Home ನಮ್ಮ ಜಿಲ್ಲೆ ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕ ಸಾವು

ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕ ಸಾವು

0

ಹಾವೇರಿ: ಇಲ್ಲಿ ನಡೆಯುತ್ತಿರುವ ೮೬ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯದಿಂದ ಆಗಮಿಸಿದ್ದ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಸಂಗನಗೌಡರ(೩೪) ಮೃತ ದುರ್ದೈವಿ. ಇವರು ಜನವರಿ ೫ರಂದು ಹಾವೇರಿಗೆ ಆಗಮಿಸಿದ್ದರು. ಶಿಕ್ಷಕ ಹಾವೇರಿಯ ಅಶ್ವಿನಿ ನಗರದ ಗೆಳಯರ ಬಳಗ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಹೃದಯಘಾತವಾದ ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಶಿಕ್ಷಕ ಸಾವನ್ನಪ್ಪಿದ್ದಾರೆ.

Exit mobile version