ಹುಬ್ಬಳ್ಳಿ: ಇಲ್ಲಿನ ರಾಣಿ ಚನ್ನಮ್ಮ ಮೈದಾನದಲ್ಲಿ (ಈದ್ಗಾ) ೮೦ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಶನಿವಾರ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಬ್ರಿಟಿಷ್ ಮುಕ್ತ ಭಾರತ ಮಾಡಲು ಸಾಕಷ್ಟು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣ ತೆತ್ತಿದ್ದಾರೆ. ಅವರ ಹೋರಾಟ ಹಾಗೂ ತ್ಯಾಗವನ್ನು ನಾವು ಸ್ಮರಿಸಬೇಕು ಎಂದರು. ಹುಬ್ಬಳ್ಳಿಯ ನಾರಾಯಣ ಮಹದೇವ ಡೋಣಿ ಹದಿಮೂರು ವರ್ಷದ ಬಾಲಕನ ಬಲಿದಾನದ ದಿನವೇ ಐದು ವರ್ಷದ ಬಳಿಕ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಭಾರತ ವಿಶ್ವದ ಎಲ್ಲ ದೇಶಗಳಿಗಿಂತ ಭಿನ್ನವಾಗಿದೆ ಎಂದು ಹೇಳಿದರು.
ಜನರ ಕಲ್ಯಾಣಕ್ಕಾಗಿ ಮಹಾನಗರ ಪಾಲಿಕೆ ಪ್ರಯತ್ನಿಸುತ್ತಿದೆ. ಮಹಾನಗರ ಜನತೆಗೆ ಶುದ್ಧ ಕುಡಿಯುವ ನೀರು ಯೋಜನೆ ನೀಡುವಲ್ಲಿ ಯಶಸ್ವಿಯಾಗಿದೆ. ಪಾಲಿಕೆ ಸದಸ್ಯರಿಗೆ ವಾರ್ಡ್ ವಿಕಾಸ ಯೋಜನೆಯಡಿ ಅಭಿವೃದ್ಧಿಗೆ ನಾಂದಿ ಹಾಡಿದ್ದೇವೆ. ೧೩೦ ಕೋಟಿ ತೆರಿಗೆ ಸಂಗ್ರಹಿಸಿ ೮೦ ಕೋಟಿ ಹಣವನ್ನು ಗುತ್ತಿಗೆದಾರರಿಗೆ ಹಣ ನೀಡಲಾಗಿದೆ ಎಂದರು.
ಶಾಸಕ ಮಹೇಶ ಟೆಂಗಿನಕಾಯಿ, ರಾಜ್ಯಸಭಾ ಸದಸ್ಯ ಮಾ. ನಾಗರಾಜ, ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
- ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿಗಳ ಮನೆಯನ್ನೂ ಜಾಲಾಡಿದ ಇ.ಡಿ.
- ಪಿಬಿಜಿ ಅಲಾಸ್ಕನ್ ನೈಟ್ಸ್ ವಿರುದ್ಧವೂ ಸೋತ ಚೆಕ್ ಮುಂಬಾ ಮಾಸ್ಟರ್ಸ್
- 9 ದಿನ, 180 ಕಿ.ಮೀ. ನಡಿಗೆ: ಬಳ್ಳಾರಿಗೆ ಭರ್ಜರಿ ಎಂಟ್ರಿ ಕೊಟ್ಟ ‘ಬಳ್ಳಾರಿ ಚಲೋ’
- ಕರ್ನಾಟಕ ಸೇರಿ 4 ರಾಜ್ಯಗಳಿಗೆ ರೈಲ್ವೆ ಬಿಗ್ ಗಿಫ್ಟ್: ₹10,021 ಕೋಟಿ ವೆಚ್ಚದ 5 ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರ ಅಸ್ತು
- ರೈಲು ಕಾರ್ಯಾಚರಣೆ, ಸುರಕ್ಷತೆ ಪರಿಶೀಲಿಸಿದ ಸಚಿವ ಸೋಮಣ್ಣ: ಸಿಬ್ಬಂದಿಯ ಶಿಸ್ತಿಗೆ ಶ್ಲಾಘನೆ




















