ಮಾಜಿ ವಿಧಾನಪರಿಷತ್ ಸದಸ್ಯ ಕರಿಯಣ್ಣ ಸಂಗಟಿ ನಿಧನ

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ತನ್ನದೇ ಆದ ಮುದ್ರೆಯನ್ನು ಮೂಡಿಸಿದ್ದ ಮಾಜಿ ವಿಧಾನಪರಿಷತ್ ಸದಸ್ಯ ಕರಿಯಣ್ಣ ಸಂಗಟಿ (61) ಸೋಮವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವು ತಿಂಗಳಿಂದ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೃತರಿಗೆ ಪತ್ನಿ, ಮೂವರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರ ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮ ಯಲಮಗೇರಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ರಾಜಕೀಯ ಜೀವನದ ಪಯಣ: ಕರಿಯಣ್ಣ ಸಂಗಟಿ ಅವರು ವಿದ್ಯಾರ್ಥಿ ಹಂತದಿಂದಲೇ ರಾಜಕೀಯದಲ್ಲಿ … Continue reading ಮಾಜಿ ವಿಧಾನಪರಿಷತ್ ಸದಸ್ಯ ಕರಿಯಣ್ಣ ಸಂಗಟಿ ನಿಧನ