SK Home Ad
Home ನಮ್ಮ ಜಿಲ್ಲೆ ಧಾರವಾಡ ಕವಿವಿ‌ ಘಟಿಕೋತ್ಸವ: ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್

ಕವಿವಿ‌ ಘಟಿಕೋತ್ಸವ: ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್

0
264

ಧಾರವಾಡ: ಶಿಕ್ಷಣ, ಆಡಳಿತ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರು ಸಾಧಕರಿಗೆ ಕರ್ನಾಟಕ ವಿಶ್ವವಿದ್ಯಾಲಯ ಏ. 23ರಂದು ಗಾಂಧಿ ಭವನದಲ್ಲಿ ನಡೆಯಲಿರುವ ತನ್ನ 75ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡುತ್ತಿದೆ.

ಶಿಕ್ಷಣ ಕ್ಷೇತ್ರದಲ್ಲಿ ಡಾ. ಅಚ್ಯುತ ಸಾಮಂತ, ಆಡಳಿತ ಕ್ಷೇತ್ರದಲ್ಲಿ ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಹುಬ್ಬಳ್ಳಿಯ ಮಜೇಥಿಯಾ ಫೌಂಡೇಶನ್ ಸಂಸ್ಥಾಪಕ ಜಿತೇಂದ್ರ ಮಜೇಥಿಯಾ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.