<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಕಲಬುರಗಿ Archives - Samyukta Karnataka</title>
	<atom:link href="https://samyuktakarnataka.in/category/districts/kalburgi/feed/" rel="self" type="application/rss+xml" />
	<link>https://samyuktakarnataka.in/category/districts/kalburgi/</link>
	<description>News that connects you to Karnataka since 1921</description>
	<lastBuildDate>Thu, 28 May 2026 09:53:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0</generator>

<image>
	<url>https://samyuktakarnataka.in/wp-content/uploads/2025/07/SK-FAVICON-150x146.jpg</url>
	<title>ಕಲಬುರಗಿ Archives - Samyukta Karnataka</title>
	<link>https://samyuktakarnataka.in/category/districts/kalburgi/</link>
	<width>32</width>
	<height>32</height>
</image> 
	<item>
		<title>ಕಲ್ಯಾಣ ಕರ್ನಾಟಕಕ್ಕೆ ಖರ್ಗೆಯೇ ಬಲ: DCM ಮಾಡಲು ಒತ್ತಾಯ</title>
		<link>https://samyuktakarnataka.in/districts/kalburgi/priyank-kharge-supporters-demand-dcm-post-special-prayers-kalaburagi/</link>
		
		<dc:creator><![CDATA[Samyukta Karnataka]]></dc:creator>
		<pubDate>Thu, 28 May 2026 09:53:08 +0000</pubDate>
				<category><![CDATA[ಕಲಬುರಗಿ]]></category>
		<category><![CDATA[congress]]></category>
		<category><![CDATA[politics]]></category>
		<guid isPermaLink="false">https://samyuktakarnataka.in/?p=99199</guid>

					<description><![CDATA[<p>ಪ್ರಿಯಾಂಕ ಖರ್ಗೆಗೆ ಡಿಸಿಎಂ ಸ್ಥಾನ ನೀಡಲಿ: ಕಲಬುರಗಿಯಲ್ಲಿ ವಿಶೇಷ ಪೂಜೆ ಸಂ.ಕ.ಸಮಾಚಾರ ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗೆ ನೇಮಿಸಬೇಕು ಎಂಬ ಒತ್ತಾಯ ಕಲಬುರಗಿಯಲ್ಲಿ ಜೋರಾಗಿದೆ. ಪ್ರಿಯಾಂಕ ಖರ್ಗೆ ಅಭಿಮಾನಿಗಳ ಬಳಗ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಿತಿಯ ನೇತೃತ್ವದಲ್ಲಿ ಗುರುವಾರ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು. ಸಮಿತಿಯ ಜಿಲ್ಲಾಧ್ಯಕ್ಷ [&#8230;]</p>
<p>The post <a href="https://samyuktakarnataka.in/districts/kalburgi/priyank-kharge-supporters-demand-dcm-post-special-prayers-kalaburagi/">ಕಲ್ಯಾಣ ಕರ್ನಾಟಕಕ್ಕೆ ಖರ್ಗೆಯೇ ಬಲ: DCM ಮಾಡಲು ಒತ್ತಾಯ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಪ್ರಿಯಾಂಕ ಖರ್ಗೆಗೆ ಡಿಸಿಎಂ ಸ್ಥಾನ ನೀಡಲಿ: ಕಲಬುರಗಿಯಲ್ಲಿ ವಿಶೇಷ ಪೂಜೆ</strong></p>



<p class="wp-block-paragraph"><strong>ಸಂ.ಕ.ಸಮಾಚಾರ ಕಲಬುರಗಿ: </strong>ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗೆ ನೇಮಿಸಬೇಕು ಎಂಬ ಒತ್ತಾಯ ಕಲಬುರಗಿಯಲ್ಲಿ ಜೋರಾಗಿದೆ. ಪ್ರಿಯಾಂಕ ಖರ್ಗೆ ಅಭಿಮಾನಿಗಳ ಬಳಗ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಿತಿಯ ನೇತೃತ್ವದಲ್ಲಿ ಗುರುವಾರ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.</p>



<p class="wp-block-paragraph">ಸಮಿತಿಯ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಿದರು. ರಾಜ್ಯ ಸರ್ಕಾರದಲ್ಲಿ ಸಂಭವಿಸಬಹುದಾದ ರಾಜಕೀಯ ಬದಲಾವಣೆಗಳ ಸಂದರ್ಭದಲ್ಲಿ ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಅವರು ಬಹಿರಂಗವಾಗಿ ಮುಂದಿಟ್ಟರು.</p>



<p class="wp-block-paragraph">ಈ ವೇಳೆ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಶಿವಾನಂದ ಹೊನಗುಂಟಿ, 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಿಯಾಂಕ ಖರ್ಗೆ ಮಹತ್ವದ ಪಾತ್ರವಹಿಸಿದ್ದರು ಎಂದು ಹೇಳಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್‌ಐ ನೇಮಕಾತಿ ಅಕ್ರಮ, ಕೆಕೆಆರ್‌ಡಿಬಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸುವಲ್ಲಿ ಅವರು ಮುಂಚೂಣಿಯಲ್ಲಿದ್ದರು ಎಂದು ಹೇಳಿದರು.</p>



<p class="wp-block-paragraph">ಪ್ರಿಯಾಂಕ ಖರ್ಗೆ ಅವರು ಐಟಿ-ಬಿಟಿ ಸಚಿವರಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ರಾಜ್ಯದಲ್ಲಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಹೊಸ ದಿಕ್ಕು ನೀಡಿದ್ದರು. ಇದೇ ಕಾರಣಕ್ಕೆ ಕೈಗಾರಿಕಾ ವಲಯ ಹಾಗೂ ಐಟಿ-ಬಿಟಿ ಕ್ಷೇತ್ರದ ಪ್ರಮುಖರು ಮತ್ತೊಮ್ಮೆ ಅವರಿಗೆ ಅದೇ ಖಾತೆ ನೀಡುವಂತೆ ಒತ್ತಾಯಿಸಿದ್ದರು ಎಂದು ಅವರು ತಿಳಿಸಿದರು.</p>



<p class="wp-block-paragraph">ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ದೂರದೃಷ್ಟಿಯ ನಾಯಕತ್ವ ಹೊಂದಿರುವ ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಹುದ್ದೆ ನೀಡಿದರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಶಕ್ತಿ ಸಿಗಲಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟರು. ಚಿತ್ತಾಪುರ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅವರು ನೀಡಿರುವ ಆದ್ಯತೆಯನ್ನು ಉಲ್ಲೇಖಿಸಿದ ಕಾರ್ಯಕರ್ತರು, ಜಿಲ್ಲೆಯ ಜನರಲ್ಲಿ ಅವರ ಬಗ್ಗೆ ವಿಶ್ವಾಸ ಹೆಚ್ಚಿದೆ ಎಂದು ಹೇಳಿದರು.</p>



<p class="wp-block-paragraph">ಇದೇ ವೇಳೆ ಕೋಲಿ ಸಮಾಜದ ಮುಖಂಡರಾದ ರಾಯಪ್ಪ ಹೊನಗುಂಟಿ, ಬಸವರಾಜ ಸೋಮಪುರ ಹಾಗೂ ಶರಣಪ್ಪ ಹೊಸೂರ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೋಲಿ ಸಮುದಾಯದ ಜನಸಂಖ್ಯೆ ಹೆಚ್ಚಿದ್ದು, ಸಮುದಾಯದ ಸಮಸ್ಯೆಗಳಿಗೆ ಪ್ರಿಯಾಂಕ ಖರ್ಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು. ಕೋಲಿ, ಕಬ್ಬಲಿಗ, ಬೆಸ್ತ, ಮೊಗವೀರ ಮತ್ತು ಅಂಬಿಗ ಸಮುದಾಯಗಳಿಗೆ ಎಸ್‌ಟಿ ಮಾನ್ಯತೆ ನೀಡುವ ವಿಚಾರದಲ್ಲೂ ಅವರು ಸ್ಪಂದನೆ ನೀಡುತ್ತಿರುವುದರಿಂದ ಅವರನ್ನು ಡಿಸಿಎಂ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಆಗ್ರಹಿಸಿದರು.</p>



<p class="wp-block-paragraph">ಪ್ರಾರ್ಥನಾ ಕಾರ್ಯಕ್ರಮದಲ್ಲಿ ಅಶ್ವಿನ ಸಂಕಾ, ಪರಶುರಾಮ ನಾಡೇಕಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪ್ರಿಯಾಂಕ ಖರ್ಗೆ ಬೆಂಬಲಿಗರು ಭಾಗವಹಿಸಿದ್ದರು. ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ರಾಜಕೀಯವಾಗಿ ಗಮನ ಸೆಳೆಯುತ್ತಿದೆ.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="bneIwh0qfA"><a href="https://samyuktakarnataka.in/districts/kalburgi/kuruba-community-protest-supporting-siddaramaiah-in-kalaburagi/">CM ಬದಲಾವಣೆ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ</a></blockquote><iframe class="wp-embedded-content" sandbox="allow-scripts" security="restricted"  title="“CM ಬದಲಾವಣೆ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ” — Samyukta Karnataka" src="https://samyuktakarnataka.in/districts/kalburgi/kuruba-community-protest-supporting-siddaramaiah-in-kalaburagi/embed/#?secret=uS8Uxcat3I#?secret=bneIwh0qfA" data-secret="bneIwh0qfA" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/priyank-kharge-supporters-demand-dcm-post-special-prayers-kalaburagi/">ಕಲ್ಯಾಣ ಕರ್ನಾಟಕಕ್ಕೆ ಖರ್ಗೆಯೇ ಬಲ: DCM ಮಾಡಲು ಒತ್ತಾಯ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>CM ಬದಲಾವಣೆ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ</title>
		<link>https://samyuktakarnataka.in/districts/kalburgi/kuruba-community-protest-supporting-siddaramaiah-in-kalaburagi/</link>
		
		<dc:creator><![CDATA[Samyukta Karnataka]]></dc:creator>
		<pubDate>Thu, 28 May 2026 09:39:35 +0000</pubDate>
				<category><![CDATA[ಕಲಬುರಗಿ]]></category>
		<category><![CDATA[congress]]></category>
		<category><![CDATA[politics]]></category>
		<guid isPermaLink="false">https://samyuktakarnataka.in/?p=99196</guid>

