ಆಪರೇಷನ್ ಸಿಂದೂರ: ಸ್ವಪಕ್ಷದ ಶಾಸಕನಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್

0
33

ದಾವಣಗೆರೆ: ಆಪರೇಷನ್ ಸಿಂದೂರದಂತಹ ವಿಚಾರದಲ್ಲಿ ಎಲ್ಲರೂ ದೇಶದ ಪರವಾಗಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಪಕ್ಷೀಯ ಕೋಲಾರ ಶಾಸಕ ಕೊತ್ತೂರು ಮಂಜುನಾಥಗೆ ಟಾಂಗ್ ನೀಡಿದ್ದಾರೆ.

ಹರಿಹರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರೂ ದೇಶದ ಪರವಾಗಿ ಮಾತನಾಡಬೇಕು. ಅದರಲ್ಲೂ ಆಪರೇಷನ್ ಸಿಂದೂರರಂತಹ ವಿಚಾರದಲ್ಲಿ ಎಲ್ಲರೂ ದೇಶದ ಪರ ಇರಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕೊತ್ತೂರು ಮಂಜುನಾಥಗೆ ಮಾತಿಗೆ ಪ್ರತಿಕ್ರಿಯಿಸಿದ್ದಾರೆ.

ಕಾಮಾಲೆ ಕಣ್ಣಿನವರಿಗೆ ಕಂಡಿದ್ದೆಲ್ಲಾ ಹಳದಿಯಂತೆ. ಹಾಗಿದೆ ವಿಪಕ್ಷ ನಾಯಕ ಆರ್. ಅಶೋಕ ಅಣ್ಣನವರ ಹೇಳಿಕೆ. ಅಶೋಕಣ್ಣನವರು ಬುದ್ಧಿವಂತ ಅಂತಾ ತಿಳಿದುಕೊಂಡಿದ್ದೆ. ಅಷ್ಟೇ ಹೇಳ್ತೀನಿ ಎಂದು ಗ್ರೇಟರ್ ಬೆಂಗಳೂರು ವಿಚಾರದ ಬಗ್ಗೆ ವಾಟರ್ ಬೆಂಗಳೂರು ಅಂತಾ ಟೀಕಿಸಿದ ಆರ್‌. ಅಶೋಕ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದರು.

ಜಗದೀಶ ಶೆಟ್ಟರ್ ಮಾಜಿ ಮುಖ್ಯಮಂತ್ರಿಗಳು, ಅನುಭವಿಗಳಿದ್ದಾರೆ. ಅಂತಹವರು ಮುಖ್ಯಮಂತ್ರಿಯಾಗಿ ಮತ್ತೆ ಮಂತ್ರಿ ಮಂಡಲಕ್ಕೆ ಬಂದವರು. ಅಂತಹವರ ಬಗ್ಗೆ ನಾವೇನು ಹೇಳಲಾಗುತ್ತದೆ ಎಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆಯೆಂಬ ಶೆಟ್ಟರ್ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಸೇನಾಧಿಕಾರಿ ಸೋಫಿಯಾ ಖುರೇಷಿ ಬಗ್ಗೆ ಬಿಜೆಪಿ ನಾಯಕ ಅವಹೇಳನ ಮಾಡಿದ್ದು ಖಂಡನೀಯ. ಮನುಸ್ಮೃತಿ ಇರುವಂತಹ ಗಂಡಸರಿಗೆ, ರಾಜಕಾರಣಿಗಳಿಗೆ ನನ್ನ ಧಿಕ್ಕಾರ ಹೇಳುತ್ತೇನೆ. ನಮ್ಮ ನಾಯಕರು ಹೇಳಿದಂತೆ ನಾವು ಇಂತಹ ವಿಚಾರದಲ್ಲಿ ಸರ್ಕಾರದ ಪರವಾಗಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

Previous articleದಕ್ಷಿಣ ಕನ್ನಡ: ಸದ್ಯದಲ್ಲೇ ಪೋಡಿಮುಕ್ತ ಸಿಎಂ ಘೋಷಣೆ
Next articleಬಿಜೆಪಿಯಲ್ಲಿ ಹೊಸ ಕೂಸು ಹುಟ್ಟಲಿದೆ: ಯತ್ನಾಳ್ ಭವಿಷ್ಯ