Home Advertisement
Home ನಮ್ಮ ಜಿಲ್ಲೆ ಚಾಮರಾಜನಗರ ಚಾಮರಾಜನಗರ: ಮಕ್ಕಳೊಂದಿಗೆ ಗದ್ದೆಗೆ ಇಳಿದು ಭತ್ತ ನಾಟಿ ಮಾಡಿದ ಎಸ್‍ಪಿ

ಚಾಮರಾಜನಗರ: ಮಕ್ಕಳೊಂದಿಗೆ ಗದ್ದೆಗೆ ಇಳಿದು ಭತ್ತ ನಾಟಿ ಮಾಡಿದ ಎಸ್‍ಪಿ

0
264

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮದ ಜಮೀನೊಂದರಲ್ಲಿ ಗದ್ದೆಗೆ ಇಳಿದು ತಮ್ಮ ಇಬ್ಬರು ಮಕ್ಕಳ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ ಭತ್ತದ ಸಸಿ ನಾಟಿ ಮಾಡಿದರು.

ಇಬ್ಬರು ಮಕ್ಕಳ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಸಂದರ್ಭದಲ್ಲಿ ಭತ್ತ ನಾಟಿ ಮಾಡುವ ಮೂಲಕ ರೈತರ ಮನ ಗೆದ್ದರು. ಯುವಕರು ಕೃಷಿಯತ್ತ ವಿಮುಖರಾಗುತ್ತಿರುವ ಹೊತ್ತಲ್ಲಿ ಕವಿತಾ ಅವರು ಕೃಷಿ ಪ್ರೇಮ ತೋರಿದ್ದು ತಮ್ಮ ಮಕ್ಕಳಿಗೂ ಭತ್ತದ ನಾಟಿ ಮಾಡುವುದನ್ನು ಹೇಳಿಕೊಟ್ಟು ಗಮನ ಸೆಳೆದರು.

“ನಾವು ರೈತರ ಮಕ್ಕಳು. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದೆವು. ಬಾಲ್ಯ ಜೀವನದಲ್ಲಿ ವ್ಯವಸಾಯವನ್ನೇ ಮಾಡುತ್ತಿದ್ದೆವು. ನಮ್ಮ ಭಾಗದಲ್ಲಿ ಹೆಚ್ಚಾಗಿ ಅಡಿಕೆ ಹಾಗೂ ತೆಂಗನ್ನು ಬೆಳೆಯುತ್ತೇವೆ. ಆದರೆ, ಭತ್ತದ ನಾಟಿ ಮಾಡಿದ್ದ ಅನುಭವವಿಲ್ಲ. ಮಕ್ಕಳ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಕೃಷಿ ಚಟುವಟಿಕೆಯಲ್ಲಿ ತೊಡಗಿದೆ” ಎಂದು ಕವಿತಾ ತಮ್ಮ ಅನಿಸಿಕೆ ಹಂಚಿಕೊಂಡರು.

ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರೂ ಕವಿತಾ ಅವರು ಚುರುಕಿನಿಂದ ಭತ್ತದ ನಾಟಿ ಮಾಡಿದ ಬಗೆಯನ್ನು ಕಂಡು ಮಹಿಳಾ ಕಾರ್ಮಿಕರು ಅಚ್ಚರಿಪಟ್ಟರು. ಖಾಕಿ ಧರಿಸುವ ಅಧಿಕಾರಿ, ಗದ್ದೆಯಲ್ಲಿ ಸಾಮಾನ್ಯ ರೈತ ಮಹಿಳೆಯಂತೆ ಕಾಣಿಸಿಕೊಂಡಿದ್ದನ್ನು ನೋಡಿ ಗ್ರಾಮಸ್ಥರು ಸಂತಸಪಟ್ಟರು.

LEAVE A REPLY

Please enter your comment!
Please enter your name here