					<description><![CDATA[<p>ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು; ಕಲಬುರಗಿಯಲ್ಲಿ ಕುರುಬರ ಸಂಘದ ಬೃಹತ್ ಪ್ರತಿಭಟನೆ ಸಂ.ಕ.ಸಮಾಚಾರ ​ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬಾರದು ಹಾಗೂ 2028ರವರೆಗೆ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಘಟಕ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು. ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸಮುದಾಯದ ಸದಸ್ಯರು ಭಾಗವಹಿಸಿ ಘೋಷಣೆ ಕೂಗಿದರು. ಖರ್ಗೆ, ರಾಹುಲ್ ಗಾಂಧಿಗೆ ಮನವಿ : ಪ್ರತಿಭಟನೆ ಬಳಿಕ ಸಂಘದ [&#8230;]</p>
<p>The post <a href="https://samyuktakarnataka.in/districts/kalburgi/kuruba-community-protest-supporting-siddaramaiah-in-kalaburagi/">CM ಬದಲಾವಣೆ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು; ಕಲಬುರಗಿಯಲ್ಲಿ ಕುರುಬರ ಸಂಘದ ಬೃಹತ್ ಪ್ರತಿಭಟನೆ</strong></p>



<p class="wp-block-paragraph"><strong>ಸಂ.ಕ.ಸಮಾಚಾರ ​ಕಲಬುರಗಿ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬಾರದು ಹಾಗೂ 2028ರವರೆಗೆ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಘಟಕ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು.</p>



<p class="wp-block-paragraph">ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸಮುದಾಯದ ಸದಸ್ಯರು ಭಾಗವಹಿಸಿ ಘೋಷಣೆ ಕೂಗಿದರು.</p>



<p class="wp-block-paragraph"><strong>ಖರ್ಗೆ, ರಾಹುಲ್ ಗಾಂಧಿಗೆ ಮನವಿ : </strong>ಪ್ರತಿಭಟನೆ ಬಳಿಕ ಸಂಘದ ಪದಾಧಿಕಾರಿಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.</p>



<p class="wp-block-paragraph"><strong>“ಅಹಿಂದ ನಾಯಕ ಸಿದ್ದರಾಮಯ್ಯ” :</strong> ಸಂಘದ ಮುಖಂಡರು ಮಾತನಾಡಿ, “ಸಿದ್ದರಾಮಯ್ಯ ಅವರು ಅಹಿಂದ ಸಮುದಾಯದ ಪ್ರಬಲ ನಾಯಕರು. ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ” ಎಂದು ಹೇಳಿದರು.</p>



<p class="wp-block-paragraph">ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ನಂತರ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ನಾಯಕ ಸಿದ್ದರಾಮಯ್ಯ ಎಂದು ಅವರು ಶ್ಲಾಘಿಸಿದರು.</p>



<p class="wp-block-paragraph"><strong>“ಭ್ರಷ್ಟಾಚಾರದ ಆರೋಪವಿಲ್ಲ” :</strong> “ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ಯಾವುದೇ ಹಗರಣದಲ್ಲಿ ಅವರ ಹೆಸರು ಕೇಳಿಬಂದಿಲ್ಲ. ಹೀಗಿದ್ದರೂ ಏಕೆ ರಾಜೀನಾಮೆ ಪಡೆಯಲಾಗುತ್ತಿದೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>



<p class="wp-block-paragraph"><strong>“ಕಾಂಗ್ರೆಸ್‌ಗೆ ತಕ್ಕ ಪಾಠ” : </strong>ರಾಜೀನಾಮೆ ಪಡೆಯುವ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಮುಂದಿನ ಸ್ಥಳೀಯ ಸಂಸ್ಥೆ ಸೇರಿದಂತೆ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದರು.</p>



<p class="wp-block-paragraph"><strong>“ಹಿಂದುಳಿದ ವರ್ಗದ ನಾಯಕರನ್ನು ಬದಲಾಯಿಸಬೇಡಿ”:</strong> ಯಾವುದೇ ಸೂಕ್ತ ಕಾರಣವಿಲ್ಲದೆ ಹಿಂದುಳಿದ ವರ್ಗದ ನಾಯಕರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಿದ್ದರಾಮಯ್ಯ ಅವರೇ 2028ರವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಅವರು ಒತ್ತಾಯಿಸಿದರು.</p>



<p class="wp-block-paragraph">ಪ್ರತಿಭಟನೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಎಸ್. ಪೂಜಾರಿ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಭಾಗವಹಿಸಿದ್ದರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="PZakYeO7g1"><a href="https://samyuktakarnataka.in/news/karnataka/karnataka-government-transfers-ramesh-konaraddi-and-dr-venkateshaiah/">CM ಕಚೇರಿಯ ಹಿರಿಯ ಕೆಎಎಸ್ ಅಧಿಕಾರಿಗಳ ವರ್ಗಾವಣೆ</a></blockquote><iframe class="wp-embedded-content" sandbox="allow-scripts" security="restricted"  title="“CM ಕಚೇರಿಯ ಹಿರಿಯ ಕೆಎಎಸ್ ಅಧಿಕಾರಿಗಳ ವರ್ಗಾವಣೆ” — Samyukta Karnataka" src="https://samyuktakarnataka.in/news/karnataka/karnataka-government-transfers-ramesh-konaraddi-and-dr-venkateshaiah/embed/#?secret=k7NQVAXPOl#?secret=PZakYeO7g1" data-secret="PZakYeO7g1" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/kuruba-community-protest-supporting-siddaramaiah-in-kalaburagi/">CM ಬದಲಾವಣೆ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ನೀಟ್ ಪರೀಕ್ಷೆ ಬರೆದಿದ್ದ ಅಭ್ಯರ್ಥಿ ಆತ್ಮಹತ್ಯೆ</title>
		<link>https://samyuktakarnataka.in/districts/kalburgi/candidate-who-had-appeared-for-neet-exam-commits-suicide/</link>
		
		<dc:creator><![CDATA[Samyukta Karnataka]]></dc:creator>
		<pubDate>Sat, 23 May 2026 17:25:25 +0000</pubDate>
				<category><![CDATA[ಕಲಬುರಗಿ]]></category>
		<category><![CDATA[kalaburagi]]></category>
		<guid isPermaLink="false">https://samyuktakarnataka.in/?p=98857</guid>

					<description><![CDATA[<p>ಕಲಬುರಗಿ: ನೀಟ್ (NEET) ಪರೀಕ್ಷೆ ಬರೆದಿದ್ದ ಅಭ್ಯರ್ಥಿಯೋರ್ವಳು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿಲ್ಲಾ‌ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿಯು ಪಿಯುಸಿ ಪರೀಕ್ಷೆಯಲ್ಲಿ ಶೇ. 92 ರಷ್ಟು ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ ಆಕೆ, ಇತ್ತೀಚೆಗಷ್ಟೇ ನೀಟ್ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ. ಪರೀಕ್ಷೆಯ ಆತಂಕದ ಶಂಕೆ: ಘಟನೆಯ ಬಳಿಕ ಮಾಧ್ಯಮಗಳ ಎದುರು ಮೃತಳ ತಂದೆ [&#8230;]</p>
<p>The post <a href="https://samyuktakarnataka.in/districts/kalburgi/candidate-who-had-appeared-for-neet-exam-commits-suicide/">ನೀಟ್ ಪರೀಕ್ಷೆ ಬರೆದಿದ್ದ ಅಭ್ಯರ್ಥಿ ಆತ್ಮಹತ್ಯೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಕಲಬುರಗಿ: </strong>ನೀಟ್ (NEET) ಪರೀಕ್ಷೆ ಬರೆದಿದ್ದ ಅಭ್ಯರ್ಥಿಯೋರ್ವಳು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿಲ್ಲಾ‌ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.</p>



<p class="wp-block-paragraph">ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿಯು ಪಿಯುಸಿ ಪರೀಕ್ಷೆಯಲ್ಲಿ ಶೇ. 92 ರಷ್ಟು ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ ಆಕೆ, ಇತ್ತೀಚೆಗಷ್ಟೇ ನೀಟ್ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ.</p>



<p class="wp-block-paragraph">ಪರೀಕ್ಷೆಯ ಆತಂಕದ ಶಂಕೆ: ಘಟನೆಯ ಬಳಿಕ ಮಾಧ್ಯಮಗಳ ಎದುರು ಮೃತಳ ತಂದೆ ರಾಜಶೇಖರ್ ಅವರು ಕಣ್ಣೀರಿಡುತ್ತಾ ಅಳಲು ತೋಡಿಕೊಂಡಿದ್ದಾರೆ. ಆಕೆಗೆ ನೀಟ್ ಪರೀಕ್ಷೆಯ ಬಗ್ಗೆ ಬಹಳ ನಿರೀಕ್ಷೆಗಳಿದ್ದವು. ಆದರೆ‌ ಪರೀಕ್ಷೆಯ ಫಲಿತಾಂಶದ ಬಗ್ಗೆ ಏನಾದರೂ ಆತಂಕ ಇತ್ತೋ ಏನೋ ತಿಳಿಯದು. ಆಕೆ ಯಾವುದೇ ಡೆತ್‌ನೋಟ್ ಬರೆದಿಲ್ಲ, ಕಾರಣವನ್ನೂ ಹೇಳಿಲ್ಲ. ಕುಟುಂಬಸ್ಥರ ಜತೆ ತುಂಬಾ ಚೆನ್ನಾಗಿಯೇ ಇದ್ದಳು. ನಾವು ಯಾರ ಮೇಲೆಯೂ ಅಪಾದನೆ ಮಾಡುವುದಿಲ್ಲ ಎಂದು ಅವರು ದುಃಖಭರಿತವಾಗಿ ನುಡಿದಿದ್ದಾರೆ.</p>



