<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ದಕ್ಷಿಣ ಕನ್ನಡ Archives - Samyukta Karnataka</title>
	<atom:link href="https://samyuktakarnataka.in/category/districts/dakshina-kannada/feed/" rel="self" type="application/rss+xml" />
	<link>https://samyuktakarnataka.in/category/districts/dakshina-kannada/</link>
	<description>News that connects you to Karnataka since 1921</description>
	<lastBuildDate>Wed, 27 May 2026 12:04:10 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0</generator>

<image>
	<url>https://samyuktakarnataka.in/wp-content/uploads/2025/07/SK-FAVICON-150x146.jpg</url>
	<title>ದಕ್ಷಿಣ ಕನ್ನಡ Archives - Samyukta Karnataka</title>
	<link>https://samyuktakarnataka.in/category/districts/dakshina-kannada/</link>
	<width>32</width>
	<height>32</height>
</image> 
	<item>
		<title>ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ ಜಿಯೋ ಸಂಪರ್ಕ ಬಲವರ್ಧನೆ</title>
		<link>https://samyuktakarnataka.in/districts/dakshina-kannada/jio-connectivity-strengthened-at-siri-matrushri-industrial-park/</link>
		
		<dc:creator><![CDATA[Samyukta Karnataka]]></dc:creator>
		<pubDate>Wed, 27 May 2026 12:04:09 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<guid isPermaLink="false">https://samyuktakarnataka.in/?p=99125</guid>

					<description><![CDATA[<p>ಬೆಳ್ತಂಗಡಿ: ಧರ್ಮಸ್ಥಳದ ಪ್ರತಿಷ್ಠಿತ ಗ್ರಾಮೋದ್ಯೋಗ ಸಂಸ್ಥೆಯಾಗಿರುವ, ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ ಸಂಸ್ಥೆಯಲ್ಲಿ ರಿಲಯನ್ಸ್‌ ಜಿಯೊದ ಹೊಸ ಮೊಬೈಲ್‌ ಟವರ್‌ಅನ್ನು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಾಲಯ ಕ್ಷೇತ್ರದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ಇದರೊಂದಿಗೆ ಈ ಪ್ರದೇಶದಲ್ಲಿ ರಿಲಯನ್ಸ್‌ ಜಿಯೊ ತನ್ನ ನೆಟ್‌ವರ್ಕ್‌ ಅನ್ನು ಬಲಪಡಿಸಿದೆ. ಹೊಸದಾಗಿ ಉದ್ಘಾಟಿಸಲಾದ ಜಿಯೊ ಮೊಬೈಲ್‌ ಟವರ್‌ನಿಂದಾಗಿ ಈ ಕೈಗಾರಿಕಾ ಪಾರ್ಕ್ ಮತ್ತು ಹತ್ತಿರದ ಪ್ರದೇಶಗಳಲ್ಲಿ ಡಿಜಿಟಲ್ ಸಂಪರ್ಕವು ಗಮನಾರ್ಹವಾಗಿ ವೃದ್ಧಿಸಲಿದೆ. ಇದು ಉದ್ಯಮಿಗಳು, ಮಹಿಳಾ ಸ್ವಸಹಾಯ ಗುಂಪುಗಳು, ಉದ್ಯೋಗಿಗಳು, [&#8230;]</p>
<p>The post <a href="https://samyuktakarnataka.in/districts/dakshina-kannada/jio-connectivity-strengthened-at-siri-matrushri-industrial-park/">ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ ಜಿಯೋ ಸಂಪರ್ಕ ಬಲವರ್ಧನೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಬೆಳ್ತಂಗಡಿ:</strong> ಧರ್ಮಸ್ಥಳದ ಪ್ರತಿಷ್ಠಿತ ಗ್ರಾಮೋದ್ಯೋಗ ಸಂಸ್ಥೆಯಾಗಿರುವ, ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ ಸಂಸ್ಥೆಯಲ್ಲಿ ರಿಲಯನ್ಸ್‌ ಜಿಯೊದ ಹೊಸ ಮೊಬೈಲ್‌ ಟವರ್‌ಅನ್ನು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಾಲಯ ಕ್ಷೇತ್ರದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ಇದರೊಂದಿಗೆ ಈ ಪ್ರದೇಶದಲ್ಲಿ ರಿಲಯನ್ಸ್‌ ಜಿಯೊ ತನ್ನ ನೆಟ್‌ವರ್ಕ್‌ ಅನ್ನು ಬಲಪಡಿಸಿದೆ.</p>



<p class="wp-block-paragraph">ಹೊಸದಾಗಿ ಉದ್ಘಾಟಿಸಲಾದ ಜಿಯೊ ಮೊಬೈಲ್‌ ಟವರ್‌ನಿಂದಾಗಿ ಈ ಕೈಗಾರಿಕಾ ಪಾರ್ಕ್ ಮತ್ತು ಹತ್ತಿರದ ಪ್ರದೇಶಗಳಲ್ಲಿ ಡಿಜಿಟಲ್ ಸಂಪರ್ಕವು ಗಮನಾರ್ಹವಾಗಿ ವೃದ್ಧಿಸಲಿದೆ. ಇದು ಉದ್ಯಮಿಗಳು, ಮಹಿಳಾ ಸ್ವಸಹಾಯ ಗುಂಪುಗಳು, ಉದ್ಯೋಗಿಗಳು, ಸ್ಥಳೀಯ ನಿವಾಸಿಗಳು, ವಿದ್ಯಾರ್ಥಿಗಳು ಮತ್ತು ಸಂದರ್ಶಕರಿಗೆ ಪ್ರಯೋಜನಕಾರಿಯಾಗಲಿದೆ. ಉದ್ಯಮಗಳಿಗೆ ತಡೆರಹಿತ ಸಂವಹನ, ಡಿಜಿಟಲ್ ಸೌಕರ್ಯ, ಆನ್‌ಲೈನ್ ಕಲಿಕೆ, ವ್ಯಾಪಾರ ಕಾರ್ಯಾಚರಣೆಗಳು ಮತ್ತು ಸುಧಾರಿತ ಗ್ರಾಹಕ ಸೇವೆಗೆ ಸಹಕರಿಸಲಿದೆ.</p>



<p class="wp-block-paragraph">ಸಿರಿ ಮಾತೃಶ್ರೀ ಕೈಗಾರಿಕಾ ಉದ್ಯಾನವನವು ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಭಾಗವಾಗಿದೆ. ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀರೇಂದ್ರ ಹೆಗ್ಗಡೆ ಅವರ ಕನಸಿನ ಕೂಸು. ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಸ್ಥಾಪನೆಗೊಂಡ ಈ ಸಂಸ್ಥೆ ಇಂದು ಅಕ್ಷರಶಃ ಉದ್ಯೋಗ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದೆ. ಐದು ಸಾವಿರಕ್ಕೂ ಹೆಚ್ಚು ಕುಟುಂಬಗಳ ಸ್ವಾವಲಂಬಿ ಬದುಕಿಗೆ ನೆರವಾಗಿದೆ. ಬೆಳ್ತಂಗಡಿ ಮತ್ತು ಸುತ್ತಮುತ್ತಲ ಊರಿನ ಮಹಿಳೆಯರು ಇಂದು ಭರವಸೆಯ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಿರಿ ಉತ್ಪನ್ನಗಳು ಇಂದು ರಾಜ್ಯವ್ಯಾಪಿ ಜನಪ್ರಿಯವಾಗಿವೆ.</p>



<p class="wp-block-paragraph">ಸಂಸ್ಥೆಯ ವಹಿವಾಟಿನಲ್ಲಿ ಸಿಗುವ ಲಾಭಾಂಶವನ್ನು ಮತ್ತೆ ಸಂಸ್ಥೆ ಉದ್ಯೋಗಿಗಳು ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಇಲ್ಲಿ ವಿನಿಯೋಗಿಸಲಾಗುತ್ತದೆ ಎನ್ನುವುದು ವಿಶೇಷ. ಈ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಉಡುಪುಗಳು, ಅಗರಬತ್ತಿಗಳು, ಆಹಾರ ಉತ್ಪನ್ನಗಳು, ಬೇಕರಿ ವಸ್ತುಗಳು, ರಾಗಿಯ ಉತ್ಪನ್ನಗಳು, ರಾಸಾಯನಿಕ ಉತ್ಪನ್ನಗಳು ಮತ್ತು ರೆಕ್ಸಿನ್ ಬ್ಯಾಗ್‌ಗಳು ಸೇರಿದಂತೆ ಸ್ಥಳೀಯವಾಗಿ ನಾನಾ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಸಾವಿರಾರು ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದೆ.</p>



<p class="wp-block-paragraph">ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಗ್ರಾಮೀಣ ಸಮುದಾಯಗಳು, ಮಹಿಳಾ ಉದ್ಯಮಿಗಳು ಮತ್ತು ಸಣ್ಣ ವ್ಯವಹಾರಗಳನ್ನು ಸಬಲೀಕರಣಗೊಳಿಸುವಲ್ಲಿ ಡಿಜಿಟಲ್ ಮೂಲಸೌಕರ್ಯದ ಮಹತ್ವವನ್ನು ಮನಗಂಡಿದೆ. ಸುಧಾರಿತ ಇಂಟರ್‌ ನೆಟ್ ಸಂಪರ್ಕವು ಶಿಕ್ಷಣ, ಡಿಜಿಟಲ್ ವಾಣಿಜ್ಯ, ಸಂವಹನ ಮತ್ತು ಜೀವನೋಪಾಯದ ಅವಕಾಶಗಳನ್ನು ಸಕ್ರಿಯಗೊಳಿಸುತ್ತದೆ. ಸ್ಥಳೀಯ ಉದ್ಯಮಗಳು ಮತ್ತು ಸ್ವ-ಸಹಾಯ ಗುಂಪುಗಳ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಬೆಂಬಲಿಸುತ್ತದೆ.</p>



