Home Advertisement
Home ನಮ್ಮ ಜಿಲ್ಲೆ ಮಂಡ್ಯದಲ್ಲಿ ಅಶೋಕ್ ಗೋ ಬ್ಯಾಕ್ ಅಭಿಯಾನ

ಮಂಡ್ಯದಲ್ಲಿ ಅಶೋಕ್ ಗೋ ಬ್ಯಾಕ್ ಅಭಿಯಾನ

0
159

ಮಂಡ್ಯ: ನಗರದ ಹಲವು ಭಾಗಗಳಲ್ಲಿ ಬಾಯ್‌ಕಾಟ್‌ ಆರ್.ಅಶೋಕ್, ಮಂಡ್ಯ ಬಿಟ್ಟು ಹೋಗಿ ಎಂಬ ದೊಡ್ಡ ದೊಡ್ಡ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಆರ್ ಅಶೋಕ್ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ. ಸಕ್ಕರೆ ನಾಡಿನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಆರ್.ಅಶೋಕ್ ವಿರುದ್ಧ ಇದೀಗ ಬಿಜೆಪಿಗರೇ ಸಿಡಿದೆದ್ದಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಬಿಜೆಪಿಗರಿಂದಲೇ ಭಾರೀ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಭಿಯಾನ ಶುರುಮಾಡಿದ್ದಾರೆ.