ಉತ್ತರ ಕನ್ನಡ ಜಿಲ್ಲಾ ಪ್ರವಾಸಕ್ಕೆ ಹೋಗುವವರಿಗೆ ಎಚ್ಚರಿಕೆ: ಆರೆಂಜ್ ಅಲರ್ಟ್ ಘೋಷಣೆ

ಕಾರವಾರ: ಜಿಲ್ಲೆಯ ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಂಗಳವಾರ ಬಿಟ್ಟು ಬಿಟ್ಟು ಜೋರು ಮಳೆಯಾಗಿದೆ. ಕಳೆದ ಕೆಲ ದಿನಗಳಿಂದ ಮಳೆ ಇಲ್ಲದೇ ತೀವ್ರ ಬಿಸಿಲಿನ ವಾತಾವರಣ ಕಂಡುಬರುತ್ತಿದ್ದ ಕಾರಣ ಜನ ಕಂಗಾಲಾಗಿದ್ದರು. ಮುಂಗಾರು ಆರಂಭವಾಗಿದ್ದರೂ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಮಳೆಗಾಗಿ ಮುಗಿಲು ನೋಡುವಂತಾಗಿತ್ತು. ಆದರೆ ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಮೋಡಕವಿದ ವಾತಾವರಣ ಮುಂದುವರಿದಿದೆ. ಕಾರವಾರದಲ್ಲಿ ಸೋಮವಾರ ಮುಂಜಾನೆ ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾಗಿದ್ದು, ಬಳಿಕ ಬಿಡುವು ನೀಡಿದ್ದ ಮಳೆ ಪುನಃ … Continue reading ಉತ್ತರ ಕನ್ನಡ ಜಿಲ್ಲಾ ಪ್ರವಾಸಕ್ಕೆ ಹೋಗುವವರಿಗೆ ಎಚ್ಚರಿಕೆ: ಆರೆಂಜ್ ಅಲರ್ಟ್ ಘೋಷಣೆ