<p class="wp-block-paragraph">ಈ‌ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="v9qZZq4Yeh"><a href="https://samyuktakarnataka.in/districts/belagavi/gold-workers-questioned-on-suspicion-of-being-bangladeshi-immigrants/">ಬಾಂಗ್ಲಾ ವಲಸಿಗರೆಂಬ ಶಂಕೆ: ಚಿನ್ನದ ಕಾರ್ಮಿಕರ ವಿಚಾರಣೆ</a></blockquote><iframe class="wp-embedded-content" sandbox="allow-scripts" security="restricted"  title="“ಬಾಂಗ್ಲಾ ವಲಸಿಗರೆಂಬ ಶಂಕೆ: ಚಿನ್ನದ ಕಾರ್ಮಿಕರ ವಿಚಾರಣೆ” — Samyukta Karnataka" src="https://samyuktakarnataka.in/districts/belagavi/gold-workers-questioned-on-suspicion-of-being-bangladeshi-immigrants/embed/#?secret=Jv6jlSf1OJ#?secret=v9qZZq4Yeh" data-secret="v9qZZq4Yeh" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/candidate-who-had-appeared-for-neet-exam-commits-suicide/">ನೀಟ್ ಪರೀಕ್ಷೆ ಬರೆದಿದ್ದ ಅಭ್ಯರ್ಥಿ ಆತ್ಮಹತ್ಯೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಕಲಬುರಗಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು</title>
		<link>https://samyuktakarnataka.in/districts/kalburgi/five-family-members-killed-kalaburagi-road-accident/</link>
		
		<dc:creator><![CDATA[Samyukta Karnataka]]></dc:creator>
		<pubDate>Sat, 23 May 2026 05:21:16 +0000</pubDate>
				<category><![CDATA[ಕಲಬುರಗಿ]]></category>
		<category><![CDATA[#Death]]></category>
		<category><![CDATA[kalaburagi]]></category>
		<guid isPermaLink="false">https://samyuktakarnataka.in/?p=98772</guid>

					<description><![CDATA[<p>ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರುಣ ದುರಂತ; ಐವರು ಸ್ಥಳದಲ್ಲೇ ಮೃತ್ಯು ಸಂ.ಕ. ಸಮಾಚಾರ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಸುತ್ತಿದ್ದ ಐವರು ದಾರುಣ ಅಂತ್ಯ ಕಂಡಿದ್ದಾರೆ. ಮೃತರನ್ನು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್, ಹುಸೇನ್ ಷಾ, ಮೈಬೂಬ್ [&#8230;]</p>
<p>The post <a href="https://samyuktakarnataka.in/districts/kalburgi/five-family-members-killed-kalaburagi-road-accident/">ಕಲಬುರಗಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರುಣ ದುರಂತ; ಐವರು ಸ್ಥಳದಲ್ಲೇ ಮೃತ್ಯು</strong></p>



<p class="wp-block-paragraph"><strong>ಸಂ.ಕ. ಸಮಾಚಾರ ಕಲಬುರಗಿ: </strong>ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.</p>



<p class="wp-block-paragraph">ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಸುತ್ತಿದ್ದ ಐವರು ದಾರುಣ ಅಂತ್ಯ ಕಂಡಿದ್ದಾರೆ. ಮೃತರನ್ನು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್, ಹುಸೇನ್ ಷಾ, ಮೈಬೂಬ್ ಅಲಿ, ರಸೂಲ್ ಬೀ ಮತ್ತು ಫಾತೀಮಾ ಅಲಿ ಎಂದು ಗುರುತಿಸಲಾಗಿದೆ. ಈ ಘಟನೆ ಇಂಗಳಗಿ ಗ್ರಾಮದಲ್ಲಿ ಆಘಾತ ಮತ್ತು ಶೋಕದ ವಾತಾವರಣ ಸೃಷ್ಟಿಸಿದೆ.</p>



<p class="wp-block-paragraph">ಯಾದಗಿರಿಯಿಂದ ಮರಳುವಾಗ ದುರ್ಘಟನೆ : ಮಾಹಿತಿಯ ಪ್ರಕಾರ, ಕುಟುಂಬದ ಸದಸ್ಯರು ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿ ಕ್ರೂಸರ್ ವಾಹನದಲ್ಲಿ ಮರಳಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಬಂದ ಲಾರಿ ಕ್ರೂಸರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ಸಂಪೂರ್ಣ ಜಖಂಗೊಂಡಿದ್ದು, ವಾಹನದಲ್ಲಿದ್ದವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>



<p class="wp-block-paragraph">ಸ್ಥಳಕ್ಕೆ ಪೊಲೀಸರ ಭೇಟಿ : ಘಟನೆಯ ಮಾಹಿತಿ ತಿಳಿದ ತಕ್ಷಣ ವಾಡಿ ಪೊಲೀಸ ಠಾಣೆಯ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.</p>



<p class="wp-block-paragraph"><strong>ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ :</strong> ಈ ದುರ್ಘಟನೆ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. “ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಇಂಗಳಗಿ ಗ್ರಾಮದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಸುದ್ದಿ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ” ಎಂದು ಅವರು ತಿಳಿಸಿದ್ದಾರೆ.</p>



<p class="wp-block-paragraph">ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿರುವ ಅವರು, ಕುಟುಂಬಸ್ಥರು ಧೈರ್ಯ ಕಳೆದುಕೊಳ್ಳಬಾರದು ಎಂದು ಸಮಾಧಾನದ ಮಾತು ಹೇಳಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಮಾತನಾಡಿರುವುದಾಗಿ ತಿಳಿಸಿರುವ ಸಚಿವರು, ಜಿಲ್ಲಾಡಳಿತದೊಂದಿಗೆ ಸೇರಿ ಮೃತರ ಕುಟುಂಬಗಳಿಗೆ ಅಗತ್ಯ ಸಹಕಾರ ಮತ್ತು ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="FvoAzAq4gQ"><a href="https://samyuktakarnataka.in/news/karnataka/bengaluru-bidar-kalaburagi-flight-services-restart-june-2026/">ಬೆಂಗಳೂರು-ಬೀದರ್, ಬೆಂಗಳೂರು-ಕಲಬುರಗಿ ವಿಮಾನ ಸೇವೆ ಪುನಾರಂಭ</a></blockquote><iframe loading="lazy" class="wp-embedded-content" sandbox="allow-scripts" security="restricted"  title="“ಬೆಂಗಳೂರು-ಬೀದರ್, ಬೆಂಗಳೂರು-ಕಲಬುರಗಿ ವಿಮಾನ ಸೇವೆ ಪುನಾರಂಭ” — Samyukta Karnataka" src="https://samyuktakarnataka.in/news/karnataka/bengaluru-bidar-kalaburagi-flight-services-restart-june-2026/embed/#?secret=QSw5vZbvgj#?secret=FvoAzAq4gQ" data-secret="FvoAzAq4gQ" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/five-family-members-killed-kalaburagi-road-accident/">ಕಲಬುರಗಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಮೋದಿ ಹೇಳೋಕೂ ಮುಂಚೆಯೇ ಮೆಟ್ರೋ ಪ್ರಯಾಣ ಮಾಡುತ್ತಿದ್ದೆವು</title>
		<link>https://samyuktakarnataka.in/districts/kalburgi/priyanka-kharge-says-we-were-travelling-by-metro-even-before-modi-said-so/</link>
		
		<dc:creator><![CDATA[Samyukta Karnataka]]></dc:creator>
		<pubDate>Mon, 18 May 2026 12:25:00 +0000</pubDate>
				<category><![CDATA[ಕಲಬುರಗಿ]]></category>
		<category><![CDATA[kalaburagi]]></category>
		<guid isPermaLink="false">https://samyuktakarnataka.in/?p=98432</guid>

					<description><![CDATA[<p>ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ ಸುದ್ದಿ ಮಾಧ್ಯಮಗಳಲ್ಲಿ ಮುನ್ನಲೆಗೆ ಬಂದಿರುವುದನ್ನು ಪ್ರಿಯಾಂಕ ಖರ್ಗೆ ವ್ಯಂಗ್ಯವಾಡಿದರು. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಮೋದಿಯವರು ಹೇಳುವುದಕ್ಕೂ ಮುಂಚೆಯೇ ವಾರದಲ್ಲಿ ಒಂದು ದಿನ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದೆವು. ಮಾಧ್ಯಮಗಳು ವಿಜಯೇಂದ್ರ ಮೆಟ್ರೋ ಹತ್ತಿದ್ದನ್ನೇ ಪದೇ ಪದೇ ತೋರಿಸುತ್ತಿವೆ, ಆದರೆ ದೇಶವನ್ನು ಈ ಸ್ಥಿತಿಗೆ ತಂದವರು ಯಾರು ಎಂದು ಬಿಜೆಪಿಯವರನ್ನು ಯಾಕೆ ಪ್ರಶ್ನಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದರು. ದೇಶದಲ್ಲಿ ನಡೆದಿರುವ ನೀಟ್ ಪರೀಕ್ಷಾ ಅಕ್ರಮದ [&#8230;]</p>
<p>The post <a href="https://samyuktakarnataka.in/districts/kalburgi/priyanka-kharge-says-we-were-travelling-by-metro-even-before-modi-said-so/">ಮೋದಿ ಹೇಳೋಕೂ ಮುಂಚೆಯೇ ಮೆಟ್ರೋ ಪ್ರಯಾಣ ಮಾಡುತ್ತಿದ್ದೆವು</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಕಲಬುರಗಿ: </strong>ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ ಸುದ್ದಿ ಮಾಧ್ಯಮಗಳಲ್ಲಿ ಮುನ್ನಲೆಗೆ ಬಂದಿರುವುದನ್ನು ಪ್ರಿಯಾಂಕ ಖರ್ಗೆ ವ್ಯಂಗ್ಯವಾಡಿದರು.</p>



<p class="wp-block-paragraph">ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಮೋದಿಯವರು ಹೇಳುವುದಕ್ಕೂ ಮುಂಚೆಯೇ ವಾರದಲ್ಲಿ ಒಂದು ದಿನ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದೆವು. ಮಾಧ್ಯಮಗಳು ವಿಜಯೇಂದ್ರ ಮೆಟ್ರೋ ಹತ್ತಿದ್ದನ್ನೇ ಪದೇ ಪದೇ ತೋರಿಸುತ್ತಿವೆ, ಆದರೆ ದೇಶವನ್ನು ಈ ಸ್ಥಿತಿಗೆ ತಂದವರು ಯಾರು ಎಂದು ಬಿಜೆಪಿಯವರನ್ನು ಯಾಕೆ ಪ್ರಶ್ನಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.</p>