<p class="wp-block-paragraph">ನಗರಗಳು, ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಹೆಚ್ಚಿನ ವೇಗದ ಡಿಜಿಟಲ್ ಸೇವೆಗಳನ್ನು ಒದಗಿಸಲು ರಿಲಯನ್ಸ್ ಜಿಯೋ ಕರ್ನಾಟಕದಾದ್ಯಂತ ತನ್ನ ನೆಟ್‌ವರ್ಕ್ ಜಾಲವನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ತನ್ನ ಬಲಿಷ್ಠ ಮತ್ತು ವ್ಯಾಪಕವಾದ ನೆಟ್‌ವರ್ಕ್ ಮೂಲಸೌಕರ್ಯದೊಂದಿಗೆ, ಜಿಯೋ ತನ್ನ ಗ್ರಾಹಕರಿಗೆ ಅಡೆತಡೆಯಿಲ್ಲದ ಅನಿಯಮಿತ ಧ್ವನಿ ಮತ್ತು ಡೇಟಾ ಸೇವೆಗಳು ಮತ್ತು ಜಿಯೋಟಿವಿ ಮತ್ತು ಜಿಯೋಸಿನಿಮಾದಂತಹ ಹಲವಾರು ಡಿಜಿಟಲ್ ಸೇವೆಗಳನ್ನು ನೀಡುತ್ತದೆ. ಅನುಕೂಲಕರ ಸಿಮ್ ಮತ್ತು ಸರಳೀಕೃತ ಆನ್‌ಬೋರ್ಡಿಂಗ್ ಸೇವೆಗಳನ್ನು ನೀಡುತ್ತದೆ.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="4U8W5lr9QJ"><a href="https://samyuktakarnataka.in/news/india/supreme-court-notice-cbse-three-language-policy-nep-2020/">CBSE ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ನೋಟಿಸ್</a></blockquote><iframe class="wp-embedded-content" sandbox="allow-scripts" security="restricted"  title="“CBSE ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ನೋಟಿಸ್” — Samyukta Karnataka" src="https://samyuktakarnataka.in/news/india/supreme-court-notice-cbse-three-language-policy-nep-2020/embed/#?secret=AwgRLB7A2K#?secret=4U8W5lr9QJ" data-secret="4U8W5lr9QJ" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/dakshina-kannada/jio-connectivity-strengthened-at-siri-matrushri-industrial-park/">ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ ಜಿಯೋ ಸಂಪರ್ಕ ಬಲವರ್ಧನೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ದೊಡ್ಡ ಆನೆಯ ಆಕ್ರಮಣದಿಂದ ಮರಿ ಆನೆ ಸಾವು</title>
		<link>https://samyuktakarnataka.in/districts/dakshina-kannada/baby-elephant-dies-after-being-attacked-by-larger-elephant/</link>
		
		<dc:creator><![CDATA[Samyukta Karnataka]]></dc:creator>
		<pubDate>Mon, 25 May 2026 16:02:14 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<guid isPermaLink="false">https://samyuktakarnataka.in/?p=99012</guid>

					<description><![CDATA[<p>ಸುಳ್ಯ: ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆ ಎಂಬಲ್ಲಿ ಮರಿ ಆನೆಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಬೆದ್ರುಪಣೆಯ ಸ್ಥಳೀಯರ ತೋಟದ ಮಧ್ಯೆ ಅಂದಾಜು ಒಂದು ವರ್ಷ ಪ್ರಾಯದ ಮರಿ ಆನೆ ಮೃತಪಟ್ಟ ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಕಂಡು ಬಂದಿತ್ತು. ಭಾನುವಾರ ರಾತ್ರಿಯಿಂದ ಈ ಭಾಗದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕ ಕೃಷಿ ಹಾನಿ ಮಾಡಿತ್ತು. ಈ ಹಿಂಡಿನಲ್ಲಿದ್ದ ಹೆಣ್ಣು ಮರಿ ಆನೆ ಸಾವನ್ನಪ್ಪಿದೆ. ಮರಿ ಆನೆಯ ದೇಹದಲ್ಲಿ ಅಲ್ಲಲ್ಲಿ ಗಾಯಗಳು ಕಾಣಿಸಿಕೊಂಡಿದೆ. ದೊಡ್ಡ ಆನೆಯ ಆಕ್ರಮಣದಿಂದ ಗಾಯಗೊಂಡು [&#8230;]</p>
<p>The post <a href="https://samyuktakarnataka.in/districts/dakshina-kannada/baby-elephant-dies-after-being-attacked-by-larger-elephant/">ದೊಡ್ಡ ಆನೆಯ ಆಕ್ರಮಣದಿಂದ ಮರಿ ಆನೆ ಸಾವು</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಸುಳ್ಯ:</strong> ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆ ಎಂಬಲ್ಲಿ ಮರಿ ಆನೆಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಬೆದ್ರುಪಣೆಯ ಸ್ಥಳೀಯರ ತೋಟದ ಮಧ್ಯೆ ಅಂದಾಜು ಒಂದು ವರ್ಷ ಪ್ರಾಯದ ಮರಿ ಆನೆ ಮೃತಪಟ್ಟ ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಕಂಡು ಬಂದಿತ್ತು.</p>



<p class="wp-block-paragraph">ಭಾನುವಾರ ರಾತ್ರಿಯಿಂದ ಈ ಭಾಗದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕ ಕೃಷಿ ಹಾನಿ ಮಾಡಿತ್ತು. ಈ ಹಿಂಡಿನಲ್ಲಿದ್ದ ಹೆಣ್ಣು ಮರಿ ಆನೆ ಸಾವನ್ನಪ್ಪಿದೆ. ಮರಿ ಆನೆಯ ದೇಹದಲ್ಲಿ ಅಲ್ಲಲ್ಲಿ ಗಾಯಗಳು ಕಾಣಿಸಿಕೊಂಡಿದೆ. ದೊಡ್ಡ ಆನೆಯ ಆಕ್ರಮಣದಿಂದ ಗಾಯಗೊಂಡು ಆನೆ ಮರಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.</p>



<p class="wp-block-paragraph">ಸುಳ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪೈ, ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ನೇತೃತ್ವದ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ವನ್ಯಜೀವಿ ತಜ್ಞರಾದ ಡಾ. ಯಶಸ್ವಿ ಅವರು ಆಗಮಿಸಿ ಮರಿ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಆನೆಯ ಮೃತದೇಹವನ್ನು ದಫನ ಮಾಡಲಾಯಿತು.</p>



<p class="wp-block-paragraph">ಆನೆ ಮರಿಯ ದೇಹದಲ್ಲಿ ಅಲ್ಲಲ್ಲಿ ಗಾಯದ ಗುರುತುಗಳಿದ್ದು ಆನೆಯ ದೇಹದ ಒಳಗಡೆ ಗಾಯಗಳಿಂದ ರಕ್ತಸ್ರಾವ ಉಂಟಾಗಿದ್ದು, ರಕ್ತ ಹೆಪ್ಪುಗಟ್ಟಿತ್ತು ಮತ್ತು ಅಂಗಾಂಗಗಳಿಗೆ ಹಾನಿ ಉಂಟಾಗಿತ್ತು ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರುಗಳು ತಿಳಿಸಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>



<p class="wp-block-paragraph">ಹಿಂಡಿನಲ್ಲಿ ಇರುವ ಗಂಡು ಆನೆ ಅಥವಾ ಹೊರಗಿನಿಂದ ಬಂದ ಗಂಡು ಆನೆಯು ಮರಿ ಆನೆಯ ಮೇಲೆ ದಾಳಿ ಮಾಡಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="H7xM7Ux3bo"><a href="https://samyuktakarnataka.in/news/india/tamil-nadu-cm-joseph-vijay-announces-farm-loan-waiver-aiadmk-mlas-join-tvk/">ತಮಿಳುನಾಡಿನಲ್ಲಿ ರೈತರಿಗೆ ₹50,000ವರೆಗೆ ಬೆಳೆ ಸಾಲ ಮನ್ನಾ</a></blockquote><iframe class="wp-embedded-content" sandbox="allow-scripts" security="restricted"  title="“ತಮಿಳುನಾಡಿನಲ್ಲಿ ರೈತರಿಗೆ ₹50,000ವರೆಗೆ ಬೆಳೆ ಸಾಲ ಮನ್ನಾ” — Samyukta Karnataka" src="https://samyuktakarnataka.in/news/india/tamil-nadu-cm-joseph-vijay-announces-farm-loan-waiver-aiadmk-mlas-join-tvk/embed/#?secret=k5JCw0We4i#?secret=H7xM7Ux3bo" data-secret="H7xM7Ux3bo" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/dakshina-kannada/baby-elephant-dies-after-being-attacked-by-larger-elephant/">ದೊಡ್ಡ ಆನೆಯ ಆಕ್ರಮಣದಿಂದ ಮರಿ ಆನೆ ಸಾವು</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಕುದುರೆಮುಖ ಕಂಪನಿಯನ್ನು NMDCಗೆ ವಿಲೀನಗೊಳಿಸಲು ಮನವಿ</title>
		<link>https://samyuktakarnataka.in/districts/dakshina-kannada/bharath-shetty-urges-centre-to-merge-kiocl-with-nmdc/</link>
		
		<dc:creator><![CDATA[Samyukta Karnataka]]></dc:creator>
		<pubDate>Mon, 25 May 2026 12:28:35 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<guid isPermaLink="false">https://samyuktakarnataka.in/?p=98983</guid>

					<description><![CDATA[<p>ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (NMDC) ಜೊತೆ ವಿಲೀನಗೊಳಿಸಿ, ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಆಗ್ರಹಿಸಿದರು. ಜಿಲ್ಲೆಯ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ [&#8230;]</p>
<p>The post <a href="https://samyuktakarnataka.in/districts/dakshina-kannada/bharath-shetty-urges-centre-to-merge-kiocl-with-nmdc/">ಕುದುರೆಮುಖ ಕಂಪನಿಯನ್ನು NMDCಗೆ ವಿಲೀನಗೊಳಿಸಲು ಮನವಿ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಮಂಗಳೂರು:</strong> ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (NMDC) ಜೊತೆ ವಿಲೀನಗೊಳಿಸಿ, ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>



