ಮಂಗಳೂರು: ಕಾಂಗ್ರೆಸ್ ಕಳೆದ ೭೦ ವರ್ಷಗಳಲ್ಲಿ ಜನರನ್ನು ಮರುಳು ಮಾಡಿ ಮಂಕುಬೂದಿ ಎರಚಿ, ಹೂವಿಟ್ಟೇ ದಿನದೂಡಿದೆ. ಕಾಂಗ್ರೆಸ್ನವರು ಇನ್ನು ಶಾಶ್ವತವಾಗಿ ಕಿವಿಯಲ್ಲಿ ಹೂವಿಟ್ಟು ತಿರುಗಬೇಕು ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ನಗರದಲ್ಲಿ ಇಂದು ಸಂಜೆ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಬಜೆಟ್ ಮಂಡನೆ ವೇಳೆ ವಿಧಾನಸಭೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿವಿಗೆ ಹೂವಿಟ್ಟುಕೊಂಡು ಆಗಮಿಸಿರುವುದಕ್ಕೆ ಈ ಪ್ರತಿಕ್ರಿಯೆ ನೀಡಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ಬಜೆಟ್ ಸರ್ವತೋಮುಖ ಅಭಿವೃದ್ಧಿ ಪೂರಕ ಬಜೆಟ್. ಕೃಷಿಕರು, ಮಹಿಳೆಯರು ಮತ್ತು ಯುವಕರ ಪರವಾದ ಬಜೆಟ್ ಎಂದು ಹೇಳಿದರು.
೩ ಲಕ್ಷ ಕೋಟಿಗೂ ಅಕ ಮೊತ್ತದ ಬಜೆಟ ಮಂಡನೆಯಾಗಿದೆ. ಇದು ಕೃಷಿಕರ ಕನಸಿನ ಬಜೆಟ್ ಆಗಿದ್ದು ೫ಲಕ್ಷ ರೂ. ವರೆಗೆ ರೈತರಿಗೆ ಬಡ್ಡಿ ರಹಿತ ಸಾಲ ಘೋಷಣೆಯಾಗಿದೆ. ಅಡಕೆ ಹಳದಿ, ಚುಕ್ಕಿ ರೋಗ ಸಂಶೋಧನೆಗೆ ೧೦ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕುಮ್ಕಿ, ಕಾನ, ಬಾಣೆ ಸಮಸ್ಯೆಗಳನ್ನು ಉಪ ಸಮಿತಿಗೆ ಒಪ್ಪಿಸಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವ್ಯವಸ್ಥೆ, ಪದವಿ ಪಡೆದವರಿಗೆ ೨ ಸಾವಿರ ರೂ. ನೀಡುವ ಯೋಜನೆಯನ್ನು ಘೋಷಿಸಲಾಗಿದೆ. ಹಳ್ಳಿಯ ಯುವಕರಿಗೆ ವಿವೇಕಾನಂದರ ಹೆಸರಿನಲ್ಲಿ ಸಾಲ ಯೋಜನೆ, ಸ್ವಯಂ ಉದ್ಯೋಗಕ್ಕೆ ಅವಕಾಶ ನೀಡಲಾಗಿದೆ. ಭೂ ರಹಿತ ಮಹಿಳೆಯರಿಗೆ ೫೦೦ ರೂ., ಸ್ವಸಹಾಯ ಸಂಘಕ್ಕೆ ಸಾಲ ಯೋಜನೆ, ಸ್ತ್ರೀ ಸಬಲೀಕರಣಕ್ಕೆ ಶಕ್ತಿ ತುಂಬುವ ಕಾರ್ಯ ಬಜೆಟನಲ್ಲಿ ಆಗಿದೆ ಎಂದರು.
ದ.ಕ.ಜಿಯ ಗುರುಪುರ -ನೇತ್ರಾವತಿ ನದಿಗೆ ಬಾರ್ಜ್ ವ್ಯವಸ್ಥೆ ಉತ್ತಮ ಯೋಜನೆ ಎಂದರು. ಪಿಎಫ್ಐ ಹಾಗೂ ಎಸ್ಡಿಪಿಐಗೆ ಸಂಬಂಧವಿಲ್ಲ ಎನ್ನುತ್ತಿರುತ್ತಾರೆ. ಆದರೆ ಜೈಲಿನಲ್ಲಿರುವ ಶಾಫಿ ಬೆಳ್ಳಾರೆಗೆ ಎಸ್ಡಿಪಿಐ ಚುನಾವಣೆಗೆ ಟಿಕೆಟ್ ನೀಡುವ ಮೂಲಕ ಪಿಎಫ್ಐ ಎಸ್ಡಿಪಿಐನ ಇನ್ನೊಂದು ಮುಖ ಎನ್ನುವುದು ಸ್ಪಷ್ಟವಾಗಿದೆ. ಪ್ರಜಾಪ್ರಭುತ್ವದ ದೇಶದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ, ಜೈಲಿನಲ್ಲಿರುವವನಿಗೆ, ನಿಷೇತ ಪಿಎಫ್ಐ ಸಂಘಟನಾ ಸದಸ್ಯನನ್ನು ಚುನಾವಣಾ ಕಣಕ್ಕಿಳಿಸಿರುವುದು ಸರಿಯಲ್ಲ. ಇದನ್ನು ನಾನು ವಿರೋಸುತ್ತೇನೆ. ಈ ವಿಚಾರವನ್ನು ಗೃಹ ಸಚಿವಾಲಯಕ್ಕೆ ತಿಳಿಸುತ್ತೇವೆ. ಇದರ ಬಗ್ಗೆ ಕಾಂಗ್ರೆಸ್ ಏನು ಹೇಳುತ್ತದೆ ಎಂದು ಪ್ರಶ್ನಿಸಿದರು.