<p class="wp-block-paragraph">ದೇಶದಲ್ಲಿ ನಡೆದಿರುವ ನೀಟ್ ಪರೀಕ್ಷಾ ಅಕ್ರಮದ ಕುರಿತು ಪ್ರಧಾನಿ ಮೋದಿ ಯಾಕೆ ಮೌನವಾಗಿದ್ದಾರೆ? ಇದರಿಂದ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಇದಕ್ಕೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಇನ್ನು ಯಾಕೆ ಸಚಿವ ಸ್ಥಾನದಲ್ಲಿ ಮುಂದುವರಿಸಲಾಗಿದೆ ಎಂದು ಪ್ರಶ್ನಿಸಿದರು.</p>



<p class="wp-block-paragraph">ಪ್ರಧಾನಿ ಮೋದಿ ಅವರು ವಿದೇಶದಿಂದ (ಚೀತಾಗಳನ್ನು) ತಂದ ಪ್ರಾಣಿಗಳು ಸತ್ತು ಹೋದವು. ಆದರೆ ನಾವು ಈಗ ನಮ್ಮ ಮೃಗಾಲಯಕ್ಕೆ ತರುವ ಪ್ರಾಣಿಗಳನ್ನು ಸರಿಯಾಗಿ ನಿರ್ವಹಣೆ ಮಾಡಿ, ಸಂರಕ್ಷಿಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.</p>



<p class="wp-block-paragraph">ದೇಶವು ಆರ್ಥಿಕ ಸಂಕಷ್ಟದತ್ತ ಸಾಗುತ್ತಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮೊದಲೇ ಹೇಳಿದ್ದರು. ಆದರೆ ಆಗ ಯಾರೂ ಆ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಈಗ ಮಧ್ಯಪ್ರಾಚ್ಯದ ಬಿಕ್ಕಟ್ಟನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಸಾರ್ವಜನಿಕರಿಗೆ ಪೆಟ್ರೋಲ್ ಕಡಿಮೆ ಬಳಸಿ ಎಂದು ಬುದ್ಧಿವಾದ ಹೇಳುತ್ತಿದ್ದಾರೆ ಎಂದು ಖರ್ಗೆ ಟೀಕಿಸಿದರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="1PNfSidsXJ"><a href="https://samyuktakarnataka.in/districts/bengaluru/a-debt-record-conference-is-more-meaningful-than-an-achievement-conference/">ಸಿಎಂ ಸಾಲದ ದಾಖಲೆ ಸಮಾವೇಶ ಮಾಡಿದರೆ ಹೆಚ್ಚು ಅರ್ಥಪೂರ್ಣ</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ಸಿಎಂ ಸಾಲದ ದಾಖಲೆ ಸಮಾವೇಶ ಮಾಡಿದರೆ ಹೆಚ್ಚು ಅರ್ಥಪೂರ್ಣ&#8221; &#8212; Samyukta Karnataka" src="https://samyuktakarnataka.in/districts/bengaluru/a-debt-record-conference-is-more-meaningful-than-an-achievement-conference/embed/#?secret=z2wqK90sh3#?secret=1PNfSidsXJ" data-secret="1PNfSidsXJ" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/priyanka-kharge-says-we-were-travelling-by-metro-even-before-modi-said-so/">ಮೋದಿ ಹೇಳೋಕೂ ಮುಂಚೆಯೇ ಮೆಟ್ರೋ ಪ್ರಯಾಣ ಮಾಡುತ್ತಿದ್ದೆವು</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಕಲಬುರಗಿ: 35 ಕೋಟಿ ವೆಚ್ಚದ ನೂತನ ಮೃಗಾಲಯ ಲೋಕಾರ್ಪಣೆ</title>
		<link>https://samyuktakarnataka.in/districts/kalburgi/kalaburagi-zoo-inauguration-eshwar-khandre-environment-conservation/</link>
		
		<dc:creator><![CDATA[Samyukta Karnataka]]></dc:creator>
		<pubDate>Mon, 18 May 2026 08:14:36 +0000</pubDate>
				<category><![CDATA[ಕಲಬುರಗಿ]]></category>
		<category><![CDATA[kalaburagi]]></category>
		<guid isPermaLink="false">https://samyuktakarnataka.in/?p=98396</guid>

					<description><![CDATA[<p>ಕಲ್ಯಾಣ ಕರ್ನಾಟಕಕ್ಕೆ ಮತ್ತೊಂದು ಪ್ರವಾಸಿ ತಾಣ; ಕಲಬುರಗಿ ಮೃಗಾಲಯ ಉದ್ಘಾಟನೆ ಸಂ.ಕ.‌ ಸಮಾಚಾರ ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪರಿಸರ ಸಂರಕ್ಷಣೆ, ವನ್ಯಜೀವಿ ಜಾಗೃತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನಿರ್ಮಿಸಲಾದ ನೂತನ ಮೃಗಾಲಯವನ್ನು ಸೋಮವಾರ ಉದ್ಘಾಟಿಸಲಾಯಿತು. ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ಮೃಗಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಸುಮಾರು 43 ಎಕರೆ [&#8230;]</p>
<p>The post <a href="https://samyuktakarnataka.in/districts/kalburgi/kalaburagi-zoo-inauguration-eshwar-khandre-environment-conservation/">ಕಲಬುರಗಿ: 35 ಕೋಟಿ ವೆಚ್ಚದ ನೂತನ ಮೃಗಾಲಯ ಲೋಕಾರ್ಪಣೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಕಲ್ಯಾಣ ಕರ್ನಾಟಕಕ್ಕೆ ಮತ್ತೊಂದು ಪ್ರವಾಸಿ ತಾಣ; ಕಲಬುರಗಿ ಮೃಗಾಲಯ ಉದ್ಘಾಟನೆ</strong></p>



<p class="wp-block-paragraph"><strong>ಸಂ.ಕ.‌ ಸಮಾಚಾರ ಕಲಬುರಗಿ:</strong> ಕಲ್ಯಾಣ ಕರ್ನಾಟಕ ಭಾಗದಲ್ಲಿ ಪರಿಸರ ಸಂರಕ್ಷಣೆ, ವನ್ಯಜೀವಿ ಜಾಗೃತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನಿರ್ಮಿಸಲಾದ ನೂತನ ಮೃಗಾಲಯವನ್ನು ಸೋಮವಾರ ಉದ್ಘಾಟಿಸಲಾಯಿತು.</p>



<p class="wp-block-paragraph">ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ಮೃಗಾಲಯವನ್ನು ಉದ್ಘಾಟಿಸಿ ಮಾತನಾಡಿದರು.</p>



<p class="wp-block-paragraph">ಸುಮಾರು 43 ಎಕರೆ ಪ್ರದೇಶದಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಮೃಗಾಲಯ ಪರಿಸರ ಸಮತೋಲನ ಕಾಪಾಡುವ ಜೊತೆಗೆ ವಿದ್ಯಾರ್ಥಿಗಳ ಜ್ಞಾನಾರ್ಜನೆ ಹಾಗೂ ಪ್ರವಾಸಿ ತಾಣವಾಗಿ ರೂಪುಗೊಳ್ಳಲಿದೆ ಎಂದು ಸಚಿವ ಖಂಡ್ರೆ ಹೇಳಿದರು.</p>



<p class="wp-block-paragraph"><strong>“ಕಲ್ಯಾಣ ಕರ್ನಾಟಕಕ್ಕೆ ದೊಡ್ಡ ಕೊಡುಗೆ” :</strong> “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸ್ಥಗಿತಗೊಂಡಿದ್ದ ಈ ಯೋಜನೆಗೆ ಸಚಿವ ಪ್ರಿಯಾಂಕ್ ಖರ್ಗೆ ವಿಶೇಷ ಆಸಕ್ತಿ ವಹಿಸಿ ಚುರುಕು ನೀಡಿದ ಪರಿಣಾಮ ಇಂದು ಮೃಗಾಲಯ ಲೋಕಾರ್ಪಣೆಗೊಂಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಂಪಿಯ ನಂತರದ ಪ್ರಮುಖ ಮೃಗಾಲಯವಾಗಿ ಇದು ರೂಪುಗೊಳ್ಳಲಿದೆ” ಎಂದು ಖಂಡ್ರೆ ಹೇಳಿದರು. ಮೃಗಾಲಯ ನಿರ್ಮಾಣಕ್ಕೆ ಕೆಕೆಆರ್‌ಡಿಬಿಯಿಂದ 29 ಕೋಟಿ ರೂ., ಕರ್ನಾಟಕ ಮೃಗಾಲಯ ಪ್ರಾಧಿಕಾರದಿಂದ 6 ಕೋಟಿ ರೂ. ಹಾಗೂ ಇನ್ಫೋಸಿಸ್ ಸಂಸ್ಥೆಯಿಂದ 3.20 ಕೋಟಿ ರೂ. ನೆರವು ದೊರೆತಿದೆ ಎಂದು ಅವರು ಮಾಹಿತಿ ನೀಡಿದರು.</p>



<p class="wp-block-paragraph"><strong>ರಾಜ್ಯದ 9ನೇ ಮೃಗಾಲಯ : </strong>ಕಲಬುರಗಿ ಮೃಗಾಲಯವು ಕರ್ನಾಟಕದ 9ನೇ ಮೃಗಾಲಯವಾಗಿದ್ದು, ದೇಶದಲ್ಲೇ ಮೃಗಾಲಯಗಳ ಸಂಖ್ಯೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಸಚಿವರು ತಿಳಿಸಿದರು. 2022ರ ಪ್ರಾಣಿ ಜನಗಣತಿಯ ಪ್ರಕಾರ ರಾಜ್ಯದಲ್ಲಿ 6,395 ಆನೆಗಳು ಹಾಗೂ 563 ಹುಲಿಗಳಿವೆ ಎಂದು ವಿವರಿಸಿದರು.</p>



<p class="wp-block-paragraph"><strong>56 ಪ್ರಭೇದದ ಪ್ರಾಣಿ-ಪಕ್ಷಿಗಳ ವೀಕ್ಷಣೆ : </strong>ನೂತನ ಮೃಗಾಲಯದಲ್ಲಿ ಒಟ್ಟು 56 ವಿವಿಧ ಪ್ರಾಣಿ ಮತ್ತು ಪಕ್ಷಿ ಪ್ರಭೇದಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಬನ್ನೇರುಘಟ್ಟದಿಂದ ಎರಡು ಸಿಂಹಗಳನ್ನು ತರಲಾಗಿದ್ದು, ಮೊಸಳೆ, ನರಿ ಸೇರಿದಂತೆ ಹಲವು ವನ್ಯಜೀವಿಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಪರೂಪದ ಪ್ರಾಣಿ-ಪಕ್ಷಿಗಳನ್ನು ತರಲು ಯೋಜಿಸಲಾಗಿದೆ ಎಂದು ಸಚಿವರು ಹೇಳಿದರು.</p>



