ದಾವಣಗೆರೆ: ಅಂಗನವಾಡಿ ಮುಗಿಸಿ ಮನೆಗೆ ಬರುತ್ತಿದ್ದ ಪುಟ್ಟ ಕಂದನ ತಲೆ ಮೇಲೆ ಎಂ ಸ್ಯಾಂಡ್ ಟಿಪ್ಪರ್ ಹರಿದು ಬಾಲಕಿ ಸಾವು ಕಂಡಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ.
ಹಳೇ ಕುಂದುವಾಡ ಗ್ರಾಮದ ಗಣೇಶ್ ದಂಪತಿ ಪುತ್ರಿ ಚರಸ್ವಿ(2) ಮೃತ ಬಾಲಕಿ. ಬಾಲಕಿ ಚರಸ್ವಿ ಅಂಗನವಾಡಿ ಮುಗಿಸಿಕೊಂಡು ಮಧ್ಯಾಹ್ನ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯಿಂದಾಗಿ ಮೃತಪಟ್ಟಿದ್ದಾಳೆ.
ಟಿಪ್ಪರ್ ತಲೆಯ ಮೇಲೆ ಹರಿದ ಕಾರಣ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಘಟನೆ ಖಂಡಿಸಿ ಗ್ರಾಮಸ್ಥರು ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಲಾರಿ ಚಾಲಕ, ಮಾಲೀಕನ ಬಂಧನಕ್ಕೆ ಆಗ್ರಹಿಸಿದರು. ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ, ವಿದ್ಯಾನಗರ ಪೊಲೀಸರ ಭೇಟಿ ನೀಡಿ ವಾತವರಣ ತಿಳಿಗೊಳಿಸಿದರು. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.