ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡಲ್ಲ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ಮೇಲೆ ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದು, ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಅವರು ದೆಹಲಿಗೂ ಹೋಗುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇಂಥ ಕಳಂಕಿತರು ಮಂತ್ರಿಮಂಡಲದಲ್ಲಿ ಇರಲು ಸಾಧ್ಯವಿಲ್ಲ. ಅವರು ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಸರಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು, ಮುಖಂಡರು ರಾಜ್ಯಾದ್ಯಂತ … Continue reading ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡಲ್ಲ