ದೇಶವನ್ನು ಚೂರು ಮಾಡುವ ಕಾಂಗ್ರೆಸ್‌ನಿಂದ ಭಾರತ ಜೋಡೋ ಯಾತ್ರೆ: ಮುಖ್ಯಮಂತ್ರಿ ಬೊಮ್ಮಾಯಿ ವ್ಯಂಗ್ಯ

0
115

ಶಿರಹಟ್ಟಿ (ಗದಗ): ಕಾಂಗ್ರೆಸ್‌ನವರು ದೇಶ ಇಬ್ಭಾಗವಾಗುವಂತೆ ಮಾಡಿದರು. ಪಂಜಾಬ್‌ನ್ನು ಖಾಲಿಸ್ತಾನ ಮಾಡಲು ಪ್ರಯತ್ನಿಸಿದರು., ದೇಶವನ್ನು ಚೂರು ಮಾಡುವ ಕಾಂಗ್ರೆಸ್ ಪಕ್ಷ ಈಗ ಭಾರತ ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವ್ಯಂಗ್ಯವಾಡಿದರು.
ಅವರು ಇಂದು ಶಿರಹಟ್ಟಿಯಲ್ಲಿ ಭಾರತೀಯ ಜನತಾ ಪಕ್ಷ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸತೀಶ್ ಜಾರಕಿಹೊಳಿ ‘ಹಿಂದು’ ಹೊಲಸು ಪದ ಅಂತ ಹೇಳುವ ಮೂಲಕ ಅಲ್ಪ ಸಂಖ್ಯಾತರ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇಡೀ ಭಾರತ ದೇಶದ ಹಿಂದೂಗಳನ್ನು ಅವಮಾನ ಮಾಡಲಾಗಿದೆ. ಶ್ರೀಮಂತ ಹಾಗೂ ಪುರಾತನ ಪರಂಪರೆ, ಸಂಸ್ಕೃತಿಯುಳ್ಳ ಹಿಂದೂ ಧರ್ಮದ ನಮ್ಮದು.ಈ ಬಗ್ಗೆ ಚರ್ಚೆ ಮಾಡೊಣ ಅಂತಾರೆ. ಇದರಲ್ಲಿ ಚರ್ಚೆ ಮಾಡುವುದೇನಿದೆ. ಸಿದ್ದರಾಮಯ್ಯ , ರಾಹುಲ್ ಗಾಂಧಿ ಇದನ್ನು ಖಂಡಿಸಿಲ್ಲ. ಭಾಜಪ ಇದನ್ನು ಸಹಿಸುವುದಿಲ್ಲ. ಭಾರತದ ಅಸ್ಮಿತೆಯ ಪ್ರಶ್ನೆ ಬಂದರೆ, ಭಾಜಪ ಪುಟಿದೇಳುತ್ತದೆ ಎಂದರು.
ಒಡೆದು ಆಳುವುದು ಕಾಂಗ್ರೆಸ್ ನೀತಿ. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ, ಧರ್ಮವನ್ನು ಒಡೆದು ಆಡಳಿತ ನಡೆಸಿದರು. ಈಗಲೂ ಅದೇ ರೀತಿ ಮಾಡುತ್ತಿದ್ದಾರೆ.ಅಲ್ಪ ಸಂಖ್ಯಾತರಿಗೂ ಕಾಂಗ್ರೆಸ್ ಅನ್ಯಾಯ ಮಾಡಿದೆ. ವಕ್ಪ್ ಆಸ್ತಿಯನ್ನು ಕಾಂಗ್ರೆಸ್ ನಾಯಕರು ಲಪಟಾಯಿಸಿದ್ದಾರೆ. ಇದಕ್ಕೆ ಸಂಬಂದ ಪಟ್ಟ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದೇವೆ. ಇದಕ್ಕೆ ಪೂರಕ ತನಿಖೆಯನ್ನು ನಡೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಬಿ.ಸಿ.ಪಾಟೀಲ್, ರಾಮುಲು, ಸಂಸದ ಶಿವಕುಮಾರ ಉದಾಸಿ ಮತ್ತಿತರು ಹಾಜರಿದ್ದರು.