SK Home Ad
Home ಅಪರಾಧ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಸಚಿವರ ಮೇಲೆ ಆರೋಪ

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಸಚಿವರ ಮೇಲೆ ಆರೋಪ

0
189

ಕಲಬುರಗಿ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಕುಮಾರ್​(35) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಆತ್ಮಹತ್ಯೆಗೂ ಮುನ್ನ ಮಾಡಿದ್ದ ಆಡಿಯೋ ರೆಕಾರ್ಡ್‌ನಲ್ಲಿ ಆರೋಪಿಸಿದ್ದಾನೆ.

ಕಾರ್ಯಕರ್ತ ಶಿವಕುಮಾರ್ ಸಚಿವ ಶರಣಪ್ರಕಾಶ್ ಪಾಟೀಲ್ ಹೆಸರು ಪ್ರಸ್ತಾಪಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.