Home Advertisement
Home ನಮ್ಮ ಜಿಲ್ಲೆ ಕಲುಷಿತ ನೀರು ಸೇವಿಸಿ ವಸತಿ ನಿಲಯ ವಿದ್ಯಾರ್ಥಿಗಳು ಅಸ್ವಸ್ಥ

ಕಲುಷಿತ ನೀರು ಸೇವಿಸಿ ವಸತಿ ನಿಲಯ ವಿದ್ಯಾರ್ಥಿಗಳು ಅಸ್ವಸ್ಥ

0
176
ನಲ್ಲಿ ನೀರು

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪುರ ಗ್ರಾಮದ ಕಸ್ತೂರಿಬಾ ವಸತಿ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ.
ಕಸ್ತೂರಬಾ ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗ್ಗೆ ಚಹಾ ಬಿಸ್ಕತ್ತು ಸೇವಿಸಿದ ಕೆಲವರಿಗೆ ವಾಂತಿಯಾಗಿದೆ ಇನ್ನು ಕೆಲ ಮಕ್ಕಳು ಅಸ್ವಸ್ಥರಾಗಿದ್ದು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.