Home Advertisement
Home ನಮ್ಮ ಜಿಲ್ಲೆ ರಾಮನಗರ ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ

ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ

0
119

ರಾಮನಗರ: ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ರಾಮನಗರ ಟೌನ್‌ನ ಪಕ್ಷದ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡು, ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಾಗೂ ಸೀರೆ ಹಂಚುವ ಮೂಲಕ ಚುನಾವಣಾ ಅಕ್ರಮದಲ್ಲಿ ತೊಡಗಿದ್ದು, ಈ ಕುರಿತು ಕೇಂದ್ರ ಚುನಾವಣಾ ಆಯೋಗ ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು