Home ನಮ್ಮ ಜಿಲ್ಲೆ ಗದಗ ಅನುದಾನ ನೀಡಲು ಸಚಿವ ಜಾರಕಿಹೊಳಿಗೆ ಬೊಮ್ಮಾಯಿ ಪತ್ರ

ಅನುದಾನ ನೀಡಲು ಸಚಿವ ಜಾರಕಿಹೊಳಿಗೆ ಬೊಮ್ಮಾಯಿ ಪತ್ರ

0
12

ಗದಗ: ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯ ಲಕ್ಷ್ಮೇಶ್ವರ ಗದಗ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯ ಅಭಿವೃದ್ಧಿಗೆ 9.50 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಪತ್ರ ಬರೆದಿದ್ದಾರೆ.

ಗದಗ ಜಿಲ್ಲೆಯ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ ಲೋಕೋಪಯೋಗಿ ಇಲಾಖೆಯ ಮುಖ್ಯ ರಸ್ತೆಯಾಗಿದ್ದು, ಈ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅತ್ಯಂತ ತೊಂದರೆಯಾಗಿದೆ. ಈ ರಸ್ತೆ ಸುಧಾರಣೆಗೆ 9.80 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಪತ್ರದ ಮೂಲಕ ಕೋರಿದ್ದಾರೆ.