ಬಳ್ಳಾರಿ: ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ: 8 ಯುವಕರು ವಶಕ್ಕೆ, ರೀಲ್ಸ್ ಶಂಕೆ

0
6

ಬಳ್ಳಾರಿ: ನಗರದ ಕೌಲ್ ಬಜಾರ್ ಪ್ರದೇಶದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಜನಾರ್ದನ ರೆಡ್ಡಿ – ಶ್ರೀರಾಮುಲು ಒಡೆತನಕ್ಕೆ ಸೇರಿದ ಲೇಔಟ್‌ನಲ್ಲಿರುವ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿರುವ ಘಟನೆ ಬಳ್ಳಾರಿಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರಲ್ಲಿ 6 ಮಂದಿ ಅಪ್ರಾಪ್ತರು ಎಂಬುದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ:  ಬೆಲ್ ಬಾಟಮ್ ನಿರ್ಮಾಪಕರಿಂದ ‘ಹುಬ್ಬಳ್ಳಿ ಹಂಟರ್ಸ್’ ಘೋಷಣೆ

ರೀಲ್ಸ್ ಮಾಡಲು ಹೋಗಿ ಅವಘಡ?: ಪ್ರಾಥಮಿಕ ತನಿಖೆಯಲ್ಲಿ, ಸಾಮಾಜಿಕ ಜಾಲತಾಣಕ್ಕಾಗಿ (ರೀಲ್ಸ್/ವಿಡಿಯೋ) ಶೂಟ್ ಮಾಡುವ ಉದ್ದೇಶದಿಂದ ಬೆಂಕಿ ಹಚ್ಚಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಬೆಂಕಿಯ ಪ್ರಮಾಣ ಹೆಚ್ಚಾಗಿ ನಿಯಂತ್ರಣ ತಪ್ಪಿದ ಪರಿಣಾಮ ಮಾಡೆಲ್ ಹೌಸ್‌ಗೆ ಹಾನಿಯಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ರಿಯಲ್ ಎಸ್ಟೇಟ್ ಮಾಡೆಲ್ ಹೌಸ್: ಬೆಂಕಿಗೀಡಾದ ಮನೆ, ಶಾಸಕ ಜನಾರ್ದನ ರೆಡ್ಡಿ ಒಡೆತನದ ಲೇಔಟ್‌ನಲ್ಲಿರುವ ರಿಯಲ್ ಎಸ್ಟೇಟ್ ಮಾಡೆಲ್ ಹೌಸ್ ಆಗಿದ್ದು, ಯಾವುದೇ ಮಾನವ ಹಾನಿ ಸಂಭವಿಸಿಲ್ಲ. ಆದರೆ ಕಟ್ಟಡಕ್ಕೆ ಗಣನೀಯ ಹಾನಿಯಾಗಿದೆ.

ಇದನ್ನೂ ಓದಿ:  RCB ಕುಟುಂಬದ ನಂಟು: ಶ್ರೇಯಾಂಕ ಆಟಕ್ಕೆ ಎಬಿ ಡಿ ಮೆಚ್ಚುಗೆ

ರಾಜಕೀಯ ಆರೋಪ–ಪ್ರತ್ಯಾರೋಪ: ಘಟನೆ ಬೆನ್ನಲ್ಲೇ ರಾಜಕೀಯ ತಿರುವು ಪಡೆದುಕೊಂಡಿದೆ. ರೆಡ್ಡಿ ಸಹೋದರರು, “ಈ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ” ಎಂದು ಆರೋಪಿಸಿದ್ದಾರೆ. ವಿಶೇಷವಾಗಿ, ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಕೈವಾಡವಿದೆ ಎಂದು ಗಂಭೀರ ಆರೋಪ ಹೊರಿಸಿದ್ದಾರೆ. ಇತ್ತ, ಕಾಂಗ್ರೆಸ್ ವಲಯದಿಂದ ಈ ಆರೋಪಗಳನ್ನು ತಳ್ಳಿಹಾಕಲಾಗಿದ್ದು, ತನಿಖೆ ಪೂರ್ಣಗೊಳ್ಳುವ ಮುನ್ನ ಆರೋಪ ಸರಿಯಲ್ಲ ಎಂದು ಪ್ರತಿಕ್ರಿಯಿಸಲಾಗಿದೆ.

ಬ್ಯಾನರ್ ಘರ್ಷಣೆ ಬೆನ್ನಲ್ಲೇ ಮತ್ತೊಂದು ಅವಘಡ: ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ರಾಜಕೀಯ ಬ್ಯಾನರ್ ಘರ್ಷಣೆ ವಿವಾದ ಇನ್ನೂ ಶಮನವಾಗದ ಸ್ಥಿತಿಯಲ್ಲೇ ಈ ಬೆಂಕಿ ಅವಘಡ ಸಂಭವಿಸಿರುವುದು, ನಗರದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ.

ಇದನ್ನೂ ಓದಿ:  24ರಂದು ಅಥಣಿಗೆ ಕ್ರೇಜಿಸ್ಟಾರ್ ರವಿಚಂದ್ರನ್

ತನಿಖೆ ಮುಂದುವರಿದಿದೆ: ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಇದು ಅಪಘಾತವೇ? ಉದ್ದೇಶಪೂರ್ವಕ ಕೃತ್ಯವೇ? ಅಥವಾ ರಾಜಕೀಯ ಪ್ರೇರಿತ ಘಟನೆವೇ? ಎಂಬ ಎಲ್ಲ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಯ ನಿಜಸ್ವರೂಪ ಬಹಿರಂಗವಾಗಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Previous articleಕಿಶನ್, ಸೂರ್ಯ ಸ್ಫೋಟಕ ಬ್ಯಾಟಿಂಗ್:‌ ಭಾರತಕ್ಕೆ ಭರ್ಜರಿ ಜಯ