ನೇಪಾಳದಲ್ಲಿ ಸಂಕಷ್ಟ: ಧಾರವಾಡ ಜಿಲ್ಲಾಡಳಿತದಿಂದ ಸಹಾಯವಾಣಿ

ಧಾರವಾಡ: ನೇಪಾಳದಲ್ಲಿ ಆ. 26ರಂದು ಸಂಭವಿಸಿದ ಪ್ರಕೃತಿ ವಿಕೋಪ ದಿಢೀರ್ ಪ್ರವಾಹ ದುರಂತದಲ್ಲಿ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಕ್ರಮಕೈಗೊಳ್ಳಲಾಗುತ್ತಿದೆ. ಅದರಂತೆ, ಧಾರವಾಡ ಜಿಲ್ಲೆಯ ಮೂಲದ ನಾಗರಿಕರು ಅಥವಾ ಪ್ರವಾಸಿಗರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ತಕ್ಷಣವೇ ಅವರ ವಿವರಗಳನ್ನು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಒದಗಿಸುವಂತೆ ಜಿಲ್ಲಾಡಳಿತವು ತಿಳಿಸಿದೆ. ಸಹಾಯವಾಣಿ ವಿವರ: ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಸಹಾಯವಾಣಿ … Continue reading ನೇಪಾಳದಲ್ಲಿ ಸಂಕಷ್ಟ: ಧಾರವಾಡ ಜಿಲ್ಲಾಡಳಿತದಿಂದ ಸಹಾಯವಾಣಿ