಾರ ಸಿಲುಕಿ ತೀವ್ರ ರಕ್ತಸ್ರಾವವಾಗಿದ್ದು, ವ್ಯಕ್ತಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತ ವ್ಯಕ್ತಿಯ ವಿವರ: ಈ ದುರ್ಘಟನೆಯಲ್ಲಿ ಮೃತಪಟ್ಟವರು ಬಂಬುಳಾಗಿ ಗ್ರಾಮದ ವಿಜಯಕುಮಾರ್ ಹೊಸಮನಿ (43) ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ, ಹುಮನಾಬಾದ್‌ನಲ್ಲಿ ವಾಸವಾಗಿರುವ ತಮ್ಮ [&#8230;]</p>
<p>The post <a href="https://samyuktakarnataka.in/districts/bidar/chitaguppa-bidar-china-nylon-kite-string-death-national-highway-65/">ಗಾಳಿಪಟದ ದಾರ ಕುತ್ತಿಗೆ ಕೊಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p><strong>ಬೀದರ್:</strong> ಜಿಲ್ಲೆಯ ಚಿಟಗುಪ್ಪ (ತಾಲೂಕು) ವ್ಯಾಪ್ತಿಯಲ್ಲಿ ನಿಷೇಧಿತ ಚೈನಾ ನೈಲಾನ್ ಗಾಳಿಪಟದ ದಾರ ಮತ್ತೊಂದು ಅಮಾಯಕ ಜೀವವನ್ನು ಬಲಿ ತೆಗೆದುಕೊಂಡಿದೆ. ರಾಷ್ಟ್ರೀಯ ಹೆದ್ದಾರಿ 65ರ ಮೇಲೆ ಬುಧವಾರ ಬೆಳಗ್ಗೆ ನಡೆದ ಭೀಕರ ಘಟನೆಯಲ್ಲಿ, ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ನೈಲಾನ್ ದಾರ ಸಿಲುಕಿ ತೀವ್ರ ರಕ್ತಸ್ರಾವವಾಗಿದ್ದು, ವ್ಯಕ್ತಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.</p>



<p><strong>ಮೃತ ವ್ಯಕ್ತಿಯ ವಿವರ:</strong> ಈ ದುರ್ಘಟನೆಯಲ್ಲಿ ಮೃತಪಟ್ಟವರು ಬಂಬುಳಾಗಿ ಗ್ರಾಮದ ವಿಜಯಕುಮಾರ್ ಹೊಸಮನಿ (43) ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ, ಹುಮನಾಬಾದ್‌ನಲ್ಲಿ ವಾಸವಾಗಿರುವ ತಮ್ಮ ಮಗಳನ್ನು ಕರೆದುಕೊಂಡು ಬರಲು ವಿಜಯಕುಮಾರ್ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ತಾಲಮಡಗಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮೇಲೆ ಹಾರಾಡುತ್ತಿದ್ದ ಗಾಳಿಪಟದ ನಿಷೇಧಿತ ನೈಲಾನ್ ದಾರ ಅವರ ಕಣ್ಣಿಗೆ ಕಾಣದೆ ನೇರವಾಗಿ ಕುತ್ತಿಗೆಗೆ ಸಿಲುಕಿದೆ.</p>



<p><strong>ಇದನ್ನೂ ಓದಿ:</strong> <strong><a href="https://samyuktakarnataka.in/news/international/thailand-train-accident-crane-falls-on-moving-train-22-killed/"> ಭೀಕರ ರೈಲು ದುರಂತ: ರೈಲಿನ ಮೇಲೆ ಕ್ರೇನ್ ಕುಸಿದು 22 ಪ್ರಯಾಣಿಕರು ಮೃತ್ಯು</a></strong></p>



<p><strong>ಕುತ್ತಿಗೆ ಕೊಯ್ದು ತೀವ್ರ ರಕ್ತಸ್ರಾವ:</strong> ನೈಲಾನ್ ದಾರ ಕುತ್ತಿಗೆಗೆ ಸಿಲುಕಿದ ಕ್ಷಣದಲ್ಲೇ ಅದು ತೀಕ್ಷ್ಣವಾಗಿ ಕುತ್ತಿಗೆ ಕೊಯ್ದಿದ್ದು, ವಿಜಯಕುಮಾರ್ ಅವರಿಗೆ ತೀವ್ರ ರಕ್ತಸ್ರಾವವಾಗಿದೆ. ರಕ್ಷಣೆಗೆ ಅವಕಾಶವೇ ಸಿಗದೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಭಾರೀ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.</p>



<p><strong>ಪೊಲೀಸ್ ಕ್ರಮ: </strong>ಘಟನೆ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತಕ್ಕೆ ನಿಷೇಧಿತ ನೈಲಾನ್ ದಾರವೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಸ್ಪಷ್ಟವಾಗಿದೆ.</p>



<p><strong>ಇದನ್ನೂ ಓದಿ:</strong> <strong><a href="https://samyuktakarnataka.in/districts/dharwad/cid-probe-begins-in-sujatha-handi-assault-case-hubballi/"> </a><a href="https://samyuktakarnataka.in/districts/chitradurga/by-vijayendra-statement-chitradurga-bjp-ballari-to-bengaluru-padayatra/">ಜ.17ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ</a></strong></p>



