ದ್ವೇಷ ಭಾಷಣ ವಿರೋಧಿ ಮಸೂದೆ ಅಭಿವ್ಯಕ್ತಿ ಸ್ವಾತಂತ್ರ ಹತ್ತಿಕ್ಕುತ್ತದೆ

0
1

ಸುರತ್ಕಲ್: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳ ಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಅನುಮೋದನೆ ನೀಡಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ಹೊರಹಾಕಿದ್ದಾರೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದ್ವೇಷ ಭಾಷಣ ಮಸೂದೆ ಕರಾಳ ಮುಖವನ್ನು ಹೊಂದಿದ್ದು ಸಾಮಾಜಿಕ ಜಾಲತಾಣ ಸೇರಿದಂತೆ ಪತ್ರಕರ್ತರು, ದೇಶಭಕ್ತಿಯ ಘೋಷಣೆ ಮೊಳಗಿಸುವವರನ್ನು, ಹಿಂದೂ ಧರ್ಮದ ದೇವರ ಹೆಸರನ್ನು ಘೋಷಣೆ ಮಾಡುವವರನ್ನು ಕೂಡ ಬಿಡದೆ ಕೇಸು ದಾಖಲಿಸಿ ನೇರವಾಗಿ ಜೈಲಿಗೆ ಅಟ್ಟುವ ಅಧಿಕಾರವನ್ನು ಪೊಲೀಸರಿಗೆ ಕೊಡಲಾಗಿದೆ ಎಂದರು.

ಯಾವುದೇ ಪ್ರತಿಭಟನೆಗೆ ಇಂದು ಧಾರ್ಮಿಕ ಕಾರ್ಯಕ್ರಮಗಳಿಗೆ ಬರುವ ಪ್ರಮುಖ ದಿಕ್ಸೂಚಿ ಭಾಷಣಕಾರರನ್ನು ಕಾರ್ಯಕ್ರಮ ನಡೆಯುವ ಮುನ್ನವೇ ಪೊಲೀಸರು ಕೇಸು ದಾಖಲಿಸಿ ಬಾರದಂತೆ ತಡೆಯಲು ಸ್ವಾತಂತ್ರ್ಯ ನೀಡಲಾಗಿದೆ. ಇದೆಲ್ಲಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ, ಒಂದು ವರ್ಗವನ್ನು ಸಂತುಷ್ಟಗೊಳಿಸುವ ಕಾಯಿದೆಯಾಗಿದ್ದು ಇದನ್ನು ಬಿಜೆಪಿ ಪಕ್ಷ ವಿರೋಧಿಸುತ್ತಲೇ ಬರುತ್ತದೆ ಎಂದು ಘೋಷಿಸಿದರಲ್ಲದೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಈ ಕಾಯ್ದೆ ಬಳಕೆಯಾದರೆ ಅವರ ಜೊತೆಯಾಗಿ ನಿಲ್ಲುತ್ತೇವೆ ಎಂದು ಘೋಷಿಸಿದರು.

Previous articleಮುಖ್ಯಮಂತ್ರಿ ಬದಲಾಯಿಸಿದರೆ ಕಾಂಗ್ರೆಸ್‌ಗೆ ತಕ್ಕಪಾಠ