ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದ ಶ್ರೀನಗರ – ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸಂಚರಿಸುತ್ತಿದ್ದ ಬಸ್ವೊಂದು ದಿಢೀರ್ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸ್ಥಳೀಯೇತರ ಕಾರ್ಮಿಕರು ಸಾವನ್ನಪ್ಪಿದ್ದು, 24 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆಯಿಂದ ಅನೇಕ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಸ್ಡಿಹೆಚ್ ಪಾಂಪೋರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.