ವರುಣಾದಲ್ಲಿ ನೂರಕ್ಕೆ ನೂರು ನಾನು ಗೆಲ್ಲುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಪ್ರೀತಿ, ವಿಶ್ವಾಸ. ಚಾಮುಂಡೇಶ್ವರಿಯ ಆಶೀರ್ವಾದವಿದೆ. ನಾನು ಮಾಡಿರುವ ಕೆಲಸಗಳ ಬಗ್ಗೆ ಜನರಿಗೆ ಗೊತ್ತಿದೆ, ಹೊರಗಿನವರು, ಒಳಗಿನವರು ಎನ್ನುವುದರಲ್ಲಿ ಅರ್ಥವಿಲ್ಲ ಅಷ್ಟಕ್ಕೂ ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧೆ ಮಾಡಲಿಲ್ವಾ? ಎಂದು ಅವರು ಪ್ರಶ್ನಿಸಿದರು.