<p class="wp-block-paragraph"><strong>ಚಿಂಚೋಳಿ ವನ್ಯಜೀವಿ ಧಾಮಕ್ಕೆ ವಿಶೇಷ ಒತ್ತು : </strong>ಚಿಂಚೋಳಿ ವನ್ಯಜೀವಿ ಧಾಮದ ಅಭಿವೃದ್ಧಿಗೂ ಸರ್ಕಾರ ವಿಶೇಷ ಗಮನ ಹರಿಸುತ್ತಿದ್ದು, ಅಲ್ಲಿ ಈಗಾಗಲೇ ಬೋಟಿಂಗ್ ಹಾಗೂ ಸಫಾರಿಗೆ ಚಾಲನೆ ನೀಡಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗಿದೆ ಎಂದು ಖಂಡ್ರೆ ತಿಳಿಸಿದರು.</p>



<p class="wp-block-paragraph"><strong>ಹಸಿರು ಹೊದಿಕೆ ಹೆಚ್ಚಿಸಲು ಸರ್ಕಾರದ ಕ್ರಮ : </strong>ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಪ್ರದೇಶ ಮತ್ತು ಹಸಿರು ಹೊದಿಕೆ ಕಡಿಮೆಯಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವರು, ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಇರುವುದರಿಂದ ಹವಾಮಾನ ವೈಪರಿತ್ಯಗಳು ಹೆಚ್ಚಾಗುತ್ತಿವೆ ಎಂದು ಹೇಳಿದರು. ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಕೆಆರ್‌ಡಿಬಿ ಸಭೆಯಲ್ಲಿ ವಿಶೇಷ ಚರ್ಚೆ ನಡೆಸಿ ಅಗತ್ಯ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.</p>



<p class="wp-block-paragraph"><strong>ಮೂರು ವರ್ಷದಲ್ಲಿ 11 ಲಕ್ಷ ಸಸಿ ನೆಡುವ ಕಾರ್ಯ : </strong>ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 11 ಲಕ್ಷ ಸಸಿಗಳನ್ನು ನೆಟ್ಟಿದ್ದು, ಅವುಗಳಲ್ಲಿ ಶೇ.80ರಷ್ಟು ಸಸಿಗಳು ಬದುಕುಳಿದಿವೆ ಎಂದು ಖಂಡ್ರೆ ತಿಳಿಸಿದರು. ನೆಟ್ಟ ಸಸಿಗಳಿಗೆ ಐದು ವರ್ಷಗಳ ಕಾಲ ಸಮರ್ಪಕ ನೀರು ಮತ್ತು ಸಂರಕ್ಷಣೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>



<p class="wp-block-paragraph"><strong>ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ: </strong>ರಾಜ್ಯದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯವೂ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಮಾತ್ರವೇ ಸುಮಾರು 250 ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲಾಗಿದೆ ಎಂದು ಸಚಿವರು ಹೇಳಿದರು. ಸುಮಾರು 10,000 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಈಗಾಗಲೇ ಮುಕ್ತಗೊಳಿಸಲಾಗಿದ್ದು, ಹಂತ ಹಂತವಾಗಿ ಇನ್ನಷ್ಟು ಅರಣ್ಯ ಹಾಗೂ ಕಂದಾಯ ಭೂಮಿ ಒತ್ತುವರಿ ತೆರವು ಮಾಡಲಾಗುವುದು ಎಂದರು.</p>



<p class="wp-block-paragraph"><strong>ಸಾರ್ವಜನಿಕರ ವೀಕ್ಷಣೆಗೆ ಸಮಯ ಮತ್ತು ಟಿಕೆಟ್ ದರ :</strong> ಮೃಗಾಲಯವು ಪ್ರತಿದಿನ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದೆ. ಪ್ರತಿ ಮಂಗಳವಾರ ರಜೆ ಇರಲಿದೆ. ಟಿಕೆಟ್ ದರವನ್ನು 12 ವರ್ಷ ಮೇಲ್ಪಟ್ಟವರಿಗೆ 75 ರೂ., 12 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ 40 ರೂ. ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 25 ರೂ. ಎಂದು ನಿಗದಿಪಡಿಸಲಾಗಿದೆ.</p>



<p class="wp-block-paragraph"><strong>ಗಣ್ಯರ ಉಪಸ್ಥಿತಿ :</strong> ಕಾರ್ಯಕ್ರಮದಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ. ರಂಗಸ್ವಾಮಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ. ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="vmO1ZrFQa9"><a href="https://samyuktakarnataka.in/news/india/supreme-court-bail-rule-jail-exception-uapa-andrabi-case/">ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ಉಮರ್ ಖಾಲಿದ್‌ಗೆ ಜಾಮೀನು ನಿರಾಕರಣೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್&#8221; &#8212; Samyukta Karnataka" src="https://samyuktakarnataka.in/news/india/supreme-court-bail-rule-jail-exception-uapa-andrabi-case/embed/#?secret=I9LVDSF1Ie#?secret=vmO1ZrFQa9" data-secret="vmO1ZrFQa9" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/kalaburagi-zoo-inauguration-eshwar-khandre-environment-conservation/">ಕಲಬುರಗಿ: 35 ಕೋಟಿ ವೆಚ್ಚದ ನೂತನ ಮೃಗಾಲಯ ಲೋಕಾರ್ಪಣೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಸಿಎಂ ಕುರ್ಚಿಗೆ ಕಂಕಟ ಬಂದಾಗ ಹಿಜಾಬ್ ಜಾರಿ ಗಿಮಿಕ್</title>
		<link>https://samyuktakarnataka.in/districts/kalburgi/govinda-karajola-sparks-controversy-against-cm-in-kalaburagi/</link>
		
		<dc:creator><![CDATA[Samyukta Karnataka]]></dc:creator>
		<pubDate>Sun, 17 May 2026 09:26:40 +0000</pubDate>
				<category><![CDATA[ಕಲಬುರಗಿ]]></category>
		<category><![CDATA[kalaburagi]]></category>
		<guid isPermaLink="false">https://samyuktakarnataka.in/?p=98321</guid>

					<description><![CDATA[<p>ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಕಟ ಬಂದಾಗ ಹಿಜಾಬ್, ಜನಿವಾರ್, ಶಿವದಾರ ಜಾರಿ ಮಾಡುವ ಮೂಲಕ ಜನರ ಮನಸ್ಸು ಬೇರೆಡೆ ಸೆಳೆಯುವ ಯತ್ನ ಮಾಡಿದ್ದಾರೆ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಆರೋಪಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ತಮ್ಮ ಕುರ್ಚಿಗೆ ಕಂಕಟ ಬಂದಾಗ ಕಳೆದ ಎಂಟು ವರ್ಷಗಳಿಂದ ಇಂತಹ ಗಿಮಿಕ್ ಮಾಡುತ್ತಲೇ ಬಂದಿದ್ದಾರೆ ಎಂದು ಆಪಾದಿಸಿದರು. ಮೊದಲು ಜಾತಿಗಣತಿ ಎಂದು ಘೋಷಣೆ ಮಾಡಿದ್ದರು, ಆದರೆ ಸದಾಶಿವ ಆಯೋಗ, ಮಾಧುಸ್ವಾಮಿ ವರದಿ [&#8230;]</p>
<p>The post <a href="https://samyuktakarnataka.in/districts/kalburgi/govinda-karajola-sparks-controversy-against-cm-in-kalaburagi/">ಸಿಎಂ ಕುರ್ಚಿಗೆ ಕಂಕಟ ಬಂದಾಗ ಹಿಜಾಬ್ ಜಾರಿ ಗಿಮಿಕ್</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಕಲಬುರಗಿ:</strong> ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಕಟ ಬಂದಾಗ ಹಿಜಾಬ್, ಜನಿವಾರ್, ಶಿವದಾರ ಜಾರಿ ಮಾಡುವ ಮೂಲಕ ಜನರ ಮನಸ್ಸು ಬೇರೆಡೆ ಸೆಳೆಯುವ ಯತ್ನ ಮಾಡಿದ್ದಾರೆ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.</p>



<p class="wp-block-paragraph">ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ತಮ್ಮ ಕುರ್ಚಿಗೆ ಕಂಕಟ ಬಂದಾಗ ಕಳೆದ ಎಂಟು ವರ್ಷಗಳಿಂದ ಇಂತಹ ಗಿಮಿಕ್ ಮಾಡುತ್ತಲೇ ಬಂದಿದ್ದಾರೆ ಎಂದು ಆಪಾದಿಸಿದರು.</p>



<p class="wp-block-paragraph">ಮೊದಲು ಜಾತಿಗಣತಿ ಎಂದು ಘೋಷಣೆ ಮಾಡಿದ್ದರು, ಆದರೆ ಸದಾಶಿವ ಆಯೋಗ, ಮಾಧುಸ್ವಾಮಿ ವರದಿ ಮತ್ತು ನಾಗಮೋಹನದಾಸ ವರದಿ ಜಾರಿಗೆ ತರಲಿಲ್ಲ ಜೊತೆಗೆ ಸುಪ್ರೀಂ ಕೋರ್ಟ್ ಆದೇಶ ಪಾಲನೆಯೂ ಮಾಡಿಲ್ಲ. ಇದೀಗ ಶಾಲೆ-ಕಾಲೇಜಿನಲ್ಲಿ ಹಿಜಾಜ್, ಜನಿವಾರ ಮತ್ತು ಶಿವದಾರ ಧರಸುವ ಆದೇಶ ಜಾರಿ ಮಾಡಿ ಜನರಿಗೆ ಮಿಸ್ ಗೈಡ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>



