ಧರ್ಮಸ್ಥಳ ಪ್ರಕರಣ:‌ ಬೆಳ್ತಂಗಡಿ ಕೋರ್ಟ್‌ಗೆ 3,923 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

0
51

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿರುವ ಎಸ್‌ಐಟಿ ತಂಡ ಬೆಳ್ತಂಗಡಿ ಕೋರ್ಟ್‌ಗೆ ಗುರುವಾರ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

ಎಸ್‌ಐಟಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರ ನೇತೃತ್ವದಲ್ಲಿ ಒಟ್ಟು 3,923 ಪುಟಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ಆರು ಮಂದಿ ಆರೋಪಿಗಳ ವಿರುದ್ಧ ವರದಿ: ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ. 20ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಗಳ ಬಗ್ಗೆ ವರದಿಯನ್ನು ಸಲ್ಲಿಸಿದ್ದಾರೆ.

ಬೆಳ್ತಂಗಡಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತಾ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು 215 ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಹೆಚ್.ಟಿ ಮುಂದೆ ನ. 20 ರಂದು ಮಧ್ಯಾಹ್ನ 3:15 ಕ್ಕೆ ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಸಲ್ಲಿಕೆ ಮಾಡಿದ್ದಾರೆ.

ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆಐದು ಮಂದಿ ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬುವುದಾಗಿಯೂ ವರದಿಯಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ವರದಿಯ ಬಗ್ಗೆ ನ್ಯಾಯಾಲಯ ಪರಿಶೀಲಿಸಿ ಇದರ ಆಧಾರದಲ್ಲಿ ಮುಂದಿನ ತನಿಖೆ ಬಗ್ಗೆ ನ್ಯಾಯಾಲಯ ಸೂಚನೆ ನೀಡುವಂತೆ ವರದಿಯಲ್ಲಿ ಕೇಳಿಕೊಳ್ಳಲಾಗಿರುವುದಾಗಿ ತಿಳಿದು ಬಂದಿದೆ.

Previous articleಪಿಎಸ್ಐ ಹಗರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲಗೆ ಮಧ್ಯಂತರ ಜಾಮೀನು
Next articleKGF ಆಯ್ತು, ಈಗ ಈ 5 ಜಿಲ್ಲೆಗಳ ಸರದಿ: ಕರ್ನಾಟಕದ ಮಣ್ಣಲ್ಲಿ ಮತ್ತೆ ಸಿಕ್ತು ಚಿನ್ನದ ನಿಕ್ಷೇಪ!

LEAVE A REPLY

Please enter your comment!
Please enter your name here