Home ನಮ್ಮ ಜಿಲ್ಲೆ ಮೀಸಲಾತಿ ವಿಚಾರವಾಗಿ ಶೀಘ್ರ ಸರ್ವಪಕ್ಷ ಸಭೆ: ಸಿಎಂ

ಮೀಸಲಾತಿ ವಿಚಾರವಾಗಿ ಶೀಘ್ರ ಸರ್ವಪಕ್ಷ ಸಭೆ: ಸಿಎಂ

0
ಮೀಸಲಾತಿ

ಪರಿಶಿಷ್ಟ ಪಂಗಡ ಮೀಸಲಾತಿ ಕುರಿತಂತೆ ಎಲ್ಲರ ಅಭಿಪ್ರಾಯ ಪಡೆಯಬೇಕಿದ್ದು, ವಾಲ್ಮೀಕಿ ಶ್ರೀಗಳು ತಮ್ಮ ಪ್ರತಿಭಟನೆಯನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ವಿಧಾನಸಭೆ ಕಲಾಪದಲ್ಲಿ ಎಸ್ಸಿ-ಎಸ್‌ಟಿ ಮತ್ತು ಓಬಿಸಿ ಮೀಸಲಾತಿ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಈ ಕುರಿತಂತೆ ಶೀಘ್ರದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದರು. ಇನ್ನು ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಕೊಡಿಸಲು ಸರ್ಕಾರ ಬದ್ಧವಾಗಿದೆ. ಮೀಸಲಾತಿ ಹೆಚ್ಚಳದ ಬಗ್ಗೆ ಚರ್ಚೆ ಮಾಡಿ ವೈಜ್ಞಾನಿಕವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ಶ್ರೀ ಉಪವಾಸ ಸತ್ಯಾಗ್ರಹ ಕೈ ಬಿಡಬೇಕು ಎಂದು ಮನವಿ ಮಾಡಿದರು.

Exit mobile version