SK Home Ad
Home ನಮ್ಮ ಜಿಲ್ಲೆ ಗದಗ ಗದುಗಿನಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಲಾಲ್‌ಬಹದ್ದೂರ್ ಶಾಸ್ತ್ರಿ ಪುತ್ರ

ಗದುಗಿನಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಲಾಲ್‌ಬಹದ್ದೂರ್ ಶಾಸ್ತ್ರಿ ಪುತ್ರ

0
53

ಹುಬ್ಬಳ್ಳಿ: ಮಾಜಿ ಕೇಂದ್ರ ಸಚಿವ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಹಿಂದಿ ವಿಭಾಗದ ಅಧ್ಯಕ್ಷ ಅನಿಲ್ ಶಾಸ್ತ್ರಿ ಅವರು ಆ. 15 ಮತ್ತು 16 ರಂದು ಧಾರವಾಡ ಮತ್ತು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳುವರು.

ಆ. 15 ರಂದು ಬೆಳಿಗ್ಗೆ 7.45ಕ್ಕೆ ಗದಗಿನ ಗದಗ ಕೋ ಆಪರೇಟಿವ್ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಧ್ವಜಾರೋಹಣ ಮಾಡುವರು. ಬೆಳಿಗ್ಗೆ 9.15 ಕ್ಕೆ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ವಿಶ್ವವಿದ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಗದಗ ಕೋ ಆಪರೇಟಿವ್ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸುವರು. ಸಂಜೆ 4.30 ಕ್ಕೆ ಗದಗ ಕೋ ಆಪರೇಟಿವ್ ಕಾಟನ್ ಸೇಲ್ಸ್ ಸೊಸೈಟಿ ಸಭಾಂಗಣದಲ್ಲಿ ಎಚ್.ಕೆ. ಪಾಟೀಲ ಸೇವಾ ತಂಡದಿಂದ 11 ಸಾವಿರ ಕುಟುಂಬಗಳ ದತ್ತು ಸ್ವೀಕಾರ ಸಮಾರಂಭ ಹಾಗೂ ಅಂಗಾಗ ದಾನಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಆಗಸ್ಟ 16 ರಂದು ಬೆಳಿಗ್ಗೆ 10 ಗಂಟೆಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಹುಬ್ಬಳ್ಳಿಯಿಂದ ದೆಹಲಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.