ಹೈಕಮಾಂಡ್ ಡಿಕೆಶಿ ಕಡೆಗೆ ಪಥ ಬದಲಿಸಿದೆ

0
2

ದಾವಣಗೆರೆ: ಸಂಕ್ರಾಂತಿಗೆ ಸೂರ್ಯಪಥ ಬದಲಾವಣೆ ಜೊತೆಗೆ ನಮ್ಮ ಡಿಸಿಎಂ ಪಥವೂ ದೆಹಲಿ ಕಡೆ ಬದಲಾಗಿದೆ. ಶೀಘ್ರದಲ್ಲಿ ಡಿ.ಕೆ. ಶಿವಕುಮಾರ್ ಅವರಿಂದ ಶುಭಸುದ್ದಿ ಬರಲಿದೆ ಎಂದು ಡಿಕೆಶಿ ಆಪ್ತ ವಲಯದ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಕೂಡ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಡೆ ಪಥ ಬದಲಾವಣೆ ಆಗಿದ್ದು, ಮುಖ್ಯಮಂತ್ರಿ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಇದನ್ನೂ ಓದಿ: ‘ಮಹಾದಾನಿ’ ಅಜ್ಜಿ ಕೊಲೆ ರಹಸ್ಯ ಬಯಲು ಮಾಡಿದ ಅನಾಮಧೇಯ ಕರೆ

ಈಗಾಗಲೇ ಸಿಎಂ ಸಿದ್ದರಾಮಯ್ಯ ಏಳೂವರೆ ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದಾರೆ. ಹೊಸಬರು ಶಾಸಕರಾಗಲು ಕಾರಣರಾಗಿರುವ ಡಿ.ಕೆ. ಶಿವಕುಮಾರ್ ಕೂಡ ಎರಡು ವರ್ಷ ಸಿಎಂ ಆಗಲಿ ಎಂಬುದು ನಮ್ಮ ಆಶಯ. ಎಲ್ಲರ ಅಭಿಪ್ರಾಯದಂತೆ ನಡೆಯುತ್ತಿದೆ. ಇದು ಉತ್ತಮ ಬೆಳವಣಿಗೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಶ್ರಮ ಹೆಚ್ಚಿದೆ. ಪಕ್ಷಕ್ಕೆ ಸಾಕಷ್ಟು ದುಡಿದಿರುವ ಡಿ.ಕೆ. ಶಿವಕುಮಾರಗ್‌ ಅವರಿಗೆ ಹೈಕಮಾಂಡ್ ಸಿಹಿ ಸುದ್ದಿ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ್ ಸಿಎಂ ಆದರೆ ಸಚಿವ ಸಂಪುಟ ಬದಲಾವಣೆ ಆಗುತ್ತದೆ. ಹೊಸಬರಿಗೆ ಅವಕಾಶ ಸಿಕ್ಕರೆ ಒಳ್ಳೆಯದು. ಇದರಿಂದ ಆಡಳಿತದಲ್ಲಿ ಬದಲಾವಣೆ ಆಗುತ್ತದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗೆಂದು ನಾವೇನು ಸನ್ಯಾಸಿಯೂ ಅಲ್ಲ. ಚನ್ನಗಿರಿ ಕ್ಷೇತ್ರಕ್ಕೆ ಇದುವರೆಗೂ ಸಚಿವ ಸ್ಥಾನ ದೊರೆತಿಲ್ಲ, ನನಗೆ ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಅವರು ತಿಳಿಸಿದರು.

Previous article‘ಮಹಾದಾನಿ’ ಅಜ್ಜಿ ಕೊಲೆ ರಹಸ್ಯ ಬಯಲು ಮಾಡಿದ ಅನಾಮಧೇಯ ಕರೆ