<p class="wp-block-paragraph">ದೇಶದ ಜನತೆ ಅನಾದಿಕಾಲದಿಂದಲೂ ತಮ್ಮ ಕಾಯಕದೊಂದಿಗೆ ತಮ್ಮ ಧರ್ಮ ಮತ್ತು ಸಂಸ್ಕೃತಿ ಜೊತೆಗೆ ಬದುಕುತ್ತಿದ್ದಾರೆ.‌ ಆದರೆ, ಈ ಬಂಡ ಸಿದ್ದರಾಮಯ್ಯನ ಸರ್ಕಾರ ಇಂತಹ ರಾಜಕೀಯ ಗಿಮಿಕ್ ಮಾಡಿ ಮಕ್ಕಳ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದರು.</p>



<p class="wp-block-paragraph">ಬಡವ, ಶ್ರೀಮಂತ ಎಂಬ ಬೇಧ-ಭಾವ ಮಕ್ಕಳಲ್ಲಿ ಬರಬಾರದು ಎಂಬ ಕಾರಣಕ್ಕೆ ಸರಕಾರಗಳು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಏಕರೂಪ ಸಮವಸ್ತ್ರ ಜಾರಿಗೆ ತಂದಿವೆ. ಆದರೆ, ಸಿದ್ದರಾಮಯ್ಯ ತಿಳಿ ನೀರಿನ ಮೇಲೆ ಕಲ್ಲು ಹೊಡೆದು ಬಡಿದಬ್ಬಿಸಿ ಮಕ್ಕಳ ‌ಮನಸ್ಸಿನಲ್ಲಿ ಬೇಧಭಾವ‌‌ ಮೂಡಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಸಮಸ್ಯೆ ಹುಟ್ಟಿಹಾಕುತ್ತಿರುವ ಜನವಿರೋಧಿ ಆದೇಶ ನಾವು ಒಪ್ಪುವುದಿಲ್ಲ ಎಂದರು.</p>



<p class="wp-block-paragraph">ಅಹಿಂದ ನಾಯಕ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಅಧಿಕ ದಲಿತರ ಮೇಲೆ ದೌರ್ಜನ್ಯ, ಮಹಿಳೆಯರ ಕೊಲೆ ಪ್ರಮಾಣ ಮುಗಿಲು ಮುಟ್ಟಿದೆ. ದಲಿತರ ರಕ್ಷಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ದಲಿತರಿಗೆ ಮೀಸಲಿದ್ದ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಒಳ‌ಮೀಸಲಾತಿಯಲ್ಲಿ ಮೋಸ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="WXGBkawCv4"><a href="https://samyuktakarnataka.in/news/india/darling-i-leaked-the-neet-question-paper-just-for-you-said-the-professor-arrested/">‘ಡಾರ್ಲಿಂಗ್, ನಿನಗಾಗಿಯೇ ನೀಟ್‌ ಪ್ರಶ್ನೆಪತ್ರಿಕೆ ಲೀಕ್ ಮಾಡಿದ್ದೇನೆ’ ಎಂದ ಪ್ರಾಧ್ಯಾಪಕ ಸಿಕ್ಕಿಬಿದ್ದದ್ದು ಹೇಗೆ?</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;‘ಡಾರ್ಲಿಂಗ್, ನಿನಗಾಗಿಯೇ ನೀಟ್‌ ಪ್ರಶ್ನೆಪತ್ರಿಕೆ ಲೀಕ್ ಮಾಡಿದ್ದೇನೆ’ ಎಂದ ಪ್ರಾಧ್ಯಾಪಕ ಸಿಕ್ಕಿಬಿದ್ದದ್ದು ಹೇಗೆ?&#8221; &#8212; Samyukta Karnataka" src="https://samyuktakarnataka.in/news/india/darling-i-leaked-the-neet-question-paper-just-for-you-said-the-professor-arrested/embed/#?secret=I5lDl5SMby#?secret=WXGBkawCv4" data-secret="WXGBkawCv4" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/govinda-karajola-sparks-controversy-against-cm-in-kalaburagi/">ಸಿಎಂ ಕುರ್ಚಿಗೆ ಕಂಕಟ ಬಂದಾಗ ಹಿಜಾಬ್ ಜಾರಿ ಗಿಮಿಕ್</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ಕಲಬುರಗಿಯಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ</title>
		<link>https://samyuktakarnataka.in/districts/kalburgi/retired-soldier-brutally-murdered-in-kalaburagi/</link>
		
		<dc:creator><![CDATA[Samyukta Karnataka]]></dc:creator>
		<pubDate>Sun, 17 May 2026 07:22:48 +0000</pubDate>
				<category><![CDATA[ಕಲಬುರಗಿ]]></category>
		<category><![CDATA[kalaburagi]]></category>
		<guid isPermaLink="false">https://samyuktakarnataka.in/?p=98291</guid>

					<description><![CDATA[<p>​ಕಲಬುರಗಿ: ನಗರದಲ್ಲಿ ಹಗಲು ರಾತ್ರಿಯೆನ್ನದೆ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಇದೀಗ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ನಿವೃತ್ತ ಸೈನಿಕನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಮ ಮಂದಿರ ಬಳಿ ಭಾನುವಾರ ನಡೆದಿದೆ. ​ಆಳಂದ ತಾಲೂಕಿನ ಹಡಲಗಿ ಗ್ರಾಮದ ನಿವಾಸಿ ರವಿಚಂದ್ರ ಖೇಡ್ (45) ಕೊಲೆಯಾದ ದುರ್ದೈವಿ. ಇವರು ಕಳೆದ ನಾಲ್ಕು ವರ್ಷಗಳ ಹಿಂದಷ್ಟೇ ಬಿಎಸ್‌ಎಫ್‌ (BSF) ಪಡೆಯಿಂದ ನಿವೃತ್ತರಾಗಿದ್ದರು. ಸದ್ಯ ಕಲಬುರಗಿಯ ಇಂಡಿಯನ್ ಆಯಿಲ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ​ನಗರದ [&#8230;]</p>
<p>The post <a href="https://samyuktakarnataka.in/districts/kalburgi/retired-soldier-brutally-murdered-in-kalaburagi/">ಕಲಬುರಗಿಯಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph">​<strong>ಕಲಬುರಗಿ:</strong> ನಗರದಲ್ಲಿ ಹಗಲು ರಾತ್ರಿಯೆನ್ನದೆ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಇದೀಗ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ನಿವೃತ್ತ ಸೈನಿಕನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಮ ಮಂದಿರ ಬಳಿ ಭಾನುವಾರ ನಡೆದಿದೆ.</p>



<p class="wp-block-paragraph">​ಆಳಂದ ತಾಲೂಕಿನ ಹಡಲಗಿ ಗ್ರಾಮದ ನಿವಾಸಿ ರವಿಚಂದ್ರ ಖೇಡ್ (45) ಕೊಲೆಯಾದ ದುರ್ದೈವಿ. ಇವರು ಕಳೆದ ನಾಲ್ಕು ವರ್ಷಗಳ ಹಿಂದಷ್ಟೇ ಬಿಎಸ್‌ಎಫ್‌ (BSF) ಪಡೆಯಿಂದ ನಿವೃತ್ತರಾಗಿದ್ದರು. ಸದ್ಯ ಕಲಬುರಗಿಯ ಇಂಡಿಯನ್ ಆಯಿಲ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.</p>



<p class="wp-block-paragraph">​ನಗರದ ರಾಮ ಮಂದಿರದ ಬಳಿ ಇರುವ ವಿವಾದಿತ ಖಾಸಗಿ ಜಾಗವೊಂದರಲ್ಲಿ ಈ ಭೀಕರ ಕೊಲೆ ನಡೆದಿದೆ. ದುಷ್ಕರ್ಮಿಗಳು ರವಿಚಂದ್ರ ಅವರ ತಲೆಗೆ ಕಬ್ಬಿಣದ ರಾಡ್‌ನಿಂದ ಬಲವಾಗಿ ಜಜ್ಜಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.</p>



<p class="wp-block-paragraph">ಜಾಗದ ವಿವಾದವೇ ಈ ಕೊಲೆಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆನಾದರೂ ವೈಷಮ್ಯ ಅಡಗಿದೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಬೇಕಿದೆ. ಘಟನಾ ಸ್ಥಳಕ್ಕೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="SGHqkpI7n9"><a href="https://samyuktakarnataka.in/news/india/massive-fire-breaks-out-in-rajdhani-express-train/">ಚಲಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭೀಕರ ಬೆಂಕಿ ಅವಘಡ: ಬಿ 1 ಕೋಚ್ ಜಖಂ, ತಪ್ಪಿದ ಭಾರಿ ದುರಂತ!</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ಚಲಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭೀಕರ ಬೆಂಕಿ ಅವಘಡ: ಬಿ 1 ಕೋಚ್ ಜಖಂ, ತಪ್ಪಿದ ಭಾರಿ ದುರಂತ!&#8221; &#8212; Samyukta Karnataka" src="https://samyuktakarnataka.in/news/india/massive-fire-breaks-out-in-rajdhani-express-train/embed/#?secret=LCul5Q4Yhh#?secret=SGHqkpI7n9" data-secret="SGHqkpI7n9" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/retired-soldier-brutally-murdered-in-kalaburagi/">ಕಲಬುರಗಿಯಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ : ಪ್ರಿಯಾಂಕ್ ಖರ್ಗೆ</title>
		<link>https://samyuktakarnataka.in/districts/kalburgi/gram-panchayat-elections-to-be-held-by-year-end-says-priyank-kharge/</link>
		
		<dc:creator><![CDATA[Samyukta Karnataka]]></dc:creator>
		<pubDate>Sat, 09 May 2026 12:07:24 +0000</pubDate>
				<category><![CDATA[ಕಲಬುರಗಿ]]></category>
		<category><![CDATA[kalaburagi]]></category>
		<guid isPermaLink="false">https://samyuktakarnataka.in/?p=97844</guid>

					<description><![CDATA[<p>ಕಲಬುರಗಿ: ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಿ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣ ಗೊಳಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನಗರದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಗಡಿ ಗುರುತಿಸುವ ಪ್ರಕ್ರಿಯೆಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸುವ ಅವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಗ್ರಾಮ ಪಂಚಾಯತ್ ನಂತರ ತಾಲೂಕು [&#8230;]</p>
<p>The post <a href="https://samyuktakarnataka.in/districts/kalburgi/gram-panchayat-elections-to-be-held-by-year-end-says-priyank-kharge/">ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ : ಪ್ರಿಯಾಂಕ್ ಖರ್ಗೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>ಕಲಬುರಗಿ: </strong>ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಿ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣ ಗೊಳಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.</p>



