SK Home Ad
Home ನಮ್ಮ ಜಿಲ್ಲೆ `ಸಾರಥಿ ನಗರ ಮಸೀದಿಗೆ ಬೀಗ’

`ಸಾರಥಿ ನಗರ ಮಸೀದಿಗೆ ಬೀಗ’

0
146
ಮಸೀದಿ

ಬೆಳಗಾವಿ: ಹಿಂದೂ ಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಳಗಾವಿ ಸಾರಥಿ ನಗರದ ಮಸೀದಿ ವಿರುದ್ಧ ಮಹಾನಗರ ಪಾಲಿಕೆ ದಿಟ್ಟ ಕ್ರಮ ಕೈಗೊಂಡಿದೆ.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಮಸೀದಿಗೆ ಬೀಗ ಹಾಕುವಂತೆ ವಕ್ಫ್ ಬೋರ್ಡ್‌ಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಕ್ಫ್ ಕಮಿಟಿ ಸಾರಥಿ ನಗರ ಮಸೀದಿಗೆ ಬೀಗ ಜಡಿದಿದೆ.
ಅನುಮೋದಿತ ನಕ್ಷೆ ಉಲ್ಲಂಘಿಸಿ ಧಾರ್ಮಿಕ ಕಟ್ಟಡ ಕಟ್ಟುತ್ತಿರುವ ಆರೋಪ ಕೇಳಿ ಬಂದಿತ್ತು. ಕಟ್ಟಡ ಕಾಮಗಾರಿ ಹಾಗೂ ಧಾರ್ಮಿಕ ಚಟುವಟಿಕೆ ತಕ್ಷಣ ನಿಲ್ಲಿಸಲು ಬೆಳಗಾವಿ ಜಿಲ್ಲಾ ವಕ್ಫ್ ಕಾರ್ಯಾಲಯದ ಅಧಿಕಾರಿಗೆ ಮಹಾನಗರ ಪಾಲಿಕೆ ಆಯುಕ್ತರು ನೋಟಿಸ್ ನೀಡಿದ್ದರು.