ಕೊಪ್ಪಳ: ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಬಾಲಕರ ಪ್ರಾಥಮಿಕ ಶಾಲೆಯ ಶಿಕ್ಷಕ ಮಹಿಬೂಬಸಾಬ ಕಸಾಬ್ (59) ತರಗತಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಎಂದಿನಂತೆ ಬೆಳಗಿನ ಪ್ರಾರ್ಥನೆ ಮುಗಿಸಿ ಆಂಗ್ಲ ಮಾಧ್ಯಮದ ಒಂದನೇ ತರಗತಿಗೆ ಬೋಧನೆಗಾಗಿ ತೆರಳಿದ್ದಾರೆ. ಈ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡು ನೆಲಕ್ಕೆ ಉರುಳಿದ್ದಾರೆ.
ತಕ್ಷಣ ಎಲ್ಲ ಶಿಕ್ಷಕರು ಓಡಿ ಬಂದು ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸಾವನ್ನಪ್ಪಿದ್ದು ದೃಢಪಟ್ಟಿದೆ. ಶಿಕ್ಷಕನ ಸಾವಿಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗದಲ್ಲಿ ಮೌನ ವಾತಾವರಣ ಉಂಟಾಗಿದೆ.
