ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಮೈಲಾರಿ ಹೋಟೆಲ್ನಲ್ಲಿಂದು ದೋಸೆ ಸವಿದರು.
ಪೊಲೀಸ್ ಇಲಾಖೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಇಲ್ಲಿನ ಪ್ರಸಿದ್ಧ ಮೈಸೂರು ಮೈಲಾರಿ ಹೋಟೆಲ್ನಲ್ಲಿ ದೋಸೆ ಸವಿದರು.
ಈ ವೇಳೆ ಮುಖ್ಯಮಂತ್ರಿಗಳೊಂದಿಗೆ ಸಚಿವರಾದ ಜಿ. ಪರಮೇಶ್ವರ್, ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಹಾಗೂ ಶಾಸಕ ಸಿ.ಸಿ. ಪಾಟೀಲ್ ಸಾಥ್ ನೀಡಿದರು.