<p class="wp-block-paragraph">ನಗರದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಗಡಿ ಗುರುತಿಸುವ ಪ್ರಕ್ರಿಯೆಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸುವ ಅವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಿದರು.</p>



<p class="wp-block-paragraph">ಗ್ರಾಮ ಪಂಚಾಯತ್ ನಂತರ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ: ಗ್ರಾಮ ಪಂಚಾಯತ್ ಚುನಾವಣೆ ಪೂರ್ಣಗೊಂಡ ಬಳಿಕ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನೂ ಹಂತ ಹಂತವಾಗಿ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. “ಗ್ರಾಮ ಪಂಚಾಯತ್ ಚುನಾವಣೆ ನಂತರ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೂ ಸರ್ಕಾರ ಸಿದ್ಧತೆ ನಡೆಸುತ್ತಿದೆ,” ಎಂದು ಅವರು ತಿಳಿಸಿದರು.</p>



<p class="wp-block-paragraph"><strong>ಕುಡಿಯುವ ನೀರಿಗೆ ಅನುದಾನದ ಕೊರತೆ ಇಲ್ಲ: </strong>ಬೇಸಿಗೆ ಹಿನ್ನೆಲೆ ಕಲಬುರಗಿ ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಖರ್ಗೆ, “ಕುಡಿಯುವ ನೀರಿನ ಕಾಮಗಾರಿಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ,” ಎಂದು ಹೇಳಿದರು. ಜಿಲ್ಲೆಯ 21 ಗ್ರಾಮಗಳಲ್ಲಿ ಹೊಸ ಬೋರ್‌ವೆಲ್‌ಗಳನ್ನು ಕೊರೆಯಲಾಗಿದ್ದು, ಇನ್ನೂ ನಾಲ್ಕು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>



<p class="wp-block-paragraph"><strong>ಹೆಚ್ಚುವರಿ ಅನುದಾನ ಬಿಡುಗಡೆ : </strong>ಪ್ರತಿ ಜಿಲ್ಲೆಗೆ ₹5 ಕೋಟಿ ಅನುದಾನ ಒದಗಿಸಲಾಗಿದೆ. ಅಗತ್ಯವಿದ್ದರೆ ಹೆಚ್ಚುವರಿ ಅನುದಾನವನ್ನೂ ಬಿಡುಗಡೆ ಮಾಡಲಾಗುವುದು ಎಂದು ಖರ್ಗೆ ಹೇಳಿದರು. ಇದಲ್ಲದೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ (ಕೆಕೆಆರ್‌ಡಿಬಿ) ವತಿಯಿಂದ ₹17.30 ಕೋಟಿ ಅನುದಾನ ಸಹ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.</p>



<p class="wp-block-paragraph"><strong>ಟಾಸ್ಕ್ ಫೋರ್ಸ್ ರಚನೆ :</strong> ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ ಎಂದು ಸಚಿವರು ಹೇಳಿದರು. “ಶಾಸಕರು ಸೂಚಿಸುವ ಆದ್ಯತೆ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ,” ಎಂದು ಅವರು ತಿಳಿಸಿದರು.</p>



<p class="wp-block-paragraph"><strong>ಭೀಮಾ ನದಿಯಿಂದ ನೀರು ಬಿಡುಗಡೆಗೆ ಒತ್ತಾಯ :</strong> ಬೇಸಿಗೆ ಸಂದರ್ಭದಲ್ಲಿ ನೀರಿನ ಕೊರತೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮಹಾರಾಷ್ಟ್ರದಿಂದ ಭೀಮಾ ನದಿಯ ನೀರು ಬಿಡುಗಡೆ ಮಾಡಲು ಮನವಿ ಮಾಡಲಾಗಿದೆ ಎಂದು ಖರ್ಗೆ ಹೇಳಿದರು. ಈ ಸಂದರ್ಭದಲ್ಲಿ ಎಂ.ವೈ.ಪಾಟೀಲ, ಹಾಗೂ ಬಿ.ಆರ್.ಪಾಟೀಲ ಸಹ ಉಪಸ್ಥಿತರಿದ್ದರು ಎಂದು ಹೇಳಿದರು.</p>



<p class="wp-block-paragraph"><strong>ಸಚಿವ ಸಂಪುಟ ವಿಸ್ತರಣೆ ಕುರಿತು :</strong> ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, “ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ,” ಎಂದು ಹೇಳಿದರು.</p>



<p class="wp-block-paragraph">ಪತ್ರಿಕಾಗೋಷ್ಠಿಯಲ್ಲಿ ಕಲಬುರಗಿ‌ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ,‌ವಿಧಾನ‌ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ‌ಖಾನ್, ಗ್ಯಾರಂಟಿ ಅನುಷ್ಠಾನ‌ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಿಕಾ ಪರಮೇಶ್ವರ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="ISJuEiXUr6"><a href="https://samyuktakarnataka.in/news/india/ed-arrests-punjab-minister-sanjeev-arora-in-financial-irregularities-case/">ಸಚಿವ ಸಂಜೀವ್ ಅರೋರಾ ಬಂಧನ: ಆಮ್ ಆದ್ಮಿ ಸರ್ಕಾರಕ್ಕೆ ED ಶಾಕ್</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ಸಚಿವ ಸಂಜೀವ್ ಅರೋರಾ ಬಂಧನ: ಆಮ್ ಆದ್ಮಿ ಸರ್ಕಾರಕ್ಕೆ ED ಶಾಕ್&#8221; &#8212; Samyukta Karnataka" src="https://samyuktakarnataka.in/news/india/ed-arrests-punjab-minister-sanjeev-arora-in-financial-irregularities-case/embed/#?secret=zKdw7T5zUD#?secret=ISJuEiXUr6" data-secret="ISJuEiXUr6" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/gram-panchayat-elections-to-be-held-by-year-end-says-priyank-kharge/">ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ : ಪ್ರಿಯಾಂಕ್ ಖರ್ಗೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
		<item>
		<title>‘ಪಾರದರ್ಶಕ ಚುನಾವಣೆ ನಡೆದರೆ BJP ಗೆಲ್ಲಲ್ಲ’: ಖರ್ಗೆ ತೀವ್ರ ಟೀಕೆ</title>
		<link>https://samyuktakarnataka.in/districts/kalburgi/priyank-kharge-slams-bjp-over-yediyurappa-event-and-political-issues/</link>
		
		<dc:creator><![CDATA[Samyukta Karnataka]]></dc:creator>
		<pubDate>Sat, 09 May 2026 07:24:36 +0000</pubDate>
				<category><![CDATA[ಕಲಬುರಗಿ]]></category>
		<category><![CDATA[kalaburagi]]></category>
		<guid isPermaLink="false">https://samyuktakarnataka.in/?p=97822</guid>

					<description><![CDATA[<p>‘ಗವರ್ನರ್‌ಗಳು ಬಿಜೆಪಿ ಕೈಗೊಂಬೆ’: ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಆರೋಪ ಸಂ.ಕ.‌ಸಮಾಚಾರ ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರ ಹೆಸರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಔಚಿತ್ಯವೇನು ಎಂದು ಪ್ರಶ್ನಿಸಿದರು. ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಅದು ಬಿಜೆಪಿ ಪಕ್ಷದ ಕಾರ್ಯಕ್ರಮ. ಅದರ ಬಗ್ಗೆ ನಾವೇನು ಹೇಳಬೇಕು? ಪ್ರಚಾರಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ,” ಎಂದು ಟೀಕಿಸಿದರು. ‘ಯಡಿಯೂರಪ್ಪ ವಿರುದ್ಧ ಆರೋಪಗಳಿವೆ’ : ಯಡಿಯೂರಪ್ಪ ಕಾರ್ಯಕ್ರಮದ ಕುರಿತು ಬಿಜೆಪಿ [&#8230;]</p>
<p>The post <a href="https://samyuktakarnataka.in/districts/kalburgi/priyank-kharge-slams-bjp-over-yediyurappa-event-and-political-issues/">‘ಪಾರದರ್ಶಕ ಚುನಾವಣೆ ನಡೆದರೆ BJP ಗೆಲ್ಲಲ್ಲ’: ಖರ್ಗೆ ತೀವ್ರ ಟೀಕೆ</a> appeared first on <a href="https://samyuktakarnataka.in">Samyukta Karnataka</a>.</p>
]]></description>
										<content:encoded><![CDATA[
<p class="wp-block-paragraph"><strong>‘ಗವರ್ನರ್‌ಗಳು ಬಿಜೆಪಿ ಕೈಗೊಂಬೆ’: ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಆರೋಪ</strong></p>



<p class="wp-block-paragraph"><strong>ಸಂ.ಕ.‌ಸಮಾಚಾರ ಕಲಬುರಗಿ: </strong>ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರ ಹೆಸರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಔಚಿತ್ಯವೇನು ಎಂದು ಪ್ರಶ್ನಿಸಿದರು.</p>



<p class="wp-block-paragraph">ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಅದು ಬಿಜೆಪಿ ಪಕ್ಷದ ಕಾರ್ಯಕ್ರಮ. ಅದರ ಬಗ್ಗೆ ನಾವೇನು ಹೇಳಬೇಕು? ಪ್ರಚಾರಕ್ಕಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ,” ಎಂದು ಟೀಕಿಸಿದರು.</p>



<p class="wp-block-paragraph"><strong>‘ಯಡಿಯೂರಪ್ಪ ವಿರುದ್ಧ ಆರೋಪಗಳಿವೆ’ : </strong>ಯಡಿಯೂರಪ್ಪ ಕಾರ್ಯಕ್ರಮದ ಕುರಿತು ಬಿಜೆಪಿ ಒಳಗೇ ಅಪಸ್ವರ ಕೇಳಿಬರುತ್ತಿದೆ ಎಂದು ಹೇಳಿದ ಖರ್ಗೆ, “ಯಡಿಯೂರಪ್ಪ ಅವರ ಮೇಲೆ ಹಲವು ಆರೋಪಗಳಿವೆ. ಇಂತಹ ಸಂದರ್ಭದಲ್ಲಿ ಅವರ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸುವುದರ ಉದ್ದೇಶವೇನು?” ಎಂದು ಪ್ರಶ್ನಿಸಿದರು.</p>