<p><strong>ಇದೇ ಮೊದಲಲ್ಲ – ಇತ್ತೀಚಿನ ಮತ್ತೊಂದು ಘಟನೆ: </strong>ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಗಾಳಿಪಟಕ್ಕಾಗಿ ತಾಲೂಕಿನಲ್ಲಿ ಚೈನಾ ನಿರ್ಮಿತ ನಿಷೇಧಿತ ನೈಲಾನ್ ದಾರ ಮತ್ತು ಮಾಂಜದ ಬಳಕೆ ಹೆಚ್ಚಾಗಿರುವುದು ಆತಂಕಕಾರಿ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಕಳೆದ ಶನಿವಾರವಷ್ಟೇ, ಚಿಟಗುಪ್ಪ ಪಟ್ಟಣದಲ್ಲಿ ತನ್ನ ತಾಯಿಯೊಂದಿಗೆ ರಸ್ತೆ ಮೇಲೆ ತೆರಳುತ್ತಿದ್ದ ಬಾಲಕನ ಕೈಗೆ ನೈಲಾನ್ ಮಾಂಜದ ದಾರ ಸಿಲುಕಿದ್ದು, ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ಆತನನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.</p>



<p><strong>ಆಡಳಿತದ ಎಚ್ಚರಿಕೆ – ಮಾರಾಟಕ್ಕೆ ನಿಷೇಧ: </strong>ಈ ಘಟನೆಗಳ ಬೆನ್ನಲ್ಲೇ, ಚಿಟಗುಪ್ಪ ಪುರಸಭೆ ಪ್ರಾಂಗಣದಲ್ಲಿ ಗಾಳಿಪಟ ಮಾರಾಟಗಾರರ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ತಹಸೀಲ್ದಾರ್ ಮಂಜುನಾಥ್ ಪಂಚಾಳ್ ಅಧ್ಯಕ್ಷತೆ ವಹಿಸಿದ್ದು, ಪುರಸಭೆ ಮುಖ್ಯ ಅಧಿಕಾರಿ ಸತೀಶ್ ಗುಡ್ಡೆ, ಪೊಲೀಸ್ ಎಎಸ್‌ಐ ಭೀಮರಾವ್ ರಾಠೋಡ್ ಉಪಸ್ಥಿತರಿದ್ದರು.</p>



<p><strong>ಇದನ್ನೂ ಓದಿ:</strong> <strong><a href="https://samyuktakarnataka.in/districts/dharwad/cid-probe-begins-in-sujatha-handi-assault-case-hubballi/"> </a><a href="https://samyuktakarnataka.in/districts/bengaluru/lalbagh-flower-show-2026-tejaswi-life-and-literature-theme/">ತೇಜಸ್ವಿ – ವಿಸ್ಮಯ : ಲಾಲ್‌ಬಾಗ್‌ನಲ್ಲಿ ಜ.14ರಿಂದ ಫಲಪುಷ್ಪ ಪ್ರದರ್ಶನ</a></strong></p>



<p>ಸಭೆಯಲ್ಲಿ, ನಿಷೇಧಿತ ಚೈನಾ ನೈಲಾನ್ ದಾರ ಮತ್ತು ಮಾಂಜವನ್ನು ಮಾರಾಟ ಮಾಡಬಾರದು. ಸೂಚನೆ ಮೀರಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದು ಗಾಳಿಪಟ ಮಾರಾಟಗಾರರಿಗೆ ಕಠಿಣ ಎಚ್ಚರಿಕೆ ನೀಡಲಾಗಿತ್ತು.</p>



<p><strong>ಜೀವವೇ ಮೌಲ್ಯ – ಸಾರ್ವಜನಿಕರಲ್ಲಿ ಮನವಿ: </strong>ಒಂದೆಡೆ ಹಬ್ಬದ ಸಂಭ್ರಮ, ಇನ್ನೊಂದೆಡೆ ಅಮಾಯಕ ಜೀವಗಳ ನಾಶ – ಈ ಘಟನೆಗಳು ನಿಷೇಧಿತ ನೈಲಾನ್ ದಾರದ ಅಪಾಯವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿವೆ. ಸಾರ್ವಜನಿಕರು, ಪೋಷಕರು ಹಾಗೂ ವ್ಯಾಪಾರಿಗಳು ಜವಾಬ್ದಾರಿಯಿಂದ ವರ್ತಿಸಬೇಕೆಂಬ ಆಗ್ರಹ ಸ್ಥಳೀಯರಿಂದ ಕೇಳಿಬರುತ್ತಿದೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<div class="youtube-embed" data-video_id="HwaoTboWHuo"><iframe loading="lazy" title="ಮಕರ ಸಂಕ್ರಾತಿ ಎಳ್ಳು ಬೆಲ್ಲ ವಿಶೇಷತೆ | Samyukta Karnataka Digital: One Voice, One Karnataka" width="696" height="392" src="https://www.youtube.com/embed/HwaoTboWHuo?feature=oembed&#038;enablejsapi=1" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe></div>
</div></figure>
<p>The post <a href="https://samyuktakarnataka.in/districts/bidar/chitaguppa-bidar-china-nylon-kite-string-death-national-highway-65/">ಗಾಳಿಪಟದ ದಾರ ಕುತ್ತಿಗೆ ಕೊಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
	</channel>
</rss>
