Home Advertisement
Home ನಮ್ಮ ಜಿಲ್ಲೆ ವಿಚಾರಣೆ ಬಳಿಕ ಹಣದ ವಿಚಾರ ಸ್ಪಷ್ಟವಾಗಲಿದೆ

ವಿಚಾರಣೆ ಬಳಿಕ ಹಣದ ವಿಚಾರ ಸ್ಪಷ್ಟವಾಗಲಿದೆ

0
180

ಶಿವಮೊಗ್ಗ: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಹಣ ವಶಪಡಿಸಿಕೊಂಡ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದರೆ ಅವರ ಮನೆಯಲ್ಲಿ ಸಿಕ್ಕಿದ್ದು ಯಾವ ಹಣ ಎಂಬುದು ವಿಚಾರಣೆ ನಂತರ ಸತ್ಯ ಹೊರಬರಲಿದೆ. ಈಗಲೇ ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಜಿಲ್ಲೆಯ ಮತ್ತೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಾಯುಕ್ತ ದಾಳಿ ವಿಚಾರ ಈಗ ವಿಚಾರಣೆ ಹಂತದಲ್ಲಿದೆ. ಈಗಾಗಲೇ ನಾಲ್ಕೈದು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ಬಳಿಕ ಹಣದ ವಿಚಾರ ಸ್ಪಷ್ಟವಾಗಲಿದೆ ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 500 ರೂ. ಕೊಟ್ಟು ಕಾರ್ಯಕರ್ತರನ್ನು ಸಮಾವೇಶಕ್ಕೆ ಕರೆತರಬೇಕು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಕೆಲವೊಮ್ಮೆ ಸತ್ಯ ಹೇಳುತ್ತಾರೆ. ಕಾಂಗ್ರೆಸ್ ನ ಸಮಾವೇಶಕ್ಕೆ ಹಣ ನೀಡಿ ಜನರನ್ನು ಕರೆದುಕೊಂಡು ಬರುವುದು ದುರಂತ ಎಂದು ಕುಟುಕಿದ್ದಾರೆ.