ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ

ಬೆಂಗಳೂರು: ಇತ್ತೀಚೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಪ್ರಸಿದ್ಧ ವೀಣೆ ತಯಾರಕ, ಶತಾಯುಷಿ ಪೆನ್ನ ಓಬಳಯ್ಯ (103) ರವರು ರವಿವಾರ ತಡರಾತ್ರಿ ನಿಧನರಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶದ ವಾದ್ಯಪ್ರೇಮಿಗಳ ಹೃದಯ ಗೆದ್ದ “ವೀಣೆ ಬ್ರಹ್ಮ” ಎಂದು ಗುರುತಿಸಿಕೊಂಡಿದ್ದರು. ಓಬಳಯ್ಯ ಅವರು ಹಲವು ದಶಕಗಳಿಂದ ಸಾಂಪ್ರದಾಯಿಕ ವೀಣೆ ತಯಾರಿಕೆ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ನೂರಾರು ಶಿಷ್ಯರಿಗೆ ತಯಾರಿಕೆ ಕೌಶಲ್ಯ ಬೋಧನೆ ಮಾಡಿದ್ದರು. ಭಾರತದ ಅನೇಕ ರಾಜ್ಯಗಳಲ್ಲಿ ಅವರ ವೀಣೆಗಳು ಪ್ರಸಿದ್ಧವಾಗಿದ್ದವು. ದೇಶಕ್ಕೆ ಸಾಂಪ್ರದಾಯಿಕ ವೀಣೆ … Continue reading ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