Home Advertisement
Home ನಮ್ಮ ಜಿಲ್ಲೆ ಅಗರಬತ್ತಿ ಉದ್ಯಮ ಪರಿಮಳದ ಜೊತೆಗೆ ಸಂತೋಷ ಹರಡುವ ಕಾಯಕ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

ಅಗರಬತ್ತಿ ಉದ್ಯಮ ಪರಿಮಳದ ಜೊತೆಗೆ ಸಂತೋಷ ಹರಡುವ ಕಾಯಕ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

0
103
ಅಗರಬತ್ತಿ

ಬೆಂಗಳೂರು: ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಇಂದು ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಐಮಾ ಎಕ್ಸ್ ಪೋ (AIAMA) 2022 ಉದ್ಘಾಟಿಸಿ ಮಾತನಾಡಿದರು, ಅಗರಬತ್ತಿ ಉದ್ಯಮ ಪರಿಮಳದ ಜೊತೆಗೆ ಸಂತೋಷ ಹರಡುವ ಕಾಯಕ ಮಾಡುತ್ತಿದೆ, ಯಾವುದೇ ಉದ್ಯಮ ಈ ರೀತಿ ಇಲ್ಲ, ಸಣ್ಣ ಸಣ್ಣ ಸಂತೋಷಗಳು ಕೂಡ ದೊಡ್ಡ ಸಂಭ್ರಮ ನೀಡುತ್ತವೆ ಎಂದರು.