<p class="wp-block-paragraph">ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಆಗ್ರಹಿಸಿದರು. ಜಿಲ್ಲೆಯ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ ಮತ್ತು ಬಂಡವಾಳ ಹೂಡಿಕೆಗೆ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಬೇಕು ಎಂದು ಮನವಿ ಮಾಡಿದರು.</p>



<p class="wp-block-paragraph">ಕೇಂದ್ರದ ಅಧೀನದಲ್ಲಿರುವ ಕೈಗಾರಿಕೆಗಳ ಅಭಿವೃದ್ಧಿ ಕಾರ್ಯಗಳನ್ನು ಖುದ್ದಾಗಿ ಪರಿಶೀಲಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಸಚಿವ ಕುಮಾರಸ್ವಾಮಿ ಅವರನ್ನು ಅವರು ಆಹ್ವಾನಿಸಿದರು. ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವ ಮೂಲಕ ಜಿಲ್ಲೆಯಲ್ಲಿ ಕೈಗಾರಿಕಾ ವಾತಾವರಣವನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.</p>



<p class="wp-block-paragraph">ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (KIOCL) ಸಂಸ್ಥೆಯ ಕಾರ್ಯಾಚರಣೆ ರಾಜ್ಯ ಸರ್ಕಾರದಿಂದ ಗಣಿಗಾರಿಕೆಗೆ ಅನುಮತಿ ಸಿಗದ ಕಾರಣ ಗಂಭೀರ ಸಂಕಷ್ಟ ಎದುರಿಸುತ್ತಿದೆ ಎಂದು ಭರತ್ ಶೆಟ್ಟಿ ತಿಳಿಸಿದರು. “ಗಣಿಗಾರಿಕೆ ಅನುಮತಿ ಇಲ್ಲದ ಕಾರಣ ಕಂಪನಿಯ ಕಾರ್ಯಚಟುವಟಿಕೆಗಳಿಗೆ ತೀವ್ರ ತೊಡಕು ಉಂಟಾಗಿದೆ. ಇದರಿಂದ ಕಾರ್ಮಿಕರ ಭವಿಷ್ಯ ಅತಂತ್ರವಾಗಿದೆ” ಎಂದು ಅವರು ಆತಂಕ ವ್ಯಕ್ತಪಡಿಸಿದರು.</p>



<p class="wp-block-paragraph">ಈ ವಿಷಯವನ್ನು ಕಳೆದ ವಿಧಾನಸಭಾ ಅಧಿವೇಶನದಲ್ಲಿಯೂ ಪ್ರಸ್ತಾಪಿಸಿದ್ದಾಗಿ ಹೇಳಿದ ಶಾಸಕರು, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಯಾವುದೇ ಸ್ಪಂದನೆ ನೀಡಿಲ್ಲ ಎಂದು ಆರೋಪಿಸಿದರು. ಹೀಗಾಗಿ ಗಣಿಗಾರಿಕೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಮೇಲೆ ಕೇಂದ್ರ ಸರ್ಕಾರ ಒತ್ತಡ ಹೇರಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>



<p class="wp-block-paragraph">ಕುದುರೆಮುಖ ಸಂಸ್ಥೆಯನ್ನು ಎನ್‌ಎಂಡಿಸಿಯೊಂದಿಗೆ ವಿಲೀನಗೊಳಿಸಿದರೆ ಸಂಸ್ಥೆಯ ಪುನಶ್ಚೇತನಕ್ಕೆ ನೆರವಾಗುವುದಲ್ಲದೆ, ಕರಾವಳಿ ಭಾಗದ ಕೈಗಾರಿಕಾ ಅಭಿವೃದ್ಧಿಗೂ ಹೊಸ ಚೈತನ್ಯ ಸಿಗಲಿದೆ ಎಂದು ಭರತ್ ಶೆಟ್ಟಿ ಅಭಿಪ್ರಾಯಪಟ್ಟರು. ಇದರಿಂದ ಉದ್ಯೋಗಾವಕಾಶಗಳು ಹೆಚ್ಚುವ ಜೊತೆಗೆ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದು ಹೇಳಿದರು.</p>



<p class="wp-block-paragraph">ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇನ್ನಿತರ ಕೈಗಾರಿಕಾ ಸಮಸ್ಯೆಗಳ ಕುರಿತೂ ಸಚಿವರೊಂದಿಗೆ ಚರ್ಚೆ ನಡೆಸಿ, ವಿವರವಾದ ಮನವಿ ಪತ್ರವನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆಯನ್ನು ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು. <a href="https://t.co/ECk9U2bgCP">pic.twitter.com/ECk9U2bgCP</a></p>&mdash; Samyukta Karnataka (@SamyuktaKarnatk) <a href="https://twitter.com/SamyuktaKarnatk/status/2058884584285290637?ref_src=twsrc%5Etfw">May 25, 2026</a></blockquote><script async src="https://platform.twitter.com/widgets.js" charset="utf-8"></script>
</div></figure>
<p>The post <a href="https://samyuktakarnataka.in/districts/dakshina-kannada/bharath-shetty-urges-centre-to-merge-kiocl-with-nmdc/">ಕುದುರೆಮುಖ ಕಂಪನಿಯನ್ನು NMDCಗೆ ವಿಲೀನಗೊಳಿಸಲು ಮನವಿ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>“ಕೇಂದ್ರ ಅನುದಾನದಿಂದಲೇ ದಕ್ಷಿಣ ಕನ್ನಡ ಅಭಿವೃದ್ಧಿ”: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ</title>
		<link>https://samyuktakarnataka.in/districts/dakshina-kannada/vedavyas-kamat-slams-karnataka-government-over-mangaluru-development/</link>
		
		<dc:creator><![CDATA[Samyukta Karnataka]]></dc:creator>
		<pubDate>Thu, 21 May 2026 13:09:48 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<guid isPermaLink="false">https://samyuktakarnataka.in/?p=98672</guid>

					<description><![CDATA[<p>ಮಂಗಳೂರಿಗೆ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿಗರ ಒತ್ತಾಯ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ಕೇಂದ್ರ ಸರ್ಕಾರದ ಅನುದಾನದಿಂದ ನಡೆಯುತ್ತಿವೆ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್‌ ಕಾಮತ್‌ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಅಟಲ್‌ಸೇವಾ ಕೇಂದ್ರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಮಂಗಳೂರು ಅಭಿವೃದ್ಧಿಗೆ ಯಾವುದೇ ಸಮರ್ಪಕ ಅನುದಾನ ಬಿಡುಗಡೆ ಮಾಡದೇ ನಿರ್ಲಕ್ಷ್ಯ ವಹಿಸಿದೆ [&#8230;]</p>
<p>The post <a href="https://samyuktakarnataka.in/districts/dakshina-kannada/vedavyas-kamat-slams-karnataka-government-over-mangaluru-development/">“ಕೇಂದ್ರ ಅನುದಾನದಿಂದಲೇ ದಕ್ಷಿಣ ಕನ್ನಡ ಅಭಿವೃದ್ಧಿ”: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಮಂಗಳೂರಿಗೆ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿಗರ ಒತ್ತಾಯ</strong></p>



<p class="wp-block-paragraph">ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ಕೇಂದ್ರ ಸರ್ಕಾರದ ಅನುದಾನದಿಂದ ನಡೆಯುತ್ತಿವೆ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್‌ ಕಾಮತ್‌ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.</p>



<p class="wp-block-paragraph">ಮಂಗಳೂರಿನ ಅಟಲ್‌ಸೇವಾ ಕೇಂದ್ರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಮಂಗಳೂರು ಅಭಿವೃದ್ಧಿಗೆ ಯಾವುದೇ ಸಮರ್ಪಕ ಅನುದಾನ ಬಿಡುಗಡೆ ಮಾಡದೇ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.</p>



<p class="wp-block-paragraph">ಜಿಲ್ಲೆಯ ಅಭಿವೃದ್ಧಿ ಕುರಿತು ಗಮನಹರಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಎರಡು ತಿಂಗಳಿಗೊಮ್ಮೆ ಮಾತ್ರ ಜಿಲ್ಲೆಗೆ ಬರುತ್ತಿದ್ದಾರೆ. ಅದೂ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಗಳಿಗೆ ಮಾತ್ರ ಬರುತ್ತಿದ್ದು, ಅಭಿವೃದ್ಧಿ ಕುರಿತು ಚರ್ಚಿಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಟೀಕಿಸಿದರು.</p>



<p class="wp-block-paragraph"><strong>ಪಿಂಚಣಿ ಸಿಗದೆ ಜನ ಸಂಕಷ್ಟ :</strong> ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಸಾಮಾಜಿಕ ಭದ್ರತಾ ಪಿಂಚಣಿಗಳು ಸರಿಯಾಗಿ ವಿತರಣೆ ಆಗುತ್ತಿಲ್ಲ. ವೃದ್ಧಾಪ್ಯ ವೇತನ, ವಿಧವಾ ವೇತನ, ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನ, ನಿವೃತ್ತ ನೌಕರರ ಪಿಂಚಣಿ ಸೇರಿದಂತೆ ಹಲವು ಯೋಜನೆಗಳ ಹಣ ಬಿಡುಗಡೆ ಆಗದೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಾಮತ್ ಆರೋಪಿಸಿದರು.</p>



<p class="wp-block-paragraph">“ಈ ಪಿಂಚಣಿಗಳನ್ನೇ ನಂಬಿ ಜೀವನ ನಡೆಸುವವರು ಪರದಾಡುತ್ತಿದ್ದಾರೆ. ಆದರೆ ಸರ್ಕಾರ ಸಾಧನಾ ಸಮಾವೇಶ ನಡೆಸುವುದರಲ್ಲಿ ಬ್ಯುಸಿಯಾಗಿದೆ” ಎಂದು ಅವರು ಕಿಡಿಕಾರಿದರು.</p>