<p class="wp-block-paragraph"><strong>‘ಬಿಜೆಪಿಯಲ್ಲಿ ಸಮರ್ಥ ನಾಯಕತ್ವ ಇಲ್ಲ’ :</strong> ಬಿಜೆಪಿ ಪಕ್ಷದಲ್ಲಿ ಸಮರ್ಥ ನಾಯಕತ್ವದ ಕೊರತೆ ಇದೆ ಎಂದು ಆರೋಪಿಸಿದ ಅವರು, “ಈ ವಿಚಾರವನ್ನು ಬಿಜೆಪಿಯ ಶಾಸಕರೇ ಪ್ರಶ್ನಿಸುತ್ತಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು,” ಎಂದು ಹೇಳಿದರು.</p>



<p class="wp-block-paragraph"><strong>ತಮಿಳುನಾಡು ರಾಜಕೀಯದ ಉಲ್ಲೇಖ :</strong> ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಖರ್ಗೆ, “ತಮಿಳುನಾಡಿನಲ್ಲಿ ಬಿಜೆಪಿ ಗೆದ್ದಿರುವುದು ಒಂದೇ ಒಂದು ಸ್ಥಾನ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಮತ್ತು ನಾರಾಯಣಸ್ವಾಮಿ ಉತ್ತರಿಸಲಿ,” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.</p>



<p class="wp-block-paragraph"><strong>ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ: </strong>ತಮಿಳು‌ನಾಡಲ್ಲಿ ಕಾಂಗ್ರೆಸ್ ಡಿಎಂಕೆ ಗೆ ಬೆನ್ನಿಗೆ ಚೂರಿ‌ಹಾಕಿದ್ದಾರೆ ಎನ್ನುವ ಆರೋಪಕ್ಕೆ ಉತ್ತರಿಸಿದ ಸಚಿವರು ಸ್ಥಳೀಯ ನಾಯಕರ ಅಭಿಪ್ರಾಯ ಹಾಗೂ ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಟಿವಿಕೆಗೆ ಬೆಂಬಲ ನೀಡಲಾಗಿದೆ ಎಂದು ಅವರು ಕಾಂಗ್ರೆಸ್ ನಿರ್ಧಾರವನ್ನು ಸಮರ್ಥಿಸಿಕೊಂಡರು.</p>



<p class="wp-block-paragraph"><strong>‘ಪಾರದರ್ಶಕ ಚುನಾವಣೆ ನಡೆದರೆ ಬಿಜೆಪಿ ಗೆಲ್ಲಲ್ಲ’ :</strong> ಚುನಾವಣೆ ಪಾರದರ್ಶಕತೆ ಕುರಿತು ಕಿಡಿಕಾರಿದ ಖರ್ಗೆ, ಬಿಜೆಪಿಯವರು ಸಂವಿಧಾನವನ್ನು ಕಗ್ಗೊಲೆ ಮಾಡಿದ್ದಾರೆ. ಪಾರದರ್ಶಕ ಚುನಾವಣೆ ನಡೆದರೆ ಬಿಜೆಪಿ ಯಾವ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಅಷ್ಟೇಕೆ ವಿರೋಧ ಪಕ್ಷದ ನಾಯಕ‌ಆರ್ ಅಶೋಕ್ ಕೂಡಾ ಗೆಲ್ಲುವುದಿಲ್ಲ ಎಂದು ಹರಿಹಾಯ್ದ ಸಚಿವರು ಮುಖ್ಯ ಚುನಾವಣೆ ನೇಮಕ ಮೋದಿ ಹೇಳಿದಂತೆ ಆಗುತ್ತದೆ. ಚುನಾವಣೆ ಆಯೋಗ, ಇಡಿ, ಸಿಬಿಐ ಮುಂತಾದವರನ್ನು ದೂರವಿಟ್ಟು‌ಬಿಜೆಪಿ ಚುನಾವಣೆ ಎದುರಿಸಲಿ ಎಂದು ಸವಾಲ್ ಹಾಕಿದರು.</p>



<p class="wp-block-paragraph"><strong>‘ಗವರ್ನರ್‌ಗಳು ಬಿಜೆಪಿ ಕೈಗೊಂಬೆ’: </strong>ರಾಜ್ಯಪಾಲರ ಪಾತ್ರದ ಬಗ್ಗೆ ಪ್ರಶ್ನೆ ಎತ್ತಿದ ಖರ್ಗೆ, ರಾಜ್ಯದಲ್ಲಿ ಕೆಳಮನೆ ಹಾಗೂ ಮೇಲ್ಮನೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ರಾಜ್ಯಪಾಲವರು ವಾಪಸ್ ಕಳಿಸುತ್ತಾರೆ. ತಮಿಳುನಾಡಲ್ಲಿ ಬಹುಮತ ಸಾಬೀತಿಗೆ ಫ್ಲೋರ್ ಟೆಸ್ಸ್ ಮಾಡಲಿ ಅದು ಗವರ್ನರ್ ಮುಂದೆ ಅಲ್ಲ ಎಂದು ಪ್ರತಿಕ್ರಿಯಿಸಿದರು.</p>



<p class="wp-block-paragraph"><strong>ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಕ್ರಿಯೆ :</strong> ಗ್ರಾಮ ಪಂಚಾಯತ್‌ಗಳಿಗೆ ಕುಡಿಯುವ ನೀರು ಒದಗಿಸಲು ಹಣವಿಲ್ಲ ಎಂಬ ಶಾಸಕ ಬಿ. ಆರ್‌. ಪಾಟೀಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ಕುಡಿಯುವ ನೀರು‌ಒದಗಿಸಲು ಗ್ರಾಮ ಪಂಚಾಯತ ಬಳಿ‌ಹಣವಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ ಜಿಲ್ಲೆಯಲ್ಲಿ 25 ಹಳ್ಳಿಗಳಲ್ಲಿ‌ಸಮಸ್ಯೆ 21 ಬೋರ್ ವೆಲ್ ಬಾಡಿಗೆ ತೆಗೆದಿಕೊಂಡು ನೀರು ಒದಗಿಸಲಾಗುತ್ತಿದೆ ಹಾಗು ಮಿಕ್ಕ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿತ್ತಿದೆ ಎಂದು ಶಾಸಕ ಬಿ. ಆರ್. ಪಾಟೀಲ್ ಅವರ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು.</p>



<p class="wp-block-paragraph"><strong>ಸಚಿವ ಸಂಪುಟ ವಿಸ್ತರಣೆ : </strong>ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಬಗ್ಗೆ ಪಕ್ಷದ ಹೈಕಮಾಂಡ್, ಮಲ್ಲಿಕಾರ್ಜುನ್‌ ಖರ್ಗೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ,” ಎಂದರು.</p>



<p class="wp-block-paragraph"><strong>‘ಸಿಯುಕೆ ಸಂಘಪರಿವಾರದ ಶಾಖೆ’ :</strong> “ಸಿಯುಕೆ ಸಂಘಪರಿವಾರದ ಶಾಖೆಯಂತಾಗಿದೆ. ಅಲ್ಲಿ ನಡೆಯುತ್ತಿರುವ ಕೆಲವು ಬೆಳವಣಿಗೆಗಳ ಬಗ್ಗೆ ನಾವು ಗಂಭೀರವಾಗಿ ಯೋಚಿಸಬೇಕಾಗಿದೆ,” ಎಂದು ಹೇಳಿದರು.</p>



<p class="wp-block-paragraph">ನರೇಗಾ ಯೋಜನೆ ಕುರಿತು ಮಾತನಾಡಿದ ಸಚಿವರು, ನರೇಗಾ ಬಗ್ಗೆ ಮೊನ್ನೆ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಯಾಕೆಂದರ, ವಿಬಿ-ಜಿ- ರಾಮ್ ಜಿ ಬಗ್ಗೆ ಕೇಂದ್ರಕ್ಕೆ ಸ್ಪಷ್ಟವಾದ ಪ್ರಕ್ರಿಯೆಗಳಿಲ್ಲ ಎಂದರು.</p>



<p class="wp-block-paragraph">ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಎಂ ಎಲ್ ಎ ಅಲ್ಲಮಪ್ರಭು ಪಾಟೀಲ್, ಎಂ ಎಲ್ ಸಿಗಳಾದ ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ ಸೇರಿದಂತೆ ಹಲವರಿದ್ದರು.</p>



<figure class="wp-block-embed is-type-wp-embed is-provider-samyukta-karnataka wp-block-embed-samyukta-karnataka"><div class="wp-block-embed__wrapper">
<blockquote class="wp-embedded-content" data-secret="lqMacbYzVR"><a href="https://samyuktakarnataka.in/news/international/trump-announces-three-day-ceasefire-between-russia-and-ukraine/">ವಿಜಯ ದಿನಾಚರಣೆಯ ನಡುವೆ ಯುದ್ಧ ವಿರಾಮ ಘೋಷಿಸಿದ ಟ್ರಂಪ್</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ವಿಜಯ ದಿನಾಚರಣೆಯ ನಡುವೆ ಯುದ್ಧ ವಿರಾಮ ಘೋಷಿಸಿದ ಟ್ರಂಪ್&#8221; &#8212; Samyukta Karnataka" src="https://samyuktakarnataka.in/news/international/trump-announces-three-day-ceasefire-between-russia-and-ukraine/embed/#?secret=BVpJyHdoQx#?secret=lqMacbYzVR" data-secret="lqMacbYzVR" width="600" height="338" frameborder="0" marginwidth="0" marginheight="0" scrolling="no"></iframe>
</div></figure>
<p>The post <a href="https://samyuktakarnataka.in/districts/kalburgi/priyank-kharge-slams-bjp-over-yediyurappa-event-and-political-issues/">‘ಪಾರದರ್ಶಕ ಚುನಾವಣೆ ನಡೆದರೆ BJP ಗೆಲ್ಲಲ್ಲ’: ಖರ್ಗೆ ತೀವ್ರ ಟೀಕೆ</a> appeared first on <a href="https://samyuktakarnataka.in">Samyukta Karnataka</a>.</p>
]]></content:encoded>
					
		
		
			</item>
	</channel>
</rss>
