ಸಂ.ಕ. ಸಮಾಚಾರ ಕಲಬುರಗಿ: ಕಾಂಗ್ರೆಸ್ನಲ್ಲಿ ಹೈ ಇದೆ, ಆದರೆ ಕಮಾಂಡ್ ಇಲ್ಲವೇ ಇಲ್ಲ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ನಲ್ಲಿ ಎರಡು ಭಾಗವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಮಂಗಳವಾರ ಇಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನಲ್ಲಿ ಗೊಂದಲ ಇರುವುದು ಸತ್ಯ ಇದರಲ್ಲಿ ಎರಡು ಮಾತಿಲ್ಲ, ರಾಜ್ಯದಲ್ಲಿ ಉಂಟಾಗಿರುವ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಾತ್ರ ಬಹಳ ದೊಡ್ಡದು ಎಂದರು.
ಕರ್ನಾಟಕ ಕಾಂಗ್ರೆಸ್ ನಾಯಕರು ಪರಿಣಿತರಿದ್ದು, ಆದರೆ ಎಲ್ಲವೂ ಇಲ್ಲಿಂದಲೇ ಹೋಗುವಾಗ ಹೈಕಮಾಂಡ್ ಮಾತು ಯಾಕೆ ಇವರು ಕೇಳುತ್ತಾರೆ ಎಂದು ಪ್ರಶ್ನಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರ ಧ್ವೇಷ ಭಾಷಣ ಕಾಯ್ದೆ ಜಾರಿಗೆ ತರಲು ಹೊರಟಿರುವುದು ಇದೊಂದು ದಮನಕಾರಿ ಕಾನೂನು ಆಗಿದೆ. ದ್ವೇಷ ಭಾಷಣ ಬಗ್ಗೆ ದೊಡ್ಡ ಪ್ರಮಾಣದಲ್ಲಿ ವ್ಯಾಖ್ಯಾನಿಸಿದ್ದಾರೆ. ಯಾರನ್ನು ಯಾವ ಸಂದರ್ಭದಲ್ಲೂ ಜೈಲಿಗೆ ಕಳುಹಿಸುವ ಹುನ್ನಾರ ಇದರಲ್ಲಿದೆ.
ಇದನ್ನೂ ಓದಿ: ಸಿಎಂ,ಡಿಸಿಎಂ ಕುರ್ಚಿ ಕಚ್ಚಾಟದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತ : ಶೋಭಾ ಕರಂದಾಜ್ಲೆ
ರಾಜ್ಯ ಸರಕಾರ ಎಲ್ಲಾ ರಂಗದಲ್ಲಿ ವಿಫಲವಾಗಿ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡು ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಕುಟುಕಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರಾಕರದ ಕೈ ಕೆಳಗೆ ವ್ಯಾಪಕವಾಗ ಎಲ್ಲಾ ಕಡೆ ಭ್ರಷ್ಟಾಚಾರ ನಡೆಯುತ್ತಿದೆ, ಯಾರೂ ಇದನ್ನು ಪ್ರಶ್ನೆ ಮಾಡಬಾರದು ಎಂದು ಈ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದ ಅವರು, ಪ್ರಚೋದನಕಾರಿಯಾಗಿ ಮಾತನಾಡಿದರೆ ಕ್ರಮಕ್ಕೆ ಈಗಾಗಲೇ ಬಿಎನ್ಎಸ್ ಕಾಯಿದೆಯಲ್ಲಿ ಅವಕಾಶ ಇದೆ ಮತ್ತೆ ವಿಶೇಷ ಕಾನೂನು ತರುವ ಅಗತ್ಯ ಏನಿದೆ? ಎಂದು ಪ್ರಶ್ನಿಸಿದರು.
ವಿರೋಧ ಪಕ್ಷಗಳು ಸಣ್ಣ ಪುಟ್ಟ ಮಾತನಾಡಿದರೂ ಒಳಗೆ ಹಾಕಬಹುದು ಅಂತ ಈ ಕಾನೂನು ತರುತ್ತಿದ್ದಾರೆ ಎಮರ್ಜನ್ಸಿ ಅವಧಿಯಲ್ಲೂ ಹೀಗೆ ಇರಲಿಲ್ಲ. ಇದು ಅಘೋಷಿತ ಅಲ್ಲ ಘೋಷಿತ ಎಮ್ರ್ಜೆನ್ಸಿಯಾಗಿದೆ ಎಂದು ಕಿಡಿಕಾರಿದರು. ಈ ಬಗ್ಗೆ ನಾನೂ ರಾಜ್ಯಪಾಲರನ್ನು ಭೇಟಿ ಮಾಡುವೆ, ಅಗತ್ಯ ಬಿದ್ದರೆ ಕಾನೂನು ಹೋರಾಟಕ್ಕೂ ಇಳಿಯಲಾಗುವುದು ಎಂದರು.
ಇದನ್ನೂ ಓದಿ: ವಿಜಯ್ ಹಜಾರೆ ನಾಳೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಸ್ಥಳಾಂತರ
ಕಾನೂನು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ ರಾಜ್ಯದಲ್ಲಿ ಧ್ವೇಷ ರಾಜಕಾರಣ ಮಾಡುತ್ತಿರುವವರ ಕೈಯಲ್ಲಿ ಅಧಿಕಾರ ಇದೆ. ಹಾಗಾಗಿ ಹೊಸ ಕಾನೂನಿನು ಆತಂಕಕಾರಿ ಎನ್ನುತ್ತಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಕುರ್ಚಿ ಕಾದಾಟದಲ್ಲಿ ಮುಳುಗಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ನಾವು ಮಾತ್ರ ಹೇಳುತ್ತಿಲ್ಲ, ಆಡಳಿತ ಪಕ್ಷದ ಶಾಸಕರೇ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಇದರಿಂದ ಆಡಳಿತದ ಮೇಲೆ ದುಷ್ಪರಿಣಾಮ ಆಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೇ ಆ ಪಕ್ಷದ ಹೈಕಮಾಂಡ್ಗೆ ಸ್ವತಃ ಪತ್ರ ಬರೆದಿದ್ದಾರೆ. ಯಾವ ಸರಕಾರ ಸ್ಥಿರ ಇರಲ್ಲವೋ ಸಹಜವಾಗಿಯೇ ಅಭಿವೃದ್ಧಿ ಕುಂಠಿತವಾಗಿದೆ.






