<p class="wp-block-paragraph"><strong>ಕೇಂದ್ರ ಅನುದಾನ ಬಳಕೆ : </strong>ಮಂಗಳೂರಿನ ಕದ್ರಿ ಹಿಲ್ಸ್ ಆವರಣದಲ್ಲಿ ನಿರ್ಮಾಣವಾಗಿರುವ ಕರ್ನಾಟಕ-ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯ ಕಟ್ಟಡಕ್ಕೆ ಕೇಂದ್ರ ಸರ್ಕಾರದ ಅನುದಾನ ಬಳಸಲಾಗಿದೆ ಎಂದು ಅವರು ತಿಳಿಸಿದರು. ಸುಮಾರು ₹20.85 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಕಟ್ಟಡವನ್ನು ಕಾಂಗ್ರೆಸ್ ತನ್ನ ಸಾಧನೆ ಎಂದು ಹೇಳಿಕೊಳ್ಳುವ ಸಾಧ್ಯತೆಯಿದೆ ಎಂದು ವ್ಯಂಗ್ಯವಾಡಿದರು.</p>



<p class="wp-block-paragraph"><strong>ಮಳೆಗಾಲ ಮುನ್ನ ಕ್ರಮಕ್ಕೆ ಒತ್ತಾಯ : </strong>ಮಳೆಗಾಲಕ್ಕೆ ಕೆಲವೇ ದಿನಗಳು ಬಾಕಿ ಇದ್ದರೂ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆ ಹಾಗೂ ಚರಂಡಿಗಳ ಹೂಳೆತ್ತುವಿಕೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಶಾಸಕ ಕಾಮತ್ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿ ವಾರ್ಡ್‌ಗೆ ಗ್ಯಾಂಗ್‌ಮೆನ್ ನೇಮಕ ಸೇರಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅನೇಕ ಬಾರಿ ಸೂಚಿಸಿದ್ದರೂ ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು.</p>



<p class="wp-block-paragraph"><strong>ಮಂಗಳೂರಲ್ಲೇ ಹೈಕೋರ್ಟ್ ಪೀಠಕ್ಕೆ ಒತ್ತಾಯ :</strong> ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕು ಎಂಬುದು ಕರಾವಳಿಯ ಜನರ ಒಕ್ಕೊರಲ ಬೇಡಿಕೆಯಾಗಿದೆ ಎಂದು ಅವರು ಹೇಳಿದರು. ಸ್ಪೀಕರ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಪಕ್ಷಗಳ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳು ಈ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಲ ವಲಯಗಳಿಂದ ವಿರೋಧ ವ್ಯಕ್ತವಾಗುತ್ತಿದ್ದರೂ, ಮಂಗಳೂರಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.</p>



<p class="wp-block-paragraph">ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ನಿತಿನ್‌ಕುಮಾರ್‌, ರವಿಶಂಕರ್‌ಮಿಜಾರ್‌, ರಮೇಶ್‌ ಕಂಡೆಟ್ಟು, ಪೂರ್ಣಿಮಾ, ರಮೇಶ್‌ಹೆಗ್ಡೆ, ಸುರೇಖಾ, ಮೋಹನ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="UG5DqbPJyP"><a href="https://samyuktakarnataka.in/districts/baglkot/mahishwadagi-bridge-politics-hipparagi-barrage-water-crisis/">ಸವದಿ ಸರ್ಕಾರದಲ್ಲಿ ಮುಡದಾರಂದೇನು ಕೆಲ್ಸಾ- ಸಿದ್ದು ಸವದಿ</a></blockquote><iframe class="wp-embedded-content" sandbox="allow-scripts" security="restricted"  title="&#8220;ಸವದಿ ಸರ್ಕಾರದಲ್ಲಿ ಮುಡದಾರಂದೇನು ಕೆಲ್ಸಾ- ಸಿದ್ದು ಸವದಿ&#8221; &#8212; Samyukta Karnataka" src="https://samyuktakarnataka.in/districts/baglkot/mahishwadagi-bridge-politics-hipparagi-barrage-water-crisis/embed/#?secret=CmPeqkhwdc#?secret=UG5DqbPJyP" data-secret="UG5DqbPJyP" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/dakshina-kannada/vedavyas-kamat-slams-karnataka-government-over-mangaluru-development/">“ಕೇಂದ್ರ ಅನುದಾನದಿಂದಲೇ ದಕ್ಷಿಣ ಕನ್ನಡ ಅಭಿವೃದ್ಧಿ”: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಕರ್ನಾಟಕದ ಆರ್ಥಿಕ ಶಿಸ್ತು ಹಾಳಾಗಿದೆ: ಸರ್ಕಾರ ಈ ಬಗ್ಗೆ ಉತ್ತರಿಸಲಿ</title>
		<link>https://samyuktakarnataka.in/districts/dakshina-kannada/mp-brijesh-chowta-slams-karnataka-government-over-economic-mismanagement/</link>
		
		<dc:creator><![CDATA[Samyukta Karnataka]]></dc:creator>
		<pubDate>Wed, 20 May 2026 11:59:18 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<category><![CDATA[#KarnatakaPolitics]]></category>
		<category><![CDATA[politics]]></category>
		<guid isPermaLink="false">https://samyuktakarnataka.in/?p=98575</guid>

					<description><![CDATA[<p>ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಡೋಲಾಯಮಾನ ಸ್ಥಿತಿಗೆ: ಬ್ರಿಜೇಶ್ ಚೌಟ ಆರೋಪ ಮಂಗಳೂರು: ಕ್ಯಾ. ಬ್ರಿಜೇಶ್ ಚೌಟ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳಿರುವುದೇ ಸರ್ಕಾರದ ಮೂರು ವರ್ಷದ ಸಾಧನೆ ಎಂದು ಆರೋಪಿಸಿದ್ದಾರೆ. ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಆರ್ಥಿಕ ಶಿಸ್ತಿಗೆ ಹೆಸರುವಾಸಿಯಾಗಿತ್ತು. ಆದರೆ ಈಗ [&#8230;]</p>
<p>The post <a href="https://samyuktakarnataka.in/districts/dakshina-kannada/mp-brijesh-chowta-slams-karnataka-government-over-economic-mismanagement/">ಕರ್ನಾಟಕದ ಆರ್ಥಿಕ ಶಿಸ್ತು ಹಾಳಾಗಿದೆ: ಸರ್ಕಾರ ಈ ಬಗ್ಗೆ ಉತ್ತರಿಸಲಿ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಡೋಲಾಯಮಾನ ಸ್ಥಿತಿಗೆ: ಬ್ರಿಜೇಶ್ ಚೌಟ ಆರೋಪ</strong></p>



<p class="wp-block-paragraph">ಮಂಗಳೂರು: ಕ್ಯಾ. ಬ್ರಿಜೇಶ್ ಚೌಟ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳಿರುವುದೇ ಸರ್ಕಾರದ ಮೂರು ವರ್ಷದ ಸಾಧನೆ ಎಂದು ಆರೋಪಿಸಿದ್ದಾರೆ.</p>



<p class="wp-block-paragraph">ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಆರ್ಥಿಕ ಶಿಸ್ತಿಗೆ ಹೆಸರುವಾಸಿಯಾಗಿತ್ತು. ಆದರೆ ಈಗ ರಾಜ್ಯ ಆರ್ಥಿಕ ಕೊರತೆಯನ್ನು ಎದುರಿಸುತ್ತಿರುವುದನ್ನು ಸಿಎಜಿ ವರದಿಯೇ ಸ್ಪಷ್ಟಪಡಿಸುತ್ತಿದೆ ಎಂದು ಹೇಳಿದರು.</p>



<p class="wp-block-paragraph">“ರಾಜ್ಯ ಸರ್ಕಾರ ಸಾಧನಾ ಸಮಾವೇಶಗಳನ್ನು ನಡೆಸುತ್ತಿದೆ. ಆದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಜನರಿಗೆ ಉತ್ತರಿಸಬೇಕಾಗಿದೆ” ಎಂದು ಅವರು ಆಗ್ರಹಿಸಿದರು.</p>



<p class="wp-block-paragraph">ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಜಾರಿಯಲ್ಲೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದ ಬ್ರಿಜೇಶ್ ಚೌಟ, ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಮಂಜೂರಾದ 6.38 ಲಕ್ಷ ಮನೆಗಳಲ್ಲಿ ಸುಮಾರು 2.5 ಲಕ್ಷ ಮನೆಗಳು ಇನ್ನೂ ಅಪೂರ್ಣವಾಗಿವೆ ಎಂದು ಹೇಳಿದರು. ಅದೇ ರೀತಿ ಕ್ಷೀರಧಾರೆ ಯೋಜನೆಯಡಿ ಕಳೆದ ಒಂಬತ್ತು ತಿಂಗಳಿನಿಂದ ಸುಮಾರು ₹800 ಕೋಟಿ ಸಬ್ಸಿಡಿ ಹಣವನ್ನು ಹೈನುಗಾರರಿಗೆ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.</p>



<p class="wp-block-paragraph">ಇನ್ನೂ ₹15,000 ಕೋಟಿ ಕಾರ್ಪಸ್ ನಿಧಿಯನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂದು ಆರೋಪಿಸಿದ ಅವರು, “ಆ ಹಣವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ ಎಂಬುದಕ್ಕೆ ಸರ್ಕಾರದ ಬಳಿ ಸ್ಪಷ್ಟ ಉತ್ತರವೇ ಇಲ್ಲ” ಎಂದು ಟೀಕಿಸಿದರು. “ಸಿದ್ದರಾಮಯ್ಯ ಅವರು ಹಲವು ದಶಕಗಳ ರಾಜಕೀಯ ಅನುಭವ ಹೊಂದಿದ್ದರೂ ತಮ್ಮ ಕೊನೆಯ ಅವಧಿಯಲ್ಲಿ ಯಾಕೆ ಈ ರೀತಿಯ ಆಡಳಿತ ನಡೆಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ” ಎಂದು ವ್ಯಂಗ್ಯವಾಡಿದರು.</p>



<p class="wp-block-paragraph">ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಪರಿಸ್ಥಿತಿ ಹದಗೆಟ್ಟಿದ್ದು, ಆರೋಗ್ಯ ಇಲಾಖೆ ಸಿಎಸ್‌ಆರ್ ನಿಧಿಗಳ ಮೇಲೆ ಅವಲಂಬಿತವಾಗಿದೆ ಎಂದು ಅವರು ಆರೋಪಿಸಿದರು. “₹25 ಕೋಟಿ ಸಿಎಸ್‌ಆರ್ ಹಣದಲ್ಲಿ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುವ ಪರಿಸ್ಥಿತಿ ಬಂದಿದೆ. ಹೊಸ ನೇಮಕಾತಿ ನಡೆಯುತ್ತಿಲ್ಲ, ಸಿಬ್ಬಂದಿಗೆ ವೇತನ ನೀಡುವುದಲ್ಲಿಯೂ ತೊಂದರೆ ಇದೆ” ಎಂದು ಹೇಳಿದರು.</p>



<p class="wp-block-paragraph">ರಾಜ್ಯ ಸರ್ಕಾರದ ಅಲ್ಪಸಂಖ್ಯಾತ ಕಾಲನಿ ನಿಧಿ ಹಂಚಿಕೆ ಕ್ರಮವನ್ನು ಟೀಕಿಸಿದ ಅವರು, “ಇದು ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಿಗೆ ವಿರುದ್ಧವಾದ ಕ್ರಮ” ಎಂದು ಆರೋಪಿಸಿದರು. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯದಾದ್ಯಂತ ಜನಾಭಿಪ್ರಾಯ ನಿರ್ಮಾಣ ಮಾಡುವುದಾಗಿ ಬ್ರಿಜೇಶ್ ಚೌಟ ತಿಳಿಸಿದರು.</p>



<p class="wp-block-paragraph">ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಲ್ಲೇಖಿಸಿದ ಅವರು, “ಪ್ರತಿಯೊಂದು ವಿಷಯಕ್ಕೂ ಟ್ವೀಟ್ ಮಾಡಿ ರಾಜಕೀಯ ಮಾಡುವುದಿಲ್ಲ. ಪ್ರಿಯಾಂಕ್ ಖರ್ಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಸಾಧನೆ ಅವರ ಕ್ಷೇತ್ರಗಳ ಅಭಿವೃದ್ಧಿಯಿಂದಲೇ ಗೊತ್ತಾಗುತ್ತದೆ” ಎಂದು ಹೇಳಿದರು.</p>



<p class="wp-block-paragraph">ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಜಾಗತಿಕ ಪರಿಸ್ಥಿತಿಗಳ ಪರಿಣಾಮದಿಂದ ಈ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. “ಇದು ಸವಾಲಿನ ಪರಿಸ್ಥಿತಿಯಾದರೂ ಅದನ್ನು ಸರಿದೂಗಿಸುವ ಕೆಲಸ ನಡೆಯುತ್ತಿದೆ” ಎಂದು ತಿಳಿಸಿದರು.</p>



<p class="wp-block-paragraph">ಗ್ಯಾರಂಟಿ ಯೋಜನೆಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಯಾವುದೇ ಜನಪರ ಯೋಜನೆಗಳ ವಿರೋಧಿ ಅಲ್ಲ. ಆದರೆ ರಾಜ್ಯದ ತಪ್ಪು ಆರ್ಥಿಕ ನಿರ್ವಹಣೆಯಿಂದ ಸಮಸ್ಯೆಗಳು ಉಂಟಾಗಿವೆ ಎಂದು ಹೇಳಿದರು.</p>



<p class="wp-block-paragraph">ಸುದ್ದಿಗೋಷ್ಠಿಯಲ್ಲಿ ಶಾಂತಿ ಪ್ರಸಾದ್, ಸುಜಿತ್ ಪ್ರತಾಪ್, ಡಾ. ಮಂಜುಳಾ ರಾವ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="5bupmp3JKo"><a href="https://samyuktakarnataka.in/news/india/one-nation-one-election-jpc-says-india-could-save-rs-7-lakh-crore/">‘ಒಂದು ರಾಷ್ಟ್ರ, ಒಂದು ಚುನಾವಣೆ’: ₹7 ಲಕ್ಷ ಕೋಟಿ ಉಳಿತಾಯ &#8211; JPC</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;‘ಒಂದು ರಾಷ್ಟ್ರ, ಒಂದು ಚುನಾವಣೆ’: ₹7 ಲಕ್ಷ ಕೋಟಿ ಉಳಿತಾಯ &#8211; JPC&#8221; &#8212; Samyukta Karnataka" src="https://samyuktakarnataka.in/news/india/one-nation-one-election-jpc-says-india-could-save-rs-7-lakh-crore/embed/#?secret=SGG9lUtCEn#?secret=5bupmp3JKo" data-secret="5bupmp3JKo" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/dakshina-kannada/mp-brijesh-chowta-slams-karnataka-government-over-economic-mismanagement/">ಕರ್ನಾಟಕದ ಆರ್ಥಿಕ ಶಿಸ್ತು ಹಾಳಾಗಿದೆ: ಸರ್ಕಾರ ಈ ಬಗ್ಗೆ ಉತ್ತರಿಸಲಿ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ನವ ಮಂಗಳೂರು ಬಂದರಿಗೆ ಆಗಮಿಸಿದ ಐಷಾರಾಮಿ ಕ್ರೂಸ್ ಹಡಗು</title>
		<link>https://samyuktakarnataka.in/districts/dakshina-kannada/seven-seas-navigator-arrives-at-new-mangalore-port-closing-cruise-season/</link>
		
		<dc:creator><![CDATA[Samyukta Karnataka]]></dc:creator>
		<pubDate>Wed, 20 May 2026 05:23:38 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<guid isPermaLink="false">https://samyuktakarnataka.in/?p=98535</guid>

					<description><![CDATA[<p>ಮಂಗಳೂರು: ನವ ಮಂಗಳೂರು ಬಂದರುಗೆ ಪ್ರವಾಸಿ ವರ್ಷದ ಐದನೇ ಹಾಗೂ ಕೊನೆಯ ಐಷಾರಾಮಿ ಕ್ರೂಸ್ ಹಡಗು ‘ಎಂ.ಎಸ್. ಸೆವೆನ್ ಸೀಸ್ ನ್ಯಾವಿಗೇಟರ್’ ಮಂಗಳವಾರ ಭವ್ಯವಾಗಿ ಆಗಮಿಸಿತು. ಬಹಾಮಾಸ್ ಧ್ವಜ ಹೊಂದಿರುವ ಈ ಐಷಾರಾಮಿ ಹಡಗನ್ನು Norwegian Cruise Line ಸಂಸ್ಥೆ ನಿರ್ವಹಿಸುತ್ತಿದ್ದು, ಮಾಲೆ–ಕೊಚ್ಚಿನ್–ಮಂಗಳೂರು–ಗೋವಾ–ಮುಂಬಯಿ ಸಂಪರ್ಕಿಸುವ ಅಂತಾರಾಷ್ಟ್ರೀಯ ಕ್ರೂಸ್ ಮಾರ್ಗದ ಭಾಗವಾಗಿ ಮಂಗಳೂರಿಗೆ ಬಂದಿಳಿದಿದೆ. ಹಡಗಿನಲ್ಲಿ ಒಟ್ಟು 427 ಪ್ರಯಾಣಿಕರು ಹಾಗೂ 372 ಸಿಬ್ಬಂದಿ ಇದ್ದರು. ಹಡಗು ಬಂದರಿಗೆ ಆಗಮಿಸುತ್ತಿದ್ದಂತೆ ಪ್ರವಾಸಿಗರಿಗೆ ಕರಾವಳಿ ಕರ್ನಾಟಕದ ಸಾಂಪ್ರದಾಯಿಕ ಶೈಲಿಯಲ್ಲಿ ಆತ್ಮೀಯ [&#8230;]</p>
<p>The post <a href="https://samyuktakarnataka.in/districts/dakshina-kannada/seven-seas-navigator-arrives-at-new-mangalore-port-closing-cruise-season/">ನವ ಮಂಗಳೂರು ಬಂದರಿಗೆ ಆಗಮಿಸಿದ ಐಷಾರಾಮಿ ಕ್ರೂಸ್ ಹಡಗು</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಮಂಗಳೂರು: </strong>ನವ ಮಂಗಳೂರು ಬಂದರುಗೆ ಪ್ರವಾಸಿ ವರ್ಷದ ಐದನೇ ಹಾಗೂ ಕೊನೆಯ ಐಷಾರಾಮಿ ಕ್ರೂಸ್ ಹಡಗು ‘ಎಂ.ಎಸ್. ಸೆವೆನ್ ಸೀಸ್ ನ್ಯಾವಿಗೇಟರ್’ ಮಂಗಳವಾರ ಭವ್ಯವಾಗಿ ಆಗಮಿಸಿತು.</p>



<p class="wp-block-paragraph">ಬಹಾಮಾಸ್ ಧ್ವಜ ಹೊಂದಿರುವ ಈ ಐಷಾರಾಮಿ ಹಡಗನ್ನು Norwegian Cruise Line ಸಂಸ್ಥೆ ನಿರ್ವಹಿಸುತ್ತಿದ್ದು, ಮಾಲೆ–ಕೊಚ್ಚಿನ್–ಮಂಗಳೂರು–ಗೋವಾ–ಮುಂಬಯಿ ಸಂಪರ್ಕಿಸುವ ಅಂತಾರಾಷ್ಟ್ರೀಯ ಕ್ರೂಸ್ ಮಾರ್ಗದ ಭಾಗವಾಗಿ ಮಂಗಳೂರಿಗೆ ಬಂದಿಳಿದಿದೆ. ಹಡಗಿನಲ್ಲಿ ಒಟ್ಟು 427 ಪ್ರಯಾಣಿಕರು ಹಾಗೂ 372 ಸಿಬ್ಬಂದಿ ಇದ್ದರು.</p>



<p class="wp-block-paragraph">ಹಡಗು ಬಂದರಿಗೆ ಆಗಮಿಸುತ್ತಿದ್ದಂತೆ ಪ್ರವಾಸಿಗರಿಗೆ ಕರಾವಳಿ ಕರ್ನಾಟಕದ ಸಾಂಪ್ರದಾಯಿಕ ಶೈಲಿಯಲ್ಲಿ ಆತ್ಮೀಯ ಸ್ವಾಗತ ಕೋರಲಾಯಿತು. ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಹಾಗೂ ಸಂಬಂಧಿತ ಸಂಸ್ಥೆಗಳು ಪ್ರವಾಸಿಗರಿಗಾಗಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿತ್ತು. ನಗರದ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ, ಮಾರ್ಗದರ್ಶಿತ ಪ್ರವಾಸ, ಸಾಂಸ್ಕೃತಿಕ ಪರಿಚಯ ಕಾರ್ಯಕ್ರಮಗಳು ಹಾಗೂ ಧ್ಯಾನ ತರಗತಿಗಳನ್ನು ಆಯೋಜಿಸಲಾಗಿತ್ತು.</p>



<p class="wp-block-paragraph">‘ಎಂ.ಎಸ್. ಸೆವೆನ್ ಸೀಸ್ ನ್ಯಾವಿಗೇಟರ್’ ಆಗಮನದೊಂದಿಗೆ ಈ ವರ್ಷದ ಕ್ರೂಸ್ ಪ್ರವಾಸೋದ್ಯಮ ಸೀಸನ್ ಮುಕ್ತಾಯಗೊಂಡಿದ್ದು, ಒಟ್ಟು ಐದು ಬೃಹತ್ ಕ್ರೂಸ್ ಹಡಗುಗಳು ನವ ಮಂಗಳೂರು ಬಂದರಿಗೆ ಭೇಟಿ ನೀಡಿವೆ. ಈ ಅವಧಿಯಲ್ಲಿ ಒಟ್ಟು 2,079 ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಎನ್‌ಎಂಪಿಎ ಮಾಹಿತಿ ನೀಡಿದೆ.</p>



<p class="wp-block-paragraph">ಈ ಸಾಧನೆಯ ಮೂಲಕ ಭಾರತದ ಪಶ್ಚಿಮ ಕರಾವಳಿಯಲ್ಲಿ ನವ ಮಂಗಳೂರು ಬಂದರು ಪ್ರಮುಖ ಕ್ರೂಸ್ ಪ್ರವಾಸೋದ್ಯಮ ಕೇಂದ್ರವಾಗಿ ಹೊರಹೊಮ್ಮುತ್ತಿರುವುದು ಮತ್ತೊಮ್ಮೆ ಸಾಬೀತಾಗಿದೆ. ಕರಾವಳಿ ಕರ್ನಾಟಕದ ಕಡಲತೀರಗಳು, ಐತಿಹಾಸಿಕ ದೇವಾಲಯಗಳು, ಪರಂಪರೆ ತಾಣಗಳು, ಪರಿಸರ ಪ್ರವಾಸೋದ್ಯಮ ಕೇಂದ್ರಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆ ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p>



<p class="wp-block-paragraph">ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ತ್ರಿಲೋಕ್ ಚಂದ್ರ ಕೆ.ವಿ. ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಭೇಟಿ ನೀಡಿ ಕ್ರೂಸ್ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಪರಿಶೀಲನಾ ಸಭೆ ನಡೆಸಿದರು.</p>



<p class="wp-block-paragraph">ಗಣ್ಯರನ್ನು ಎನ್‌ಎಂಪಿಎ ಉಪಾಧ್ಯಕ್ಷೆ ಎಸ್. ಶಾಂತಿ ಹಾಗೂ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಸಭೆಯಲ್ಲಿ ಬಂದರಿನ ಕ್ರೂಸ್ ಟರ್ಮಿನಲ್ ಮೂಲಸೌಕರ್ಯ, ಪ್ರಯಾಣಿಕರ ನಿರ್ವಹಣಾ ವ್ಯವಸ್ಥೆ, ವಲಸೆ ಮತ್ತು ಕಸ್ಟಮ್ಸ್ ಸೌಲಭ್ಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು.</p>



<p class="wp-block-paragraph">ರಾಜ್ಯ ಪ್ರವಾಸೋದ್ಯಮ ಕಾರ್ಯದರ್ಶಿ ಡಾ. ತ್ರಿಲೋಕ್ ಚಂದ್ರ ಅವರು ಬಂದರಿನಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರವಾಸಿಗರಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಶ್ಲಾಘಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ದೇಶಿ ಮತ್ತು ವಿದೇಶಿ ಐಷಾರಾಮಿ ಕ್ರೂಸ್ ಹಡಗುಗಳನ್ನು ಮಂಗಳೂರಿಗೆ ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="r6FeOJWq0r"><a href="https://samyuktakarnataka.in/districts/dakshina-kannada/engineering-student-drowns-in-nethravathi-river-near-pajiradka-beltangady/">ಇಂಜಿನಿಯರಿಂಗ್ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ಇಂಜಿನಿಯರಿಂಗ್ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು&#8221; &#8212; Samyukta Karnataka" src="https://samyuktakarnataka.in/districts/dakshina-kannada/engineering-student-drowns-in-nethravathi-river-near-pajiradka-beltangady/embed/#?secret=AKnuJH3666#?secret=r6FeOJWq0r" data-secret="r6FeOJWq0r" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/dakshina-kannada/seven-seas-navigator-arrives-at-new-mangalore-port-closing-cruise-season/">ನವ ಮಂಗಳೂರು ಬಂದರಿಗೆ ಆಗಮಿಸಿದ ಐಷಾರಾಮಿ ಕ್ರೂಸ್ ಹಡಗು</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಇಂಜಿನಿಯರಿಂಗ್ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು</title>
		<link>https://samyuktakarnataka.in/districts/dakshina-kannada/engineering-student-drowns-in-nethravathi-river-near-pajiradka-beltangady/</link>
		
		<dc:creator><![CDATA[Samyukta Karnataka]]></dc:creator>
		<pubDate>Wed, 20 May 2026 05:08:02 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<category><![CDATA[#mangaluru]]></category>
		<guid isPermaLink="false">https://samyuktakarnataka.in/?p=98532</guid>

					<description><![CDATA[<p>ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪ ಇರುವ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಗಳ ತಂಡದಲ್ಲಿ ಒಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಘಟನೆಯು ಸ್ಥಳೀಯರಲ್ಲಿ ಶೋಕ ವಾತಾವರಣ ನಿರ್ಮಿಸಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಹಾಗೂ ಉಜಿರೆಯ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ (ಈಸಿಎ) ವ್ಯಾಸಂಗ ಮಾಡುತ್ತಿದ್ದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಮೇ 19ರಂದು ಸಂಜೆ [&#8230;]</p>
<p>The post <a href="https://samyuktakarnataka.in/districts/dakshina-kannada/engineering-student-drowns-in-nethravathi-river-near-pajiradka-beltangady/">ಇಂಜಿನಿಯರಿಂಗ್ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪ ಇರುವ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಗಳ ತಂಡದಲ್ಲಿ ಒಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಘಟನೆಯು ಸ್ಥಳೀಯರಲ್ಲಿ ಶೋಕ ವಾತಾವರಣ ನಿರ್ಮಿಸಿದೆ.</p>



<p class="wp-block-paragraph">ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಹಾಗೂ ಉಜಿರೆಯ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ (ಈಸಿಎ) ವ್ಯಾಸಂಗ ಮಾಡುತ್ತಿದ್ದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ.</p>



<p class="wp-block-paragraph">ಮಾಹಿತಿಯ ಪ್ರಕಾರ, ಮೇ 19ರಂದು ಸಂಜೆ ಸುಮಾರು 4 ಗಂಟೆ ವೇಳೆಗೆ ಏಳು ಮಂದಿ ಸ್ನೇಹಿತರ ತಂಡ ನೇತ್ರಾವತಿ ನದಿಯ ಪಜಿರಡ್ಕ ಭಾಗಕ್ಕೆ ಈಜಲು ತೆರಳಿತ್ತು. ಈ ವೇಳೆ ಆಳವಾದ ನೀರಿಗೆ ಇಳಿದ ಶ್ರೀಪೂರ್ಣ ಅಚಾನಕ್ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ನೇಹಿತರು ಹಾಗೂ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರೂ, ಯುವಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.</p>



<p class="wp-block-paragraph">ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಪಡೆ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ರಾತ್ರಿ ಹೊತ್ತಿನಲ್ಲಿಯೂ ಕಾರ್ಯಾಚರಣೆ ಮುಂದುವರಿದಿದ್ದು, ಸುಮಾರು ರಾತ್ರಿ 9.30ರ ಸುಮಾರಿಗೆ ನದಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಯಿತು.</p>



<p class="wp-block-paragraph">ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>



<p class="wp-block-paragraph">ಬೇಸಿಗೆ ಕಾಲದಲ್ಲಿ ನದಿ, ಕೆರೆ ಹಾಗೂ ಜಲಾಶಯಗಳಲ್ಲಿ ಯುವಕರು ಎಚ್ಚರಿಕೆ ಇಲ್ಲದೆ ಈಜಲು ಇಳಿಯುತ್ತಿರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="EADE9iQkjG"><a href="https://samyuktakarnataka.in/news/india/sayani-ghosh-threat-video-bjp-leader-controversy/">“ಶಿರಚ್ಛೇದ ಮಾಡಿದವರಿಗೆ ₹1 ಕೋಟಿ”: ಬಿಜೆಪಿ ನಾಯಕನ ಸ್ಪಷ್ಟನೆ</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;“ಶಿರಚ್ಛೇದ ಮಾಡಿದವರಿಗೆ ₹1 ಕೋಟಿ”: ಬಿಜೆಪಿ ನಾಯಕನ ಸ್ಪಷ್ಟನೆ&#8221; &#8212; Samyukta Karnataka" src="https://samyuktakarnataka.in/news/india/sayani-ghosh-threat-video-bjp-leader-controversy/embed/#?secret=abLzzhjksv#?secret=EADE9iQkjG" data-secret="EADE9iQkjG" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/dakshina-kannada/engineering-student-drowns-in-nethravathi-river-near-pajiradka-beltangady/">ಇಂಜಿನಿಯರಿಂಗ್ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಗೇರು ಕ್ಷೇತ್ರದಲ್ಲಿ ಕರ್ನಾಟಕ ಸ್ವಾವಲಂಬಿಯತ್ತ: ಬೆಳೆ ಉತ್ತೇಜನಕ್ಕೆ ₹1 ಕೋಟಿ ಅನುದಾನ ಘೋಷಣೆ</title>
		<link>https://samyuktakarnataka.in/districts/dakshina-kannada/karnataka-cashew-development-scheme-one-crore-grant/</link>
		
		<dc:creator><![CDATA[Samyukta Karnataka]]></dc:creator>
		<pubDate>Sun, 17 May 2026 12:51:47 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<category><![CDATA[#mangaluru]]></category>
		<guid isPermaLink="false">https://samyuktakarnataka.in/?p=98352</guid>

					<description><![CDATA[<p>ಪಶ್ಚಿಮಘಟ್ಟ ಸಂರಕ್ಷಣೆ ಅಗತ್ಯ: ಎಂಡೋಸಲ್ಫಾನ್ ಬಳಿಕ ಕುಸಿದ ಗೇರು ಬೆಳೆ ಪುನಶ್ಚೇತನಕ್ಕೆ ಕ್ರಮ ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗೇರು ಅಥವಾ ಗೋಡಂಬಿ ಬೆಳೆ ಬೆಳವಣಿಗೆಗೆ ಹೆಚ್ಚಿನ ಅವಕಾಶವಿದ್ದು, ರೈತರಿಗೆ ಗುಣಮಟ್ಟದ ಸಸಿಗಳನ್ನು ಒದಗಿಸಲು ಸರ್ಕಾರದಿಂದ ವಿಶೇಷ ಯೋಜನೆ ಜಾರಿಗೊಳ್ಳಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಗೇರು ಅಭಿವೃದ್ಧಿ ಮಂಡಳಿ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ಗೇರು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಗುಣಮಟ್ಟದ ಗೋಡಂಬಿ ಸಸಿಗಳ [&#8230;]</p>
<p>The post <a href="https://samyuktakarnataka.in/districts/dakshina-kannada/karnataka-cashew-development-scheme-one-crore-grant/">ಗೇರು ಕ್ಷೇತ್ರದಲ್ಲಿ ಕರ್ನಾಟಕ ಸ್ವಾವಲಂಬಿಯತ್ತ: ಬೆಳೆ ಉತ್ತೇಜನಕ್ಕೆ ₹1 ಕೋಟಿ ಅನುದಾನ ಘೋಷಣೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಪಶ್ಚಿಮಘಟ್ಟ ಸಂರಕ್ಷಣೆ ಅಗತ್ಯ: ಎಂಡೋಸಲ್ಫಾನ್ ಬಳಿಕ ಕುಸಿದ ಗೇರು ಬೆಳೆ ಪುನಶ್ಚೇತನಕ್ಕೆ ಕ್ರಮ</strong></p>



<p class="wp-block-paragraph">ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗೇರು ಅಥವಾ ಗೋಡಂಬಿ ಬೆಳೆ ಬೆಳವಣಿಗೆಗೆ ಹೆಚ್ಚಿನ ಅವಕಾಶವಿದ್ದು, ರೈತರಿಗೆ ಗುಣಮಟ್ಟದ ಸಸಿಗಳನ್ನು ಒದಗಿಸಲು ಸರ್ಕಾರದಿಂದ ವಿಶೇಷ ಯೋಜನೆ ಜಾರಿಗೊಳ್ಳಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.</p>



<p class="wp-block-paragraph">ಗೇರು ಅಭಿವೃದ್ಧಿ ಮಂಡಳಿ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ಗೇರು ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಗುಣಮಟ್ಟದ ಗೋಡಂಬಿ ಸಸಿಗಳ ಉತ್ಪಾದನೆ ಮತ್ತು ರೈತರಿಗೆ ವಿತರಣೆಗಾಗಿ ₹1 ಕೋಟಿ ಅನುದಾನ ನೀಡುವುದಾಗಿ ಘೋಷಿಸಿದರು.</p>



<p class="wp-block-paragraph">ಎಂಡೋಸಲ್ಫಾನ್ ದುರಂತದ ಬಳಿಕ ಹಲವಾರು ರೈತರು ಗೇರು ಬೆಳೆಯಿಂದ ದೂರ ಸರಿದಿರುವುದನ್ನು ಉಲ್ಲೇಖಿಸಿದ ಅವರು, “ರೈತರಿಗೆ ಮತ್ತೆ ಉತ್ತೇಜನ ನೀಡಿ ಗೇರು ಕ್ಷೇತ್ರದ ಗತವೈಭವ ಮರಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು.</p>



<p class="wp-block-paragraph">ಆಸಕ್ತ ರೈತರಿಗೆ ನಿಗಮದ ನರ್ಸರಿಗಳಲ್ಲಿಯೇ ಕಸಿ ಮಾಡಿದ ಗುಣಮಟ್ಟದ ಗೋಡಂಬಿ ಸಸಿಗಳನ್ನು ಬೆಳೆಸಿ ಪೂರೈಸುವ ಯೋಜನೆ ರೂಪಿಸಲಾಗಿದೆ. ಈ ವರ್ಷದಿಂದಲೇ ಈ ಯೋಜನೆ ಜಾರಿಗೆ ಬರಲಿದ್ದು, ₹1 ಕೋಟಿ ವೆಚ್ಚದಲ್ಲಿ ಸಸಿಗಳನ್ನು ಬೆಳೆಸಿ ಮುಂದಿನ ವರ್ಷದಿಂದ ಸಬ್ಸಿಡಿ ದರದಲ್ಲಿ ರೈತರಿಗೆ ಮಾರಾಟ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.</p>



<p class="wp-block-paragraph">ಮೇಳದಲ್ಲಿ ವಿವಿಧ ಗೇರು ಮೌಲ್ಯವರ್ಧಿತ ಉತ್ಪನ್ನಗಳ ಮಳಿಗೆಗಳನ್ನು ವೀಕ್ಷಿಸಿದ ಖಂಡ್ರೆ, “ಗೇರು ಮೌಲ್ಯವರ್ಧನೆಗೆ ಒತ್ತು ನೀಡಿದರೆ ರೈತರಿಗೆ ಹೆಚ್ಚಿನ ಆದಾಯ ದೊರೆಯಲಿದೆ. ಉತ್ಪಾದನಾ ವೆಚ್ಚ ಕಡಿಮೆಯಾಗಿ ಲಾಭ ಹೆಚ್ಚುತ್ತದೆ” ಎಂದು ಅಭಿಪ್ರಾಯಪಟ್ಟರು.</p>



<p class="wp-block-paragraph">ಪ್ರಸ್ತುತ ಭಾರತವು ಕಚ್ಚಾ ಗೇರು ಬೀಜವನ್ನು ಆಮದು ಮಾಡಿಕೊಂಡು ಸಂಸ್ಕರಿಸುವ ಪರಿಸ್ಥಿತಿಯಲ್ಲಿದೆ ಎಂದು ಅವರು ಹೇಳಿದರು. ಹೀಗಾಗಿ ರೈತರಿಗೆ ಆಧುನಿಕ ಮಾಹಿತಿ, ತರಬೇತಿ ಹಾಗೂ ರಿಯಾಯಿತಿ ದರದಲ್ಲಿ ಸಸಿಗಳನ್ನು ಒದಗಿಸುವ ಮೂಲಕ ಕರ್ನಾಟಕವನ್ನು ಗೇರು ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.</p>



<p class="wp-block-paragraph">ಪಶ್ಚಿಮಘಟ್ಟದ ಮಹತ್ವವನ್ನು ಉಲ್ಲೇಖಿಸಿದ ಸಚಿವರು, “ದಕ್ಷಿಣ ಕನ್ನಡದ ಜನರು ಪಶ್ಚಿಮಘಟ್ಟ ಪ್ರದೇಶದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ. ಈ ಪರ್ವತ ಶ್ರೇಣಿಗಳು ಮಳೆಯ ಮಾದರಿಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ಪಶ್ಚಿಮಘಟ್ಟ ಸಂರಕ್ಷಣೆ ಎಲ್ಲರ ಜವಾಬ್ದಾರಿ” ಎಂದು ಹೇಳಿದರು.</p>



<p class="wp-block-paragraph">ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಿಂದ ಮಳೆಯ ಮಾದರಿಯಲ್ಲಿ ತೀವ್ರ ಬದಲಾವಣೆ ಉಂಟಾಗುತ್ತಿದೆ ಎಂದು ಎಚ್ಚರಿಸಿದ ಅವರು, “ಒಂದು ತಿಂಗಳ ಮಳೆ ಒಂದು ವಾರದಲ್ಲಿ, ಒಂದು ವಾರದ ಮಳೆ ಒಂದೇ ದಿನದಲ್ಲಿ ಬೀಳುತ್ತಿದೆ. ಇದರಿಂದ ಕೃಷಿ ಬೆಳೆಗಳಿಗೆ ಭಾರೀ ಹಾನಿ ಉಂಟಾಗುತ್ತಿದೆ. ಆದ್ದರಿಂದ ಹಸಿರು ಹೊದಿಕೆ ಹೆಚ್ಚಿಸುವುದು ಮತ್ತು ವೃಕ್ಷ ಸಂರಕ್ಷಣೆ ಅತ್ಯಗತ್ಯ” ಎಂದರು.</p>



<p class="wp-block-paragraph">ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗಾಗಿ ಚಿತ್ರಕಲೆ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಚಿವರು ಮಕ್ಕಳೊಂದಿಗೆ ಕೆಲ ಸಮಯ ಕಳೆದರು ಹಾಗೂ 12 ಪ್ರಗತಿಪರ ರೈತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.</p>



<p class="wp-block-paragraph">ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ರಾಜೇಗೌಡ, ಶಾಸಕ ಅಶೋಕ್ ಕುಮಾರ್ ರೈ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="H81YlK9pu4"><a href="https://samyuktakarnataka.in/news/india/gujarat-dahod-unaccounted-cash-seized-from-car/">ವಾಹನ ತಪಾಸಣೆ ವೇಳೆ ಕೋಟಿ ಕೋಟಿ ನಗದು ಪತ್ತೆ</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ವಾಹನ ತಪಾಸಣೆ ವೇಳೆ ಕೋಟಿ ಕೋಟಿ ನಗದು ಪತ್ತೆ&#8221; &#8212; Samyukta Karnataka" src="https://samyuktakarnataka.in/news/india/gujarat-dahod-unaccounted-cash-seized-from-car/embed/#?secret=TXMeRvsxUW#?secret=H81YlK9pu4" data-secret="H81YlK9pu4" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/dakshina-kannada/karnataka-cashew-development-scheme-one-crore-grant/">ಗೇರು ಕ್ಷೇತ್ರದಲ್ಲಿ ಕರ್ನಾಟಕ ಸ್ವಾವಲಂಬಿಯತ್ತ: ಬೆಳೆ ಉತ್ತೇಜನಕ್ಕೆ ₹1 ಕೋಟಿ ಅನುದಾನ ಘೋಷಣೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಧರ್ಮಸ್ಥಳದಲ್ಲಿ ನಾಳೆ ಉಚಿತ ಸಾಮೂಹಿಕ ವಿವಾಹ ಕಾರ್ಯ</title>
		<link>https://samyuktakarnataka.in/districts/dakshina-kannada/free-mass-marriage-function-in-dharmasthala/</link>
		
		<dc:creator><![CDATA[Samyukta Karnataka]]></dc:creator>
		<pubDate>Mon, 27 Apr 2026 12:02:02 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<guid isPermaLink="false">https://samyuktakarnataka.in/?p=96693</guid>

					<description><![CDATA[<p>ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಈಗಾಗಲೆ 105 ಜೊತೆ ವಧು-ವರರು ವಿವಾಹಕ್ಕಾಗಿ ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. [&#8230;]</p>
<p>The post <a href="https://samyuktakarnataka.in/districts/dakshina-kannada/free-mass-marriage-function-in-dharmasthala/">ಧರ್ಮಸ್ಥಳದಲ್ಲಿ ನಾಳೆ ಉಚಿತ ಸಾಮೂಹಿಕ ವಿವಾಹ ಕಾರ್ಯ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಉಜಿರೆ:</strong> ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.</p>



<p class="wp-block-paragraph">ಈಗಾಗಲೆ 105 ಜೊತೆ ವಧು-ವರರು ವಿವಾಹಕ್ಕಾಗಿ ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು.</p>



<p class="wp-block-paragraph">ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು ಎಂದು ಟ್ರಸ್ಟ್‌ ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.</p>



<p class="wp-block-paragraph">ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸುತ್ತಿದ್ದು, ಕಳೆದ ವರ್ಷದ ವರೆಗೆ ಹದಿಮೂರು ಸಾವಿರ ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.</p>



<p class="wp-block-paragraph">ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಡಿ. ಹರ್ಷೇಂದ್ರ ಕುಮಾರ್ ನೇತೃತ್ವದಲ್ಲಿ ನಡೆಯುವ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಶಾಸಕ ಹರೀಶ್ ಪೂಂಜ ಮತ್ತು ಮೆಸ್ಕಾಂ ಅಧ್ಯಕ್ಷ ಹರೀಶ್‌ಕುಮಾರ್ ನೂತನ ದಂಪತಿಗೆ ಶುಭ ಕೋರುವರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="xFIHSqpr54"><a href="https://samyuktakarnataka.in/news/india/ladakh-new-districts-creation-nubra-zanskar-drass-administration/">ಲಡಾಖ್‌ನಲ್ಲಿ ಐತಿಹಾಸಿಕ ನಿರ್ಧಾರ : ಜಿಲ್ಲೆಗಳ ಸಂಖ್ಯೆ 7ಕ್ಕೆ ಏರಿಕೆ</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ಲಡಾಖ್‌ನಲ್ಲಿ ಐತಿಹಾಸಿಕ ನಿರ್ಧಾರ : ಜಿಲ್ಲೆಗಳ ಸಂಖ್ಯೆ 7ಕ್ಕೆ ಏರಿಕೆ&#8221; &#8212; Samyukta Karnataka" src="https://samyuktakarnataka.in/news/india/ladakh-new-districts-creation-nubra-zanskar-drass-administration/embed/#?secret=Je9oaWmiGU#?secret=xFIHSqpr54" data-secret="xFIHSqpr54" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/dakshina-kannada/free-mass-marriage-function-in-dharmasthala/">ಧರ್ಮಸ್ಥಳದಲ್ಲಿ ನಾಳೆ ಉಚಿತ ಸಾಮೂಹಿಕ ವಿವಾಹ ಕಾರ್ಯ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಶಬರಿಮಲೆ ಯಾತ್ರೆ ದುರ್ಘಟನೆ: ರೈಲಿನಿಂದ ಬಿದ್ದು ಬೆಳ್ತಂಗಡಿ ವ್ಯಕ್ತಿ ಸಾವು</title>
		<link>https://samyuktakarnataka.in/districts/dakshina-kannada/belthangady-man-dies-after-falling-from-train-sabarimala-journey/</link>
		
		<dc:creator><![CDATA[Samyukta Karnataka]]></dc:creator>
		<pubDate>Sun, 19 Apr 2026 12:06:24 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[#DakshinaKannada]]></category>
		<category><![CDATA[#Death]]></category>
		<guid isPermaLink="false">https://samyuktakarnataka.in/?p=95890</guid>

					<description><![CDATA[<p>ಬೆಳ್ತಂಗಡಿ: ಶಬರಿಮಲೆ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ರೈಲಿನಿಂದ ಬಿದ್ದು ಮೃತಪಟ್ಟ ದುರ್ಘಟನೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ, ಕೃಷಿಕರಾಗಿದ್ದ ವಸಂತ ಪೂಜಾರಿ (60) ಅವರು ಮೃತಪಟ್ಟವರಾಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ, ವಸಂತ ಪೂಜಾರಿ ಅವರು ಶಬರಿಮಲೆ ದೇವಸ್ಥಾನಕ್ಕೆ ಯಾತ್ರೆಗೆ ತೆರಳಲು ಮಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಆರಂಭಿಸಿದ್ದರು. ಏಪ್ರಿಲ್ 17ರ ರಾತ್ರಿ ರೈಲು ಪ್ರಯಾಣದ ವೇಳೆ ಅವರು ಅನಾಹುತವಾಗಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, [&#8230;]</p>
<p>The post <a href="https://samyuktakarnataka.in/districts/dakshina-kannada/belthangady-man-dies-after-falling-from-train-sabarimala-journey/">ಶಬರಿಮಲೆ ಯಾತ್ರೆ ದುರ್ಘಟನೆ: ರೈಲಿನಿಂದ ಬಿದ್ದು ಬೆಳ್ತಂಗಡಿ ವ್ಯಕ್ತಿ ಸಾವು</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph">ಬೆಳ್ತಂಗಡಿ: ಶಬರಿಮಲೆ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ರೈಲಿನಿಂದ ಬಿದ್ದು ಮೃತಪಟ್ಟ ದುರ್ಘಟನೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ, ಕೃಷಿಕರಾಗಿದ್ದ ವಸಂತ ಪೂಜಾರಿ (60) ಅವರು ಮೃತಪಟ್ಟವರಾಗಿದ್ದಾರೆ.</p>



<p class="wp-block-paragraph">ಲಭ್ಯ ಮಾಹಿತಿ ಪ್ರಕಾರ, ವಸಂತ ಪೂಜಾರಿ ಅವರು ಶಬರಿಮಲೆ ದೇವಸ್ಥಾನಕ್ಕೆ ಯಾತ್ರೆಗೆ ತೆರಳಲು ಮಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಆರಂಭಿಸಿದ್ದರು. ಏಪ್ರಿಲ್ 17ರ ರಾತ್ರಿ ರೈಲು ಪ್ರಯಾಣದ ವೇಳೆ ಅವರು ಅನಾಹುತವಾಗಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ.</p>



<p class="wp-block-paragraph">ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, ನಂತರ ಕೇರಳದ ತ್ರಿಶೂರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಏಪ್ರಿಲ್ 18ರಂದು ಅವರು ಮೃತಪಟ್ಟಿದ್ದಾರೆ. ಇಂದು (ಏ.19) ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಗಿದೆ.</p>



<p class="wp-block-paragraph">ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದ್ದು, ಅಪಘಾತದ ನಿಖರ ಕಾರಣ ತಿಳಿದುಬರಬೇಕಿದೆ. ಈ ಘಟನೆ ಬೆಳ್ತಂಗಡಿ ಭಾಗದಲ್ಲಿ ದುಃಖದ ವಾತಾವರಣ ಮೂಡಿಸಿದೆ.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="VOZYvmHAEM"><a href="https://samyuktakarnataka.in/districts/dakshina-kannada/seven-seas-mariner-cruise-mangalore-port-tourism-boost/">ಮಂಗಳೂರು ಬಂದರಿಗೆ ಬಂದ ಐಷಾರಾಮಿ ಕ್ರೂಸ್ ಹಡಗು</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ಮಂಗಳೂರು ಬಂದರಿಗೆ ಬಂದ ಐಷಾರಾಮಿ ಕ್ರೂಸ್ ಹಡಗು&#8221; &#8212; Samyukta Karnataka" src="https://samyuktakarnataka.in/districts/dakshina-kannada/seven-seas-mariner-cruise-mangalore-port-tourism-boost/embed/#?secret=KDbX1qobR4#?secret=VOZYvmHAEM" data-secret="VOZYvmHAEM" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/dakshina-kannada/belthangady-man-dies-after-falling-from-train-sabarimala-journey/">ಶಬರಿಮಲೆ ಯಾತ್ರೆ ದುರ್ಘಟನೆ: ರೈಲಿನಿಂದ ಬಿದ್ದು ಬೆಳ್ತಂಗಡಿ ವ್ಯಕ್ತಿ ಸಾವು</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
	</channel>
</rss>
