ಕುಷ್ಟಗಿ: ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ 15 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ನಡೆದಿದೆ.
ಕಳೆದ ನಾಲ್ಕೈದು ದಿನಗಳಿಂದ ಬೋರ್ವೇಲ್ ನೀರು ಸೇವಿಸಿದ ಪರಿಣಾಮ ಗ್ರಾಮದಲ್ಲಿ ಜನರಿಗೆ ವಾಂತಿ-ಭೇದಿ ಶುರುವಾಗಿದ್ದು ರೋಗಿಗಳನ್ನು ಚಿಕಿತ್ಸೆಗಾಗಿ ಜನ ದೋಟಿಹಾಳ, ಮುದೇನೂರು, ಇಳಕಲ್, ಸಿಂಧನೂರಿಗೆ ತೆರಳಿದ್ದಾರೆ ಎನ್ನಲಾಗಿದ್ದು, ಕುಷ್ಟಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಪ್ರಕರಣಗಳು ದಾಖಲಾಗಿವೆ.
ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದ್ದು, ವಾಂತಿ-ಭೇದಿಯಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.