DK Shivakumar: ರಾಹುಲ್ ಮತ ಅಧಿಕಾರ ಯಾತ್ರೆ ಗೇಮ್ ಚೇಂಜರ್

0
67

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ವೋಟ್ ಅಧಿಕಾರ ಯಾತ್ರೆ ದೇಶದ ಪಾಲಿನ ಗೇಮ್ ಚೇಂಜರ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದ್ದಾರೆ.

ಬಿಹಾರದ ಅರಾರಿಯಾದಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಬಿಹಾರದವರೆಗೆ ಧ್ವನಿ ಎತ್ತಿರುವ ವಿಚಾರದ ಬಗ್ಗೆ ಇಡೀ ದೇಶವೇ ಚರ್ಚಿಸುತ್ತಿದೆ. ರಾಹುಲ್ ಗಾಂಧಿ ಅವರು ತಮಗಾಗಿ ಈ ಹೋರಾಟ ಮಾಡುತ್ತಿಲ್ಲ. ಸಂವಿಧಾನದತ್ತವಾಗಿ ದೇಶದ ಜನಸಾಮಾನ್ಯರಿಗೆ ಸಿಕ್ಕಿರುವ ಹಕ್ಕಿನ ರಕ್ಷಣೆಗೆ ಹೋರಾಡುತ್ತಿದ್ದಾರೆ ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಏನಾಗಿದೆ ಎಂದು ನನಗೆ ಗೊತ್ತಿದೆ. ಮತದಾರರು ತಮ್ಮ ಹಕ್ಕನ್ನು ಪಡೆಯಲು ಅವಕಾಶ ಮಾಡಿಕೊಟ್ಟಿರುವ ಸುಪ್ರೀಂ ಕೋರ್ಟ್ ಬಗ್ಗೆ ನನಗೆ ಹೆಮ್ಮೆ ಇದೆ. ಬಿಹಾರದ ಜನ ಬದಲಾವಣೆ ಬಯಸಿದ್ದಾರೆ. ಮಹಾಘಟಬಂಧನ ಬಯಸಿದ್ದಾರೆ. ಇಲ್ಲಿನ ಯುವಕರು ಕೂಡ ಬೀದಿಗಿಳಿದು ಬೆಂಬಲ ನೀಡುತ್ತಿದ್ದಾರೆ. ಯುವಕರು ಬಹು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡುತ್ತಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ನಮ್ಮ ಮಹಾಘಟಬಂಧನ ನೀಡಿರುವ ಗ್ಯಾರಂಟಿಗಳು ಜನರಿಗೆ ನೆರವಾಗಲಿದ್ದು, ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ನಾವು ಅಧಿಕಾರಕ್ಕೆ ಬಂದ ಎಲ್ಲಾ ರಾಜ್ಯಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ. ಕಳೆದ ಬಾರಿ ಮಹಾಘಟಬಂಧನ ಅಲ್ಪ ಅಂತರದಲ್ಲಿ ಸೋತಿತ್ತು. ಈ ಬಾರಿ ಗೆದ್ದೇ ಗೆಲ್ಲುವ ವಿಶ್ವಾಸ ನನಗಿದೆ. ಈ ಬಾರಿ ಬಿಹಾರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ರಾಜಕೀಯ: ಧರ್ಮಸ್ಥಳದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ನಾನು ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ. ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಅವರು ಬಾಯಿ ಮುಚ್ಚಿಕೊಳ್ಳಬೇಕು. ಬಿಜೆಪಿಯಲ್ಲಿ ಎರಡು ಬಣಗಳಿವೆ. ಹೀಗಾಗಿ ಈ ರೀತಿ ಮಾಡುತ್ತಿದ್ದಾರೆ. ಅವರು ತಮ್ಮ ವೈಫಲ್ಯಗಳನ್ನು ನಮ್ಮ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಸತ್ಯಾಂಶವನ್ನು ಜನರ ಮುಂದಿಡುತ್ತಿದ್ದೇವೆ” ಎಂದು ಹೇಳಿದರು.

Previous articleಮುಧೋಳ್‌ಗೆ ಮತ್ತಷ್ಟು ಬಲ: ವಿಕ್ರಮ್ ಜೊತೆ ಕೈ ಜೋಡಿಸಿದ ವಿಜಯ್
Next articleಕಿಚ್ಚ ಸುದೀಪ ಹುಟ್ಟುಹಬ್ಬ: ಅಭಿಮಾನಿಗಳಿಗೆ ಸ್ಟಾರ್ ನಟನ ಸಂದೇಶ

LEAVE A REPLY

Please enter your comment!
Please